ಸಾಕ್ಷರತೆಯಿಂದ ಜನಜೀವನಮಟ್ಟ ಸುಧಾರಣೆ
Team Udayavani, Mar 9, 2019, 7:31 AM IST
ಬಾಗೇಪಲ್ಲಿ: ಮಹಿಳಾ ಸಬಲೀಕರಣ ಮತ್ತು ಉಳಿತಾಯ ಮನೋಭಾವ ಬೆಳೆಸುವ ಉದ್ದೇಶದಿಂದ ಸ್ಥಾಪಿಸಿರುವ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಸದಸ್ಯರಲ್ಲಿ ಹಲವು ಮಂದಿ ಇನ್ನೂ ಅನಕ್ಷರಸ್ಥರಾಗಿಯೇ ಉಳಿದಿರುತ್ತಾರೆ. ಇವರನ್ನು ಸಾಕ್ಷರರನ್ನಾಗಿ ಮಾಡುವುದು ಮತ್ತು ಆರ್ಥಿಕ ಸಾಕ್ಷರತೆ ಒದಗಿಸುವುದರಿಂದ ಅವರ ಜೀವನ ಮಟ್ಟ ಸುಧಾರಣೆ ಆಗುತ್ತದೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ನಾಜೀಮಾ ಖಾತೂನ್ ತಿಳಿಸಿದರು.
ಗುರುವಾರ ಪಟ್ಟಣದ ಅಂಬೇಡ್ಕರ್ ನಗರದ ಕೊಳಚೆ ಪ್ರದೇಶದಲ್ಲಿ ಜಿಲ್ಲಾ ಲೋಕ ಶಿಕ್ಷಣ ಸಮಿತಿ, ಜಿಪಂ, ತಾಪಂ ಆಶ್ರಯದಲ್ಲಿ ಏರ್ಪಡಿಸಿದ್ದ ಬೋಧಕರ ತರಬೇತಿ ಶಿಬಿರ ಕಾರ್ಯಕ್ರಮವನ್ನು ಉದಾrಟಿಸಿ ಮಾತನಾಡಿದರು. ಡಾ.ನಂಜುಂಡಪ್ಪ ವರದಿಯನ್ವಯ ತಾಲೂಕಿನ ಎಲ್ಲಾ 25 ಗ್ರಾಪಂಗಳಲ್ಲಿ ಸಾಕ್ಷರತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತಾಲೂಕಿನಲ್ಲಿ ಶೇ.70ರಷ್ಟು ಪ್ರಗತಿ ಸಾಧಿಸಲಾಗಿದ್ದು ಉಳಿದ ಶೇ.30ರಷ್ಟು ಅನಕ್ಷರತೆ ಹೋಗಲಾಡಿಸಬೇಕಾಗಿದೆ. ತಾಲೂಕಿನಲ್ಲಿ ಅನೇಕ ಗ್ರಾಪಂ ಸದಸ್ಯರು ಕೂಡ ಅನಕ್ಷರಸ್ಥರಾಗಿದ್ದಾರೆ. ಇಂತಹವರನ್ನು ಗುರುತಿಸಿ ಸಾಕ್ಷರರನ್ನಾಗಿ ಮಾಡಲು ಸಂಕಲ್ಪ ಮಾಡಲಾಗಿದೆ. ಸಾಮಾನ್ಯವಾಗಿ ಪರಿಶಿಷ್ಟ ಜಾತಿ, ಪಂಗಡದ ಸಾಕ್ಷರತಾ ಪ್ರಮಾಣ ಹೆಚ್ಚಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.
ಕಾರ್ಯಕ್ರಮದ ನಿರ್ವಹಣಾಧಿಕಾರಿ ಆರ್.ಸಿ.ರೆಡ್ಡಪ್ಪ ಮಾತನಾಡಿ, ನೀವು ಅನಕ್ಷರಸ್ಥರಾದರೆ ನಿಮ್ಮನ್ನು ಮೋಸ ಮಾಡುವ ಜನರು ಹೆಚ್ಚಾಗಿರುತ್ತಾರೆ.ನೀವು ಅಕ್ಷರಸ್ಥರಾದರೆ ಬ್ಯಾಂಕ್ನಲ್ಲಿ ವ್ಯವಹಾರ ಮಾಡಲು ಜತೆಗೆ ಕಂದಾಯ, ವಿದ್ಯುತ್ ಬಿಲ್ ಪಾವತಿ ಮಾಡಲು ಸಹಾಯವಾಗುತ್ತದೆ. ನೀವು ಹೆಬ್ಬೆಟ್ಟು ಒತ್ತುವುದನ್ನು ಬಿಟ್ಟು ಸಹಿ ಮಾಡಲು ಓದಲು ಬರೆಯಲು ಬಂದರೆ ಸಾಕು ನಿಮ್ಮ ಜೀವನ ಸುಖಮಯವಾಗಲಿದೆ ಎಂದರು.
ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಹನುಮಂತರೆಡ್ಡಿ, ರಾಜ್ಯ ಸಂಪನ್ಮೂಲ ವ್ಯಕ್ತಿ ತ್ರೀಭವನೇಶ್ವರಿ, ತಾಲೂಕು ಸಂಯೋಜಕ ಎನ್.ಶಿವಪ್ಪ,ಶ್ರೇಷ್ಠ ಸ್ವಯಂ ಸೇವಾ ಸಂಸ್ಥೆಯ ಬ್ರಹ್ಮಾನಂದರೆಡ್ಡಿ, ತರಬೇತಿದಾರರಾದ ಗಂಗುಲಪ್ಪ, ಕಾಂತಮ್ಮ, ಕದಿರಪ್ಪ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…