ಡೀಸಿ ಕಚೇರಿ ರಸ್ತೆ ಡಂಪಿಂಗ್‌ ಯಾರ್ಡ್‌!


Team Udayavani, Feb 14, 2019, 10:51 AM IST

chikk-2.jpg

ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದಲ್ಲಿ ಹಳೆ ಕಟ್ಟಡಗಳ ತೆರವು ಬಳಿಕ ಉಂಟಾಗುವ ಘನ ತ್ಯಾಜ್ಯ ವಸ್ತುಗಳನ್ನು ಮನೆ ಮಾಲೀಕರು ಹಾಗೂ ಕಾಮಗಾರಿ ಗುತ್ತಿಗೆ ಪಡೆದ ಟ್ರ್ಯಾಕ್ಟರ್‌ ಮಾಲೀಕರು ನಗರದ ಹೊರ ವಲಯದ ಮುಖ್ಯ ರಸ್ತೆಗಳ ಅಕ್ಕಪಕ್ಕದಲ್ಲಿ ರಾತ್ರೋರಾತ್ರಿ ಸುರಿದು ಹೋಗುತ್ತಿರುವುದರಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ರಸ್ತೆ ಇದೀಗ ಡಪಿಂಗ್‌ ರ್ಯಾಡ್‌ ಆಗುತ್ತಿದೆ.

ಹರಸಾಹಸ: ಜಿಲ್ಲಾಡಳಿತ ಭವನಕ್ಕೆ ಕೆಲಸ ಕಾರ್ಯಗಳಿಗೆ ಬರುವ ಸಾರ್ವಜನಿಕರು, ವಾಹನ ಸವಾರರಿಗೆ ತಿಪ್ಪೆ ಗುಂಡಿಗಳಂತೆ ಭಾಸವಾಗುತ್ತಿರುವ ಕಸದ ರಾಶಿಗಳು ಸ್ವಾಗತಿಸುತ್ತಿವೆ. ನಗರದ ಶಿಡ್ಲಘಟ್ಟ ರಸ್ತೆಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೂ ರಸ್ತೆ ಕಿರಿದಾಗಿದ್ದು, ವಾಹನಗಳ ಜನದಟ್ಟಣೆಯಿಂದ ಕಿಷ್ಕಿಂಧೆಯಂತಹ ರಸ್ತೆಯಲ್ಲಿ ವಾಹನ ಸವಾರರು ನಿತ್ಯ ಸಂಚರಿಸುವುದಕ್ಕೆ ಹರಸಾಹಸವೇ ಮಾಡಬೇಕು.

ಜಿಲ್ಲಾಧಿಕಾರಿಗಳ ಕಚೇರಿಗೆ ಹೋಗುವ ರಸ್ತೆಯ ಅಕ್ಕಪಕ್ಕದಲ್ಲಿಯೇ ನಗರದಲ್ಲಿ ಹಳೆ ಕಟ್ಟಡಗಳ ತೆರವು ಕಾರ್ಯಾಚರಣೆಯಲ್ಲಿ ಸಂಗ್ರಹವಾಗುತ್ತಿರುವ ಮಣ್ಣು, ಕಲ್ಲು ಬಂಡೆಗಳು, ಇಟ್ಟಿಗೆ ಮತ್ತಿತರ ಘನ ತ್ಯಾಜ್ಯ ವಸ್ತುಗಳನ್ನು ಟ್ರ್ಯಾಕ್ಟರ್‌ಗಳಲ್ಲಿ ತುಂಬಿಕೊಂಡು ಬಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳುವ ರಸ್ತೆ ಬದಿಗಳಲ್ಲಿ ಸುರಿಯುತ್ತಿರುವುದು ಎದ್ದು ಕಾಣುತ್ತಿದೆ.
 
ಗೊತ್ತಿದ್ದರೂ ತಿರುಗಿ ನೋಡಿಲ್ಲ: ಈ ಹಿಂದೆ ಹಲವು ಬಾರಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ ಜಿಲ್ಲಾಧಿಕಾರಿಗಳು ಸಹ ಇತ್ತಕಡೆ ಗಂಭೀರವಾಗಿ ಗಮನ ಕೊಡುತ್ತಿಲ್ಲ. ನಗರಸಭೆ ಅಧಿಕಾರಿಗಳಿಗೂ ಹಲವು ಬಾರಿ ಗಮನಕ್ಕೆ ತಂದರೂ ಅತ್ತ ಕಡೆಗೆ ತಿರುಗಿ ನೋಡಿಲ್ಲ ಎಂದು ನಗರದ ಸಾರ್ವಜನಿಕರು ಹಾಗೂ ಸುತ್ತಮುತ್ತಲಿನ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಸ್ಥಳೀಯ ನಿವಾಸಿಗಳ ಅಳಲು: ರಸ್ತೆ ಬದಿಯಲ್ಲಿ ಘನ ತ್ಯಾಜ್ಯ ವಸ್ತುಗಳನ್ನು ಸುರಿದು ಹೋಗುತ್ತಿರುವುದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಮೊದಲೇ ರಸ್ತೆ 243 ರಾಷ್ಟ್ರೀಯ ಹೆದ್ದಾರಿ ಅಗಲೀಕರಣಗೊಳ್ಳದೇ ರಸ್ತೆ ಚಿಕ್ಕದಾಗಿದೆ. ಇದೇ ರಸ್ತೆಯಲ್ಲಿ ಮಣ್ಣು ಹಾಗೂ ಹಳೆ ಕಟ್ಟಡಗಳ ಅವಶೇಷಗಳನ್ನು ರಾಶಿ ರಾಶಿ ಎಸೆದು ಹೋಗುವುದರಿಂದ ಇಡೀ ಪ್ರದೇಶ ಅನೈರ್ಮಲ್ಯಕ್ಕೆ ತುತ್ತಾಗುತ್ತಿದೆ ಎಂಬ ಅಳಲು ಸ್ಥಳೀಯ ನಿವಾಸಿಗಳದ್ದಾಗಿದೆ. 

ವಿಪರ್ಯಾಸದ ಸಂಗತಿ ಎಂದರೆ ಪ್ರತಿ ನಿತ್ಯ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದೇ ರಸ್ತೆಯಲ್ಲಿ ಬಂದು ಹೋಗುತ್ತಾರೆ. ಆದರೆ ಈ ಬಗ್ಗೆ ಯಾರು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ನಗರದ ಸರ್‌.ಎಂ.ವಿಶ್ವೇಶ್ವರಯ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ ಪಕ್ಕದಲ್ಲಿ ವಾಸವಾಗಿರುವ ಚಾಮರಾಜಪೇಟೆಯ ನಿವಾಸಿ ರಾಮಚಂದ್ರಪ್ಪ ಬೇಸರ ವ್ಯಕ್ತಪಡಿಸಿದರು.

ಇದೇ ರಸ್ತೆಯಲ್ಲಿ ಸರ್‌ಎಂವಿ ಸ್ಮಾರಕ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಖಾಸಗಿ ಕಾಲೇಜು ಕಾರ್ಯನಿರ್ವಹಿಸುತ್ತಿದೆ. ಗಾರ್ಮೆಂಟ್ಸ್‌ ಕೂಡ ಇದ್ದು, ನಿತ್ಯ ಇದೇ ರಸ್ತೆಯಲ್ಲಿ ನೂರಾರು ಮಹಿಳೆಯರು ನಡೆದುಕೊಂಡು ಹೋಗಬೇಕಿದೆ. ಆದರೆ ರಸ್ತೆ ಬದಿ ಸುರಿದು ಹೋಗಿರುವ ಘನ ತ್ಯಾಜ್ಯ ವಸ್ತುಗಳು ಪಾದಚಾರಿಗಳಿಗೆ ಇನ್ನಿಲ್ಲದ ಕಿರಿಕಿರಿ ಸೃಷ್ಟಿಸುತ್ತಿವೆ.

ಒಟ್ಟಿನಲ್ಲಿ ಜಿಲ್ಲಾಡಳಿತ ಭವನಕ್ಕೆ ತೆರಳುವ ವಾಹನ ಸವಾರರಿಗೆ, ಪಾದಚಾರಿಗಳಿಗೆ ಶಿಡ್ಲಘಟ್ಟ ರಸ್ತೆ ಮುಳ್ಳಿನ ಹಾದಿಯಾಗಿದೆ. ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಮಹಿಳಾ ಪದವಿ ಕಾಲೇಜುವರೆಗೂ ರಾಶಿ ರಾಶಿ ಕಸದಂತೆ ಕಾಣುವ ಘನ ತ್ಯಾಜ್ಯ ವಸ್ತುಗಳು ಹಾಗೂ ಹಳೆ ಕಟ್ಟಡಗಳ ಅವಶೇಷಗಳು ಎಲ್ಲೆಂದರಲ್ಲಿ ಬಿಸಾಡಿ ಹೋಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಕಚೇರಿ ರಸ್ತೆ ಒಂದು ರೀತಿ ಡಂಪಿಂಗ್‌ ಯಾರ್ಡ್‌ ಆಗುತ್ತಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. 

ಯಾರೋ ಮಧ್ಯ ರಾತ್ರಿಯಲ್ಲಿ ಹಳೆ ಕಟ್ಟಡಗಳ ಅವಶೇಷಗಳನ್ನು ಟ್ರ್ಯಾಕ್ಟರ್‌ನಲ್ಲಿ ತುಂಬಿಕೊಂಡು ಬಂದು ರಸ್ತೆ ಅಕ್ಕಪಕ್ಕ ಸುರಿದು ಹೋಗುತ್ತಿರುವುದು ಪತ್ತೆ ಮಾಡುವುದು ನಗರಸಭೆಗೆ ಕಷ್ಟವಾಗಿದೆ. ಈ ಬಗ್ಗೆ ಸೂಕ್ತ ಕ್ರಮ ವಹಿಸಲು ನಗರಸಭೆ ಚಿಂತನೆ ನಡೆಸಲಿದೆ. ರಸ್ತೆ ಬದಿ ಘನ ತ್ಯಾಜ್ಯ ವಸ್ತುಗಳನ್ನು ಸುರಿಯುವುದರಿಂದ ನಗರದ ಪರಿಸರಕ್ಕೆ ಹಾಗೂ ಸೌಂದರ್ಯಕ್ಕೆ ಧಕ್ಕೆಯಾಗಲಿದೆ. ಈ ಬಗ್ಗೆ ನಗರಸಭೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ.
●ಉಮಾಕಾಂತ್‌, ನಗರಸಭೆ ಆಯುಕ್ತರು 

ರಾಶಿಗಳ ಮಧ್ಯೆ ಕೊಳೆತ ನಾಯಿ ಶವ ಘನ ತ್ಯಾಜ್ಯ ವಸ್ತುಗಳ ರಾಶಿಗಳ ಮಧ್ಯೆ ಸತ್ತ ಪ್ರಾಣಿ, ಪಕ್ಷಿಗಳ ಅದರಲ್ಲೂ ನಾಯಿಗಳ ಮೃತದೇಹಗಳನ್ನು ಸಾರ್ವಜನಿಕರು ಎಸೆದು ಹೋಗುತ್ತಿರುವುದ ರಿಂದ ನಿತ್ಯ ಇದೇ ರಸ್ತೆಯಲ್ಲಿ ಸಂಚರಿ ಸುವ ವಾಹನ ಸವಾರರು ಹಾಗೂ ಪಾದಚಾರಿಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಮೂಗು ಮುಚ್ಚಿ ಕೊಂಡು ತಿರುಗಾಡುವ ದುಸ್ಥಿತಿ ನಿರ್ಮಾಣವಾಗಿದೆ. ಆದರೂ ನಗರಸಭೆ ಅಧಿಕಾರಿಗಳು ಸಮಸ್ಯೆಯ ಗಂಭೀರತೆ ಯನ್ನು ಅರಿಯುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

●ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.