ಮಕ್ಕಳಿಗೆ ಪ್ರಜಾಪ್ರಭುತದ ಪರಿಕಲ್ಪನೆ ಜಾಗೃತಿ ಅಗತ್ಯ


Team Udayavani, Feb 28, 2019, 10:45 AM IST

chikk-3.jpg

ಚಿಕ್ಕಬಳ್ಳಾಪುರ: ಜಗತ್ತಿಗೆ ಮಾದರಿಯಾಗಿರುವ ದೇಶದ ಪ್ರಜಾಪ್ರಭುತ್ವದ ಬುನಾದಿಯನ್ನು ಬಲ ಪಡಿಸುವ ದಿಸೆಯಲ್ಲಿ ಶಾಲಾ, ಕಾಲೇಜು ಮಕ್ಕಳಲ್ಲಿ ಪ್ರಜಾಪ್ರಭುತ್ವದ ಪರಿಕಲ್ಪನೆ ಬಗ್ಗೆ ಅರಿವು ಮೂಡಿಸುವುದು ಅಗತ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಎಸ್‌.ಎಚ್‌.ಕೋರಡ್ಡಿ ಅಭಿಪ್ರಾಯಪಟ್ಟರು.

 ನಗರದ ಜಿಪಂ ಸಭಾಂಣಗದಲ್ಲಿ ಬುಧವಾರ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಗ್ರಾಮ್‌ ಸಂಘಟನೆಯ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಸಂಸತ್‌ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
 
ದೇಶಕ್ಕೆ ನಾವು ಅರ್ಪಿಸಿಕೊಂಡ ಸಂವಿಧಾನದ ಮೌಲ್ಯಗಳು ಎಂತಹದು, ಆ ಮೌಲ್ಯಗಳನ್ನು ಹೇಗೆ ಎತ್ತಿ ಹಿಡಿಯಬೇಕು ಎಂಬುದರ ಅವಲೋಕನೆ ಅಗತ್ಯವಾಗಿ ಆಗಬೇಕಿದೆ. ಮಕ್ಕಳಂತಹ ಶುದ್ಧ ಮನಸ್ಸಿನ ನಾಯಕರು ಇರುವ ಸಂಸತ್‌ ಇಂದಿನ ದಿನಗಳಲ್ಲಿ ಅಗತ್ಯವಾಗಿದೆ ಎಂದರು.

ಆರೋಗ್ಯ ಕ್ಷೀಣಿಸುತ್ತಿದೆ: ಮಕ್ಕಳ ಕಾರ್ಯಕ್ರಮಗಳಲ್ಲಿ ಮಕ್ಕಳ ಸಂಸತ್‌ ಶ್ರೇಷ್ಠವಾದದು. ಇಂದಿನ ದಿನಗಳಲ್ಲಿ ಸಮಾಜದಲ್ಲಿ ಹೆಚ್ಚು ಹೆಚ್ಚು ಶಿಕ್ಷಣ ಸಂಸ್ಥೆಗಳು ಪ್ರಾರಂಭವಾಗುತ್ತಿದೆ. ಆದರೆ ಗುಣಮಟ್ಟದ ಹಾಗೂ ಮಾನವೀಯ ಶಿಕ್ಷಣ ಸಿಗುವುದು ಕಡಿಮೆ ಆಗುತ್ತಿದೆ. 

ಹಾಗೆಯೇ ಆಸ್ಪತ್ರೆಗಳು ಹೆಚ್ಚಾದಂತೆ ಜನರಿಗೆ ಆರೋಗ್ಯ ಕಡಿಮೆ ಆಗುತ್ತಿದೆ. ನ್ಯಾಯಾಲಯಗಳು, ಪೊಲೀಸ್‌ ಠಾಣೆಗಳು ಹೆಚ್ಚಾದರೂ ನ್ಯಾಯ ಸಿಗುವ ವ್ಯವಸ್ಥೆ ಕಡಿಮೆಯಾಗುತ್ತಿದೆ. ಇವೆಲ್ಲಕ್ಕೂ ಪರಿಹಾರ ಆಗಬೇಕಾದರೆ ಉತ್ತಮ ಆಡಳಿತ ಮತ್ತು ರಾಜ್ಯಾಂಗ, ಕಾರ್ಯಾಂಗ, ನ್ಯಾಯಾಂಗದ ಕ್ರಿಯಾಶೀಲ ಭಾಗವಹಿಸುವಿಕೆ ಮುಖ್ಯವಾಗಿರುತ್ತದೆ ಎಂದರು.

ಪ್ರಜಾಪ್ರಭುತ್ವ ಬಲಗೊಳ್ಳಲು ಸಾಧ್ಯ: ಜಿಪಂ ಅಧ್ಯಕ್ಷ ಎಚ್‌.ವಿ.ಮಂಜುನಾಥ ಮಾತನಾಡಿ, ಮಕ್ಕಳಿಗೆ ಪ್ರಜಾಪ್ರಭುತ್ವದ ಆಧಾರವಾಗಿ ಪ್ರಶ್ನಿಸುವ ಮತ್ತು ಚರ್ಚಿಸುವ ವಾತಾವರಣವನ್ನು ಮಕ್ಕಳ ಸಂಸತ್‌ ನಿರ್ಮಾಣ ಮಾಡಿದೆ. ಪ್ರಜಾಪ್ರಭುತ್ವದ ಅರಿವು ಸಣ್ಣ ವಯಸ್ಸಿನಲ್ಲಿ ಮಕ್ಕಳಿಗೆ ದೊರೆಯುತ್ತಿರುವುದು ಶ್ಲಾಘನೀಯ. ಪ್ರಪಂಚದಲ್ಲಿಯೇ ಭಾರತದ ಪ್ರಜಾಪ್ರಭುತ್ವ ಶ್ರೇಷ್ಠವಾಗಿದ್ದು, ಈ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವುದರಿಂದ ದೇಶದ ಪ್ರಜಾಪ್ರಭುತ್ವ ಇನ್ನಷ್ಟು ಬಲಗೊಳ್ಳಲು ಸಾಧ್ಯ ಎಂದರು.

ಗ್ರಾಮ್‌ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಆರ್‌.ಬಸವರಾಜ್‌ ಮಾತನಾಡಿ, ಮಕ್ಕಳ ಸಂಸತ್‌ ಕಾರ್ಯಕ್ರಮದ ಉದ್ದೇಶ ಮಕ್ಕಳಲ್ಲಿ ಪ್ರಜಾಪ್ರಭುತ್ವದ ಪರಿಕಲ್ಪ ನೆ ಮತ್ತು ಸಾಂವಿಧಾನಿಕ ಸಂಸ್ಥೆಗಳ ಮೌಲ್ಯದ ಬಗ್ಗೆ ಜಾಗೃತಿ ಹಾಗೂ ಆಸಕ್ತಿ ಮೂಡಿಸುವುದು ಅಗತ್ಯ ಎಂದರು.
 
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್‌.ದೇವರಾಜ್‌, ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರುದ್ರಪ್ಪ, ಸುಗಮ್ಯ ಶಿಕ್ಷ ಕಾರ್ಯ ಕ್ರಮದ ಮುಖ್ಯಸ್ಥೆ ಸಿ.ಆರ್‌.ಉಷಾ, ಕಾರ್ಯಕ್ರಮದ ಸಂಯೋಜಕರಾದ ಲಕ್ಷ್ಮೀಕಾಂತ್‌, ಜಿಲ್ಲಾ ಸಂಯೋ ಜಕ ನವೀನ್‌ ಕುಮಾರ್‌, ಮುದಿಗೆರೆ ಗ್ರಾಪಂ ಅಧ್ಯಕ್ಷ ನಾಗಪ್ಪ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಮಡಿವಾಳಪ್ಪ, ಲೋಕೇಶ್‌, ಶಿಕ್ಷಣ ಇಲಾಖೆಯ ಪ್ರತಿನಿಧಿ ರಘುನಾಥರೆಡ್ಡಿ ಇದ್ದರು. 

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.