ಹಚ್ಚ ಹಸಿರಿನ ಕಾನನ ಮಧ್ಯೆ ವಿರಮಿಸಿದ ಪ್ರೇಮಿಗಳು


Team Udayavani, Feb 15, 2019, 7:32 AM IST

hachcha.jpg

ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಪ್ರೇಮಿಗಳ ದಿನಾಚರಣೆಯದ್ದೇ ಸದ್ದು, ಪ್ರೇಮಿಗಳ ಪಾಲಿಗೆ ಸ್ಪರ್ಗವಾಗಿರುವ ನಂದಿಬೆಟ್ಟ, ಅವುಲುಬೆಟ್ಟ, ಸ್ಕಂದಗಿರಿ, ಕೈಲಾಸಗಿರಿ ಹೀಗೆ ಎಲ್ಲಿ ನೋಡಿದರೂ ಪ್ರೇಮಿಗಳ ಕಲರವ ಗುರುವಾರ ಎದ್ದು ಕಾಣುತ್ತಿತ್ತು. ವಿಶೇಷವಾಗಿ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಲಗ್ಗೆ ಹಾಕಿ ತಮ್ಮದೇ ಲೋಕದಲ್ಲಿ ದಿನವಿಡೀ ವಿರಮಿಸುವ ಮೂಲಕ ಪ್ರೇಮಿಗಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿಕೊಂಡು ದೃಶ್ಯಗಳು ಎಲ್ಲೆಡೆ ಕಂಡು ಬಂತು.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಚಿಕ್ಕಬಳ್ಳಾಪುರದ ಐತಿಹಾಸಿಕ ನಂದಗಿರಿಧಾಮಕ್ಕೆ ಪ್ರೇಮಿಗಳ ದಂಡು ಆಗಮಿಸಿತ್ತು. ಪ್ರೀತಿ, ಪ್ರೇಮದಾಟದಲ್ಲಿ ಮುಳುಗಿರುವ ಕೆಲ ಯುವಕ, ಯುವತಿಯರು ನಂದಿಬೆಟ್ಟಕ್ಕೆ ಆಗಮಿಸಿ ಅಲ್ಲಿನ ಹಚ್ಚ ಹಸಿರಿನಿಂದ ಕೂಡಿರುವ ಪ್ರಾಕೃತಿಕ ಸೌಂದರ್ಯದಲ್ಲಿ ದಿನವಿಡೀ ವಿರಮಿಸಿದರೆ ಮತ್ತೆ ಕೆಲವರು ಸೆಲ್ಫಿ ಖ್ಯಾತಿಯ ಅವುಲುಬೆಟ್ಟಕ್ಕೆ ಆಗಮಿಸಿ ಪರಸ್ಪರ ಸೆಲ್ಫಿ ತೆಗೆದುಕೊಂಡು ಪ್ರೇಮಿಗಳ ದಿನಾಚರಣೆಯನ್ನು ಸಂಭ್ರಮಿಸಿದ ದೃಶ್ಯಗಳು ಕಂಡುಬಂದವು. 

ಸ್ಕಂದಗಿರಿಗೆ ಟ್ರಕ್ಕಿಂಗ್‌: ಜಿಲ್ಲೆಯಲ್ಲಿ ಟ್ರಕ್ಕಿಂಗ್‌ ಪ್ರಿಯರ ಮೋಹಕ ಸೆಲೆಯಾಗಿರುವ ಸ್ಕಂದಗಿರಿ ಬೆಟ್ಟಕ್ಕೂ ಪ್ರೇಮಿಗಳು ಮುಗಿಬಿದ್ದಿದ್ದರು. ನಸುಕಿನಲ್ಲಿಯೆ ಸಂಗಾತಿಗಳೊಂದಿಗೆ ಯುವ ಜೋಡಿಗಳು ಟ್ರಕ್ಕಿಂಗ್‌ ಕೈಗೊಂಡು ಸಂಭ್ರಮಿಸಿದರು. ವಿಶೇಷವಾಗಿ ಬೆಂಗಳೂರಿನಿಂದ ಐಟಿ, ಬಿಟಿ ಟೆಕ್ಕಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

ಬಿಗಿ ಪೊಲೀಸ್‌ ಭದ್ರತೆ: ಪ್ರೇಮಿಗಳ ದಿನಾಚರಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸೇರಿದಂತೆ ನೈತಿಕ ಪೊಲೀಸ್‌ಗಿರಿ ಪ್ರದರ್ಶನ ಆಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾದ್ಯಂತ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು. ವಿಶೇಷವಾಗಿ ನಂದಿ ದೇಗುಲ, ಕೈಲಾಸಗಿರಿ ಹಾಗೂ ಸ್ಕಂದಗಿರಿ ಬೆಟ್ಟಗಳ ಸಮೀಪ ಪೊಲೀಸರು ಹೆಚ್ಚುವರಿ ಬಂದೋಬಸ್ತ್ ಮಾಡಿದ್ದರು.

ದೇಗುಲಗಳಲ್ಲಿ ವಿಶೇಷ ಪೂಜೆ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ, ಗೌರಿಬಿದನೂರು ವಿಧುರಾಶ್ವತ್ಥ, ಬಾಗೇಪಲ್ಲಿ ಗಡಿದಂ ಸೇರಿದಂತೆ ಜಿಲ್ಲೆಯ ಪ್ರಮುಖ ದೇವಾಲಯಗಳಲ್ಲಿ ಪ್ರೇಮಿಗಳ ದಂಡು ನೆರೆದು ದೇವರುಗಳಿಗೆ ಪೂಜೆ, ಅಭಿಷೇಕ ಮಾಡಿಸುವ ಮೂಲಕ ತಮ್ಮ ಇಷ್ಟಾರ್ಥಗಳನ್ನು ಸಿದ್ಧಿಸಿಕೊಂಡರು. ಐತಿಹಾಸಿಕ ನಂದಿಯ ಭೋಗನಂದೀಶ್ವರ, ಚಿಂತಾಮಣಿ ಕೈವಾರದ ಯೋಗಿ ನಾರೇಯಣ, ಕೈಲಾಸಗಿರಿಯ ಗವಿ ಗಂಗಧಾರೇಶ್ವರ ದೇವಾಲಯಕ್ಕೂ ಬೆಳಗ್ಗೆಯಿಂದ ಸಂಜೆಯವರೆಗೂ ಪ್ರೇಮಿಗಳು ಭೇಟಿ ನೀಡಿ ಪೂಜೆ ಸಲ್ಲಿಸಿದ ದೃಶ್ಯಗಳು ಸಾಮಾನ್ಯವಾಗಿತ್ತು.

ಪ್ರೇಮಿಗಳ ದಿನಾಚರಣೆಗೆ ಎಬಿವಿಪಿ ಧಿಕ್ಕಾರ 
ಚಿಕ್ಕಬಳ್ಳಾಪುರ:
ಜಿಲ್ಲಾದ್ಯಂತ ಒಂದೆಡೆ ಪ್ರೇಮಿಗಳು ತಮ್ಮ ದಿನಾಚರಣೆಯ ಸಂಭ್ರಮೋಲ್ಲಾಸದಲ್ಲಿ ತೊಡಗಿದ್ದರೆ, ಮತ್ತೂಂದೆಡೆ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌  ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿನಿಯರು “ನನ್ನ ದೇಶ ನನ್ನ ಪ್ರೇಮ’ ಘೋಷಣೆಯಡಿ ಪ್ರೇಮಿಗಳ ದಿನಕ್ಕೆ ಧಿಕ್ಕಾರ ಕೂಗಿ ಪೊಲೀಸರಿಗೆ ಹಾಗೂ ಸೈನಿಕರಿಗೆ ರûಾ ಬಂಧನ ಕಟ್ಟಿ ಗಮನ ಸೆಳೆದರು.

ನಗರದ ಹೊರ ವಲಯದ ಚದಲುಪುರದಲ್ಲಿರುವ ನಂದಿ ಪೊಲೀಸ್‌ ಠಾಣೆ ಹಾಗೂ ಸೈನಿಕ ಕ್ಯಾಂಪ್‌ನಲ್ಲಿರುವ ರಕ್ಷಣಾ ಇಲಾಖೆ ಅಧಿಕಾರಿಗಳಿಗೆ ರಾಖೀ ಕಟ್ಟಿ ಪ್ರೇಮಿಗಳ ದಿನಾಚರಣೆಗೆ ವಿರೋಧ ವ್ಯಕ್ತಪಡಿಸಿದರು. ಎಬಿವಿಪಿ ವಿದ್ಯಾರ್ಥಿ ಮುಖಂಡ ಮಂಜುನಾಥರೆಡ್ಡಿ ಮಾತನಾಡಿ, ದೇಶಿ ಸಂಸ್ಕೃತಿಯ ಪ್ರತೀಕವಾಗಿ ಆಚರಿಸಲ್ಪಡುವ ಅಸಹ್ಯಕರ ಪ್ರೇಮಿಗಳ ದಿನಾಚಾರಣೆಯನ್ನು ಬದಲಿಸಿ ಈ ದಿನವನ್ನು ದೇಶಪ್ರೇಮ ದಿನಾಚರಣೆಯನ್ನಾಗಿ ಆಚರಿಸಬೇಕಿದೆ ಎಂದರು. 

ವಿದೇಶಿ ಸಂಸ್ಕೃತಿ ಭಾರತೀಯ ಸಂಸ್ಕೃತಿಯನ್ನು ಹಾಳು ಮಾಡುತ್ತಿದೆ. ಯುವಕ, ಯುವತಿಯರು ಜ.1ರ ಹೊಸ ವರ್ಷಾಚಾರಣೆ ಮತ್ತು ಫೆ.14 ರಂದು ಪ್ರೇಮಿಗಳ ದಿನವೆಂದು ತಪ್ಪು ದಾರಿಗೆ ತಳ್ಳಲಾಗುತ್ತಿದೆ. ಇದಕ್ಕೆಲ್ಲಾ ಕಡಿವಾಣ ಹಾಕಲು ಭಾರತೀಯ ಸಂಸ್ಕೃತಿಯಲ್ಲಿ ದೇಶ ಪ್ರೇಮ ದಿನಾಚಾರಣೆಯನ್ನಾಗಿ ಆಚರಿಸಬೇಕೆಂದರು.

ಟಾಪ್ ನ್ಯೂಸ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.