ಸರ್ಕಾರದ ಸೌಲಭ್ಯ ಸದ್ಬಳಕೆಗೆ ಸಲಹೆ
Team Udayavani, Feb 26, 2019, 7:36 AM IST
ಬಾಗೇಪಲ್ಲಿ: ಉಚಿತ ಅನಿಲ ಸಂಪರ್ಕ ಯೋಜನೆಯ ಸೌಲಭ್ಯಗಳನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳುವುದರ ಜತೆಗೆ 3 ಲಕ್ಷ ರೂ. ಜೀವ ವಿಮೆ ಬಾಂಡ್ನ್ನು ಪಡೆದುಕೊಳ್ಳಿ ಎಂದು ಮದ್ಯಪಾನ ಸಂಯಮ ಮಂಡಳಿ ರಾಜ್ಯ ನಿರ್ದೇಶಕ ಟಿ.ಎನ್.ರವಿಚಂದ್ರಾರೆಡ್ಡಿ ತಿಳಿಸಿದರು.
ತಾಲೂಕಿನ ಪಾತಪಾಳ್ಯ ಗ್ರಾಮದಲ್ಲಿ ನಡೆದ ಉಚಿತ ಅನಿಲ ಸಂಪರ್ಕ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗೊರ್ತಪಲ್ಲಿ, ಬಿಳ್ಳೂರು, ಪಾತಪಾಳ್ಯ ಹಾಗೂ ಸೋಮನಾಥಪುರ ಗ್ರಾಪಂ ವ್ಯಾಪ್ತಿಯಲ್ಲಿ ಸರ್ಕಾರದ ವಿವಿಧ ಯೋಜನೆಗಳಲ್ಲಿ ಈಗಾಗಲೇ 3 ಸಾವಿರ ಉಚಿತ ಅನಿಲ ಸಂಪರ್ಕ ವಿತರಣೆ ಮಾಡಿರುವುದು ಸ್ಥಳೀಯ ಶಾಸಕ ಎಸ್.ಎನ್.ಸುಬ್ಟಾರೆಡ್ಡಿ ಅವಧಿಯಲ್ಲಿ ಮಾತ್ರ ಎಂದರು.
ಹೊಗೆ ಮುಕ್ತ ಗ್ರಾಮಗಳನ್ನಾಗಿ ಮಾಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉಚಿತ ಅನಿಲ ಸಂಪರ್ಕ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದೆ. ಹೊಗೆಮುಕ್ತ ಗ್ರಾಮಗಳನ್ನಾಗಿ ಮಾಡುವ ನಮ್ಮೆಲ್ಲರ ಸಂಕ³ಲಕ್ಕೆ ಸ್ಥಳೀಯ ಸಾರ್ವಜನಿಕರ ಸಹಕಾರ ಮುಖ್ಯ ಎಂದರು.
ಸೋಮನಾಥಪುರ ಮತ್ತು ಪಾತಪಾಳ್ಯ ಗ್ರಾಮ ಪಂಚಾಯತಿಯ 70 ಜನ ಫಲಾನುಭವಿಗಳಿಗೆ ಸಿಲಿಂಡರ್, ಸ್ಟೌವ್ ಹಾಗೂ 3 ಲಕ್ಷ ರೂ.ಗಳ ವಿಮೆ ಬಾಂಡ್ಗಳನ್ನು ವಿತರಿಸಲಾಯಿತು. ಗ್ರಾಪಂ ಮಾಜಿ ಅಧ್ಯಕ್ಷ ಕೆ.ವಿ.ವೆಂಕಟರಾಮರೆಡ್ಡಿ, ಗೋಪಾಲರೆಡ್ಡಿ,
ವಿಎಸ್ಎಸ್ಎನ್ ಬ್ಯಾಂಕ್ ಅಧ್ಯಕ್ಷ ಎಸ್.ಎನ್.ರಾಮಿರೆಡ್ಡಿ, ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕ ವಿ.ಪ್ರಭಾಕರ ರೆಡ್ಡಿ, ಮುಖಂಡರಾದ ಚಂದ್ರಮೋಹನ್, ಸೀಗಲಪಲ್ಲಿ ಮದ್ದಿರೆಡ್ಡಿ, ಪಿ.ಎಲ್.ಭೈರಾರೆಡ್ಡಿ, ಇಮ್ರಾನ್ ಬಾಷ, ದಾದಾಬಾಯ್, ಲಕ್ಷ್ಮಿಪತಿ, ನಗುರು ರವಿ, ಸಿ.ಎಂ.ವೆಂಕಟರಾಮರೆಡ್ಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ