ಛತ್ರಪತಿ ಶಿವಾಜಿ ಜಾತ್ಯತೀತ, ಧರ್ಮಾತೀತ ನಾಯಕ


Team Udayavani, Feb 20, 2019, 7:29 AM IST

sivajoi.jpg

ಚಿಕ್ಕಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಛತ್ರಪತಿ ಶಿವಾಜಿ ವಿಶ್ವ ಮಾನವೀಯ ಪ್ರಜ್ಞೆ ಸಾರಿದ ಏಕೈಕ ಅರಸ ಶಿವಾಜಿ ಆಗಿದ್ದು, ಅವರೊಬ್ಬ ಜಾತ್ಯತೀತ ಮತ್ತು ಧರ್ಮಾತೀತ ನಾಯಕರಾಗಿದ್ದರು ಎಂದು ಬೆಂಗಳೂರಿನ ಹಿರಿಯ ಸಾಹಿತಿ ಎಸ್‌.ಜಗನ್ನಾಥ್‌ರಾವ್‌ ಬಹುಳೆ ತಿಳಿಸಿದರು.

ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಗರದ ಡಾ.ಬಿ.ಆರ್‌ ಅಂಬೇಡ್ಕರ್‌ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಛತ್ರಪತಿ ಶಿವಾಜಿ ಜಯಂತ್ಯುತ್ಸವದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.

ತಾಯಿಯೇ ಸ್ಫೂರ್ತಿ: ಶಿವಾಜಿಯು ಅತ್ಯುತ್ತಮ ಆಡಳಿತಗಾರನಾಗಿದ್ದ, ವೀರ, ಶೂರ ಯೋಧನಾಗಿದ್ದ. ಶಿವಾಜಿ ಉತ್ಕೃಷ್ಟವಾದ ಸ್ಥಾನದಲ್ಲಿ ನಿಲ್ಲಕಬೇಕಾದರೆ ಆತನನ್ನು ಪ್ರೇರಣಾ ಶಕ್ತಿಯಾಗಿ ಪ್ರೇರೆಪಿಸಿದ್ದು ತಾಯಿ ಜೀಜಾಬಾಯಿ. ತಾಯಿ ಎಲ್ಲಾ ಸಮಯದಲ್ಲೂ ಶಿವಾಜಿಗೆ ಮಾರ್ಗದರ್ಶನ ನೀಡುತ್ತಿದ್ದಳು. ತಾಯಿಯ ಸ್ಫೂರ್ತಿಯಿಂದಲೇ ಶಿವಾಜಿ ಯಶಸ್ವಿಯಾದ ಎಂದರು. 

ತತ್ವಾದರ್ಶ ಪಾಲಿಸಿ: ಯೋಧನಾಗಿ ಸಮ ಸಮಾಜವನ್ನು ಸೃಷ್ಟಿ ಮಾಡಿದರು. ಶಿವಾಜಿಯ ಆಡಳಿತದಲ್ಲಿ ಮಹಿಳೆಯರಿಗೆ ಹೆಚ್ಚಿನ ಗೌರವ ನೀಡಲಾಗುತ್ತಿತ್ತು. ಶಿವಾಜಿಯ ಜೀವಿತಾವಧಿಯನ್ನು ಈ ಸಂದರ್ಭದಲ್ಲಿ ಸ್ಮರಿಸಿದ ಅವರು, ಸರ್ಕಾರದ ಕೆಲಸ ದೇವರ ಕೆಲಸ ಎಂದು ಹೇಳಲಾಗುತ್ತದೆ. ಅದನ್ನು ಮೊದಲು ಪರಿಪಾಲನೆ ಮಾಡಿದ್ದು ಶಿವಾಜಿ ಮಹಾರಾಜರು. ಇಂತಹ ಮಹಾನ್‌ ನಾಯಕನ ತತ್ವಾದರ್ಶಗಳನ್ನು ಇಂದಿನ ವಿದ್ಯಾರ್ಥಿ ಯುವಪೀಳಿಗೆಗೆ ಪಾಲಿಸಬೇಕಿದೆ ಎಂದರು. 

ಧರ್ಮದ ಸಂಕೋಲೆ: ಶಿವಾಜಿ ಮಹರಾಜರ ತತ್ವಾದರ್ಶಗಳು ಪ್ರಸ್ತುತ ಸಮಾಜಕ್ಕೆ ಅವಶ್ಯಕವಾಗಿದೆ. ವಿಪರ್ಯಾಸ ಎಂದರೆ ಅವರನ್ನು ಧರ್ಮದ ಸಂಕೋಲೆಯಲ್ಲಿ ಬಂಧಿಸುವ ಕೆಲಸ ನಡೆಯುತ್ತಿದೆ. ಸಮಾಜ ಸುಧಾರಕರನ್ನು ಎಂದಿಗೂ ಜಾತಿ, ಧರ್ಮಕ್ಕೆ ಸೀಮಿತಗೊಳಿಸಬಾರದು ಎಂದರು. 

ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಪಂ ಅಧ್ಯಕ್ಷ ಬಿ.ಎಂ.ರಾಮುಸ್ವಾಮಿ, ಛತ್ರಪತಿ ಶಿವಾಜಿ ಪ್ರಸಿದ್ಧ ವೀರ ಯೋಧ, ದಕ್ಷ ಆಡಳಿತಾಧಿಕಾರಿ. ಇಂತಹ ವೀರ ಯೋಧನ ಗುಣಗಳನ್ನು ಇಂದಿನ ಯುವಪೀಳಿಗೆ ತಮ್ಮ ಜೀವದಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು. ದೇಶದ ಇತಿಹಾಸದಲ್ಲಿ ಛತ್ರಪತಿ ಶಿವಾಜಿ ಕೊಡುಗೆ ಅವಿಸ್ಮರಣೀಯವಾದದ್ದು ಎಂದರು.

ಪ್ರತಿಭಾ ಪುರಸ್ಕಾರ: ಕಾರ್ಯಕ್ರಮದಲ್ಲಿ 2018ನೇ ಸಾಲಿನಲ್ಲಿ ಪಿ.ಯು.ಸಿ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಾದ ಅನಸೂಯ, ಹರ್ಷಿತ ಬಾಯಿ, ಅಶೋಕ್‌ ಬಾಯಿ  ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು. ವಿಶೇಷ ಉಪನ್ಯಾಸ ನೀಡಿದ ಸಾಹಿತಿ ಎಸ್‌.ಜಗನ್ನಾಥ್‌ರಾವ್‌ ಬಹುಳೆ ಅವರನ್ನು ಜಿಲ್ಲಾಡಳಿತದ ಪರವಾಗಿ ಸನ್ಮಾನಿಸಲಾಯಿತು. 

ನಗರಸಭೆ ಅಧ್ಯಕ್ಷ‌ ಎಂ.ಮುನಿಕೃಷ್ಣ, ತಹಶೀಲ್ದಾರ್‌ ಕೆ.ನರಸಿಂಹಮೂರ್ತಿ, ನಗರಸಭೆ ಆಯುಕ್ತ ಉಮಾಕಾಂತ್‌, ಸಮುದಾಯದ ರಾಜ್ಯ ಅಧ್ಯಕ್ಷ ಗುರುಮೂರ್ತಿ ಜಾಗÌರ್‌, ಜಿಲ್ಲಾ ಅಧ್ಯಕ್ಷ ಲಕ್ಷ್ಮಣ್‌ ರಾವ್‌,  ನಗರಸಭಾ ಸದಸ್ಯರಾದ ನರಸಿಂಹ ಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ವಿಷಯ ಪರೀಕ್ಷಕ ಆಂಜಿನಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ಉಪನಿರ್ದೇಶಕ ಬಿ.ಎಸ್‌.ವೆಂಕಟಾಚಲಪತಿ, ಸಮುದಾಯದ ಮುಖಂಡರು ಇದ್ದರು. 

ಗಮನ ಸೆಳೆದ ಗೊಲ್ಲಹಳ್ಳಿ ಗಾಯನ: ಛತ್ರಪತಿ ಶಿವಾಜಿ ಜಯಂತಿ ಪ್ರಯುಕ್ತ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಗಾಯನ ಕಚೇರಿ ಗಮನ ಸೆಳೆಯಿತು. ಖ್ಯಾತ ಜನಪದ ಕಲಾವಿದರಾದ ಚಿತ್ರ ಸಾಹಿತಿ ಗೊಲ್ಲಹಳ್ಳಿ ಶಿವಪ್ರಸಾದ್‌ ಹಾಗೂ ಯುವ ಗಾಯಕ ಸ್ವಾರಪಲ್ಲಿ ಚಂದ್ರಶೇಖರ್‌ರವರು ನಡೆಸಿಕೊಟ್ಟ ಗಾಯನ ಕಾರ್ಯಕ್ರಮ ಪ್ರೇಕ್ಷಕರ ಗಮನ ಸೆಳೆಯಿತು. ಶಿವಪ್ರಸಾದ್‌ರವರ ಕಂಠಸಿರಿಯಲ್ಲಿ ಮೂಡಿ ಬಂದ ಕ್ರಾಂತಿಕಾರಿ ಹೋರಾಟದ ಹಾಡುಗಳು, ಜನಪದ ಗೀತೆಗಳು ನೆರೆದಿದ್ದವರನ್ನು ರಂಜಿಸಿದವು.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.