ಕಾಂಗ್ರೆಸ್ನಿಂದ ದೇಶದ ಅಭಿವೃದ್ಧಿ ಅಸಾಧ್ಯ
Team Udayavani, Feb 19, 2019, 7:40 AM IST
ಗೌರಿಬಿದನೂರು: ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್ ಪಕ್ಷ ಆರು ದಶಕ ದೇಶದಲ್ಲಿ ಆಡಳಿತ ನಡೆಸಿದೆ. ಆದರೆ ಅಭಿವೃದ್ಧಿ ಮಾತ್ರ ಶೂನ್ಯ, ಪ್ರಧಾನಿ ನರೇಂದ್ರ ಮೋದಿ ಅವರು 5 ವರ್ಷಗಳ ಆಡಳಿತದಲ್ಲಿ ದೇಶವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯುತ್ತಿದೆ ಎಂದು ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿಶೆಟ್ಟಿ ಹೇಳಿದರು.
ನಗರದ ಶ್ರೀ ರಾಮಲಿಂಗೇಶ್ವರ ದೇವಾಲಯದ ಆವರಣದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಬಿಜೆಪಿ ಮಹಿಳಾ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿ, ದೇಶದ ಕಟ್ಟಕಡೆಯ ವ್ಯಕ್ತಿಗೂ ಸಹ ಸಾಮಾಜಿಕ ನ್ಯಾಯವನ್ನು ಮೋದಿ ಸರ್ಕಾರ ಕೊಡಲಿದೆ. ಬಿಜೆಪಿ ಮಹಿಳೆಯರನ್ನು ಗೌರವಿಸುವ ಪಕ್ಷವಾಗಿದ್ದು,ಮಹತ್ವದ ರಕ್ಷಣಾ ಇಲಾಖೆಯ ಹೊಣೆಯನ್ನು ಮಹಿಳೆಗೆ ಕೊಟ್ಟಿರುವುದೇ ಸಾಕ್ಷಿಯಾಗಿದೆ ಎಂದರು.
ವೋಟ್ ಬ್ಯಾಂಕ್ ರಾಜಕಾರಣ: ಬಿಜೆಪಿ ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣ ಮಾಡಿಕೊಂಡು ಬಂದಿಲ್ಲ, ಜನರ ಮಧ್ಯದಲ್ಲಿ ಬೆರೆತು ಬೆಳೆದು ಬಂದಿರುವ ಪಕ್ಷವಾಗಿದ್ದು, ತನ್ನದೇ ಆದ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಬಂದಿದೆ ಎಂದು ಹೇಳಿದರು.
ಕಣ್ಣೀರು ಒರೆಸುವ ಸಿಎಂ ಬೇಕು: ರಾಜ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಕಣ್ಣೀರು ಸುರಿಸಿಕೊಂಡು ಜನರನ್ನು ಮರಳು ಮಾಡುತ್ತಿದ್ದಾರೆ. ನಮಗೆ ಕಣ್ಣೀರು ಸುರಿಸುವ ಸಿಎಂ ಬೇಡ, ಕಣ್ಣೀರು ಒರೆಸುವ ಸಿಎಂ ಬೇಕು ಎಂದರು.
ಎತ್ತಿನಹೊಳೆ ಭಾಷಣಕ್ಕಷ್ಟೆ: ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ಕ್ಷೇತ್ರ ಇದಾಗಿದ್ದು ಇಂತಹ ಪುಣ್ಯಭೂಮಿಯಲ್ಲಿ ನಾವಿದ್ದೇವೆ ಎಂದು ಹೇಳಿದರು. ಸಂಸದ ವೀರಪ್ಪಮೊಯ್ಲಿಯವರು ಎರಡು ಲೋಕಸಭಾ ಚುನಾವಣೆಯಲ್ಲೂ ಸಹ ಎತ್ತಿನಹೊಳೆ ಯೋಜನೆಯನ್ನು ಮುಂದಿಟ್ಟುಕೊಂಡು ಗೆಲುವು ಸಾಧಿಸಿದರು. ಆದರೆ ಕ್ಷೇತ್ರದ ಅಭಿವೃದ್ಧಿಯೂ ಇಲ್ಲ, ಎತ್ತಿನಹೊಳೆ ನೀರು ಸಹ ಹರಿಯಲಿಲ್ಲ ಎಂದು ಲೇವಡಿ ಮಾಡಿದರು.
ಹಿರಿಯೂರು ಶಾಸಕಿ ಪೂರ್ಣಿಮಾ ಮಾತನಾಡಿದರು. ಮಾಜಿ ಶಾಸಕಿ ಎನ್.ಜ್ಯೋತಿರೆಡ್ಡಿ, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಎನ್.ಎಂ.ರವಿನಾರಾಯಣರೆಡ್ಡಿ, ಬಿಜೆಪಿ ತಾಲೂಕು ಅಧ್ಯಕ್ಷ ವೇಮಾರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿರ್ಮಾಲಾ, ಮುಖಂಡರಾದ ಜಯಲಕ್ಷ್ಮಮ್ಮ, ಮಂಜುಳಾ ಸುರೇಶ್, ಆರ್.ಮುನಿಲಕ್ಷ್ಮಮ್ಮ, ಶೋಭಾ, ಚೈತ್ರಾ, ಗಂಗಲಕ್ಷ್ಮಮ್ಮ, ಸವಿತಾ, ಮೋಹನ್, ನಾರಾಯಣರೆಡ್ಡಿ, ಜಯಣ್ಣ ಇದ್ದರು. ಕಾರ್ಯಕ್ರಮಕ್ಕೂ ಮುನ್ನ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ