ಫ್ಲೋರೊಸಿಸ್‌ ತಡೆಗೆ ಅರಿವು ಅಗತ್ಯ


Team Udayavani, Feb 28, 2019, 10:19 AM IST

chikk-1.jpg

ಚಿಕ್ಕಬಳ್ಳಾಪುರ: ಜಿಲ್ಲೆಯ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಸ್ಥಾಪಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿನ ನೀರನ್ನು ಸಾರ್ವಜನಿಕರು ಕುಡಿಯಲಿಕ್ಕೆ ಮಾತ್ರವಲ್ಲದೇ ಮನೆಗಳಲ್ಲಿ ತಯಾರಿಸುವ ಅಡುಗೆಗೂ ಶುದ್ಧ ನೀರು ಬಳಕೆ ಮಾಡುವ ಮೂಲಕ ಫ್ಲೋರೊಸಿಸ್‌ ತಡೆಗೆ ಅರಿವು ಮೂಡಿಸಬೇಕಿದೆ ಎಂದು ಜಿಪಂ ಅಧ್ಯಕ್ಷ ಎಚ್‌.ವಿ.ಮಂಜುನಾಥ ತಿಳಿಸಿದರು.

ನಗರದ ತಾಪಂ ಸಭಾಂಗಣದಲ್ಲಿ ಬುಧವಾರ ಜಿಪಂ,  ಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಪುಣ್ಯಕೋಟಿ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆ ತುಮಕೂರು ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ನೀರು ಮತ್ತು ನೈರ್ಮಲ್ಯ ಕುರಿತಾದ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಳವಳಕಾರಿ ಸಂಗತಿ: ಸಾರ್ವಜನಿಕರಿಗೆ ಆರೋಗ್ಯದ ದೃಷ್ಟಿಯಿಂದ ಶುದ್ಧ ನೀರು ಒದಗಿಸು ವುದು ಸರ್ಕಾರದ ಆದ್ಯ ಕರ್ತವ್ಯ ವಾಗಿದ್ದು, ಜಿಲ್ಲೆಯ ಮಟ್ಟಿಗೆ ಶುದ್ಧ ಕುಡಿಯುವ ನೀರು ಸಿಗುವುದೇ ಅಪರೂಪ ವಾಗಿದೆ. ಈಗಾಗಲೇ ಜಿಲ್ಲೆ ಯಲ್ಲಿ ಅಂತರ್ಜಲ ಅತಿಯಾದ ಬಳಕೆಯಿಂದ ನೀರಿನಲ್ಲಿ ಅಪಾಯಕಾರಿ ಲವಣಾಂಶಗಳ ಹೆಚ್ಚಳದಿಂದ ಫ್ಲೋರೈಡ್‌ ಅಂಶ ಅಧಿಕವಾಗಿ ಜಿಲ್ಲೆಯ ಬಾಗೇಪಲ್ಲಿ, ಗುಡಿ ಬಂಡೆ, ಗೌರಿಬಿದನೂರು ತಾಲೂಕುಗಳಲ್ಲಿ ಫ್ಲೋರೊಸಿಸ್‌ ಕಾಯಿಲೆ ವಿಪರೀತವಾಗಿ ಕಾಣಿಸಿಕೊಳ್ಳುತ್ತಿರುವುದು ಕಳವಳಕಾರಿ ಸಂಗತಿ ಎಂದರು.

ಅರಿವು ಮೂಡಿಸಲು ಸಲಹೆ: ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಸಾರ್ವಜನಿಕರು ಕುಡಿಯುವುದಕ್ಕೆ ಮಾತ್ರ ಶುದ್ಧ ನೀರು ಬಳಸುವುದರ ಜೊತೆಗೆ ಅಡುಗೆ ತಯಾರಿಸಲು ಶುದ್ಧ ನೀರನ್ನು ಬಳಸುವುದರಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಡೆಯಬಹುದು. ಶುದ್ಧ ಕುಡಿಯುವ
ನೀರಿನ ಘಟಕಗಳ ನೀರನ್ನು ಅಡುಗೆಗೆ ಬಳಸುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಅಧಿಕಾರಿಗಳು ಕ್ರಮ ವಹಿಸಬೇಕೆಂದ ಸಲಹೆ ನೀಡಿದರು.

ನಿಗಾ ವಹಿಸಬೇಕು: ಸೇವನೆ ಮಾಡುವ ಊಟಕ್ಕಿಂತ ಅರ್ಧ ಕಾಯಿಲೆಗಳು ಮನುಷ್ಯನಿಗೆ ನೀರಿನಿಂದ ಬರುತ್ತಿವೆ. ಶುದ್ಧ ಕುಡಿಯುವ ನೀರು ಸೇವನೆ ಆರೋಗ್ಯದ ದೃಷ್ಟಿಯಿಂದ ಮುಖ್ಯವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಪೈಪ್‌ಗ್ಳು ಚರಂಡಿಗಳಲ್ಲಿ ಹಾದು ಹೋಗುವುದರಿಂದ ಶುದ್ಧ
ನೀರಿಗೂ ಕಲುಷಿತ ನೀರು ಸೇರಿ ಕೊಳ್ಳುವ ಸಾಧ್ಯತೆಯು ಇರುತ್ತದೆ. ಗ್ರಾಮೀಣ ಹಾಗೂ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳ ಮೇಲೆ ಗುರುತ್ತರವಾದ ಜವಾಬ್ದಾರಿ ಇದ್ದು, ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಂಪರ್ಕಗಳ ಬಗ್ಗೆ ನಿಗಾವಹಿಸಬೇಕೆಂದರು.

ತಾಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ. ರಾಮುಸ್ವಾಮಿ, ಸ್ಥಾಯಿ ಸಮಿತಿ ಅಧ್ಯಕ್ಷ ತಿರುಮಳಪ್ಪ, ಜಿಪಂ ಉಪ ಕಾರ್ಯದರ್ಶಿ ಟಿ.ಎಂ.ಶಶಿಧರ್‌, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಡಾ.ನಾಗೇಶ್‌ , ತಾಪಂ ಇಒ ಕೆ.ಪಿ.ಸಂಜೀವಪ್ಪ, ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿ ಯಂತರರಾದ ಶಿವಕುಮಾರ್‌ ಲೋಕೂರ್‌, ಜಿಲ್ಲಾ ಪ್ಲೋರೋಸಿಸ್‌ ಸಮಾಲೋಕರಾದ ವಿನೋದ್‌ ಕುಮಾರ್‌, ಜಿಲ್ಲಾ ಪರಿಸರ ನಿಯಂತ್ರಣಾಧಿಕಾರಿ ಎಸ್‌.ಮಧುಸೂದನ್‌ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

ನೀರಿನ ನೈರ್ಮಲ್ಯದ ಕುರಿತು ಅರಿವು ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಜಿಲ್ಲೆಯ ತಾಪಂ ಇಒಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸಹಾಯಕ ಕೃಷಿ ಅಧಿಕಾರಿಗಳು, ತೋಟಗಾರಿಕಾ ಅಧಿಕಾರಿಗಳು ಹಾಗೂ ತಾಲೂಕು ವೈದ್ಯಾಧಿಕಾರಿಗಳು ಭಾಗವಹಿಸಿದ್ದರು. ತುಮಕೂರಿನ ಪುಣ್ಯಕೋಟಿ ಸಮಗ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಡಾ.ಸಿ.ಸಿ.ಪಾವಟೆ ರವರು ನೀರು ಹಾಗೂ ನೈರ್ಮಲ್ಯದ ಕುರಿತು ಉಪನ್ಯಾಸ ನೀಡಿದರು. ಮಧ್ಯಾಹ್ನ ಅಧಿಕಾರಿಗಳ ಹಾಗೂ ತಜ್ಞರು ಸಂವಾದ ನಡೆಸಿ ಗ್ರಾಮೀಣ ಪ್ರದೇಶದಲ್ಲಿ ನೀರು ಹಾಗೂ ನೈರ್ಮಲ್ಯ ಕಾಪಾಡಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.