ಮಕ್ಕಳಿಗೆ ಮಾನವೀಯ ಮೌಲ್ಯ ತಿಳಿಸಿ
Team Udayavani, Mar 1, 2019, 7:13 AM IST
ಚಿಂತಾಮಣಿ: ಯಾವುದೇ ವ್ಯಕ್ತಿ ದೇಶಕ್ಕೆ ದೊರೆಯಾದರೂ ಕೂಡ ತಾಯಿಗೆ ಮಾತ್ರ ಮಗನೇ, ಮಕ್ಕಳಿಗೆ ಚಿಕ್ಕಂದಿನಿಂದಲೇ ತಾಯಿ, ತಂದೆ ಬೆಲೆ ಏನು, ಸಂಸ್ಕೃತಿ, ಸಂಪ್ರದಾಯಗಳು ಹಾಗೂ ಮಾನವೀಯ ಮೌಲ್ಯಗಳ ಬಗ್ಗೆ ಪೋಷಕರು, ಶಿಕ್ಷಕರು ತಿಳಿಸಿಕೊಟ್ಟರೆ ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಲು ಸಾಧ್ಯ ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ವಿ.ಎಂ ನಾರಾಯಣಸ್ವಾಮಿ ತಿಳಿಸಿದರು.
ತಾಲೂಕಿನ ಚಿಲಕಲನೇರ್ಪು ಹೋಬಳಿ ಬರುಡಗುಂಟೆ ಗ್ರಾಮದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ಮಾತೃ ಪೂಜಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾಯಂದರಿಗೆ ಮಾತೃಪೂಜೆ ಸಲ್ಲಿಸುವುದರ ಮೂಲಕ ತಾಯಿ ಬೆಲೆ ಏನು ಎಂದು ಮಕ್ಕಳಿಗೆ ಅರಿವು ಮೂಡಿಸಲು ಮುಖ್ಯ ಶಿಕ್ಷಕ ಚೌಡಪ್ಪನವರು ಮುಂದಾಗಿರುವುದು ಶ್ಲಾಘನೀಯ.
ಜಿಪಂ ಸದಸ್ಯೆ ಕಮಲಮ್ಮ ಮಾತನಾಡಿ, ವಿಜ್ಞಾನ ಇಂದು ಶರವೇಗದಲ್ಲಿ ಬೆಳೆಯುತ್ತಿದ್ದು, ವಿಜ್ಞಾನ ಬೆಳೆದಂತೆ ತಂತ್ರಜ್ಞಾನ ಕೂಡ ಬೆಳೆಯುತ್ತಿದ್ದು, ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಬಡ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದೆ ಎಂದರು.
ಕಾರ್ಯಕ್ರಮಲ್ಲಿ ಸರ್ಕಾರಿ ಶಾಲೆಯ ಎಲ್ಲಾ ಮಕ್ಕಳು ತಮ್ಮ ತಾಯಂದರಿಗೆ ಕಾಲು ತೊಳೆದು ಆರಿಶಿನ ಕುಂಕುಮ, ಹೂವನ್ನಿಟ್ಟು ಪಾದ ಪೂಜೆ ಮಾಡಿದರು. ಶಾಲಾ ಮಕ್ಕಳಿಂದ ವಿಜ್ಞಾನ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭದಲ್ಲಿ ಶಾಲಾ ವತಿಯಿಂದ ಹಲವು ಗಣ್ಯರಿಗೆ ಶಾಲು ಹೊಂದಿಸಿ ಫಲ ತಾಂಬೂಲ ನೀಡಿ ಸನ್ಮಾನಿಸಲಾಯಿತು.
ಜಿಪಂ ಸದಸ್ಯೆ ಕಮಲಮ್ಮ, ಬುರುಡಗುಂಟೆ ಶಾಲೆಯ ಮುಖ್ಯ ಶಿಕ್ಷಕ ಕೆ.ವಿ.ಚೌಡಪ್ಪ, ರಾಜ್ಯ ಕಾರ್ಯದರ್ಶಿ ಚಂದ್ರಶೇಖರ್ ನುಗ್ಲಿ, ಸಹ ಕಾರ್ಯದರ್ಶಿ ಯುವರಾಜ್, ಸಂ.ಕಾರ್ಯದರ್ಶಿ ದಾಮೋಧರ ರೆಡ್ಡಿ, ಜಿಲ್ಲಾಧ್ಯಕ್ಷ ಎ.ನಾರಾಯಣಸ್ವಾಮಿ, ಪ್ರ.ಕಾರ್ಯದರ್ಶಿ ಕೆ.ರವಣಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಜನಾರ್ದನ ರೆಡ್ಡಿ, ರಾಜ್ಯಪರಿಷತ್ ಸದಸ್ಯ ವೆಂಕಟಾಚಲಪತಿ, ತಾಲೂಕು ಅಧ್ಯಕ್ಷ ಅಶೋಕ್ ಕುಮಾರ್, ಕಾರ್ಯದರ್ಶಿ ವಸಂತರೆಡ್ಡಿ, ಉಪಾಧ್ಯಕ್ಷ ಗಂಗುಲಪ್ಪ, ಚಂದ್ರಮ್ಮ, ಸರ್ಕಾರಿ ನೌಕರರ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷ ಶ್ರೀನಿವಾಸ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!