ಪುರಾತನ ಕಾಲುದಾರಿ ಬಲಾಡ್ಯರ ಪಾಲು: ಗ್ರಾಮಸ್ಥರ ಆಕ್ರೋಶ


Team Udayavani, Mar 13, 2019, 7:50 AM IST

puratana.jpg

ಚಿಂತಾಮಣಿ: ತಾಲೂಕಿನ ಮುರುಗಮಲ್ಲ ಹೋಬಳಿ ವೈ.ಕುರುಪಲ್ಲಿಯಿಂದ ಯಗವಕೋಟೆ ಗ್ರಾಮಕ್ಕೆ ತೆರಳಲು ಹಿಂದಿನಿಂದಲೂ ಇಂದಿನವರೆಗೆ ಇದ್ದ ಕಾಲುದಾರಿಯನ್ನು ಕೆಲ ಪ್ರಭಾವಿ ವ್ಯಕ್ತಿಗಳು ದಾರಿಯನ್ನು ಮುಚ್ಚಿಹಾಕಿದ್ದಾರೆ. ಈ ಕುರಿತು ಸರ್ವೆ ಮಾಡಿ ದಾರಿಯನ್ನು ಉಳಿಸಿಕೊಡಿ ಎಂದು ಸಂಬಂಧಪಟ್ಟ ಸರ್ವೆ ಮತ್ತು ಕಂದಾಯ ಅಧಿಕಾರಿಗಳಿಗೆ ಮನವಿ ಮಾಡಿದರೂಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವೈ.ಕುರಪಲ್ಲಿ ಗ್ರಾಮಸ್ಥರು ಆರೋಪಿಸಿದ್ದಾರೆ. 

ದಾರಿ ಇಲ್ಲದಿರುವುದರಿಂದ ತೊಂದರೆ: ಯಗವಕೋಟೆ ಗ್ರಾಮ ಗ್ರಾಪಂ ಕೇಂದ್ರವಾಗಿದ್ದು ಇಲ್ಲಿ ಪ್ರತಿ ಬುಧವಾರ ವಾರದ ಸಂತೆ ನಡೆಯುವುದರಿಂದ ಸುತ್ತಮುತ್ತಲ ಗ್ರಾಮಸ್ಥರು ಸೇರಿದಂತೆ ವೈ.ಕುರಪಲ್ಲಿ ಗ್ರಾಮಸ್ಥರು ಸರಕು ಸೇವೆ, ತರಕಾರಿ ಮತ್ತಿತರ ಸಾಮಗ್ರಿಗಳನ್ನು ಕೊಂಡುಕೊಂಡು ಬರಲು ಅನಾದಿ ಕಾಲದಿಂದಲೂ ಯಗವಕೋಟೆ ಗ್ರಾಮಕ್ಕೆ  ಕಾಲು ದಾರಿಯಲ್ಲೇ ಜನರು ತೆರಳುತ್ತಾರೆ. 

ಪ್ರಯೋಜನವಾಗಿಲ್ಲ: ಕಾಯಿಲೆ ಚಿಕಿತ್ಸೆಗೆ ಆಸ್ಪತ್ರೆಗೆ ತೆರಳುವ ಜನ ಹಾಗೂ ಶಾಲೆಗೆ ಹೋಗುವ ವಿದ್ಯಾರ್ಥಿಗಳು ಇದೇ ಕಾಲುದಾರಿ ಮೂಲಕವೇ ಹೋಗುತ್ತಾರೆ. ಆದರೆ ಈ ಕಾಲುದಾರಿಯನ್ನು ಕೆಲವು ಪ್ರಭಾವಿ ವ್ಯಕ್ತಿಗಳು ಆಕ್ರಮಿಸಿಕೊಂಡು ಮುಚ್ಚಿದ್ದರ ಪರಿಣಾಮ ಜನರು ಪರದಾಡುವಂತಾಗಿದೆ. 

ಕಂಡುಕಾಣದಂತೆ ಇದ್ದಾರೆ: ಗ್ರಾಮಸ್ಥರೆಲ್ಲಾ ಒಂದಾಗಿ ಮನವಿ ಪತ್ರ ಬರೆದು 100 ಹೆಚ್ಚು ಮಂದಿ ಸಹಿ ಹಾಕಿ ದಾರಿಯನ್ನು ಉಳಿಸಿಕೊಡಿ ಎಂದು ತಾಲೂಕು ತಹಶೀಲ್ದಾರ್‌, ಸರ್ವೆ ಅಧಿಕಾರಿಗಳು, ಕಂದಾಯ ವೃತ ನಿರೀಕ್ಷಕರಿಗೆ ಹಾಗೂ ಗ್ರಾಮ ಲೆಕ್ಕಿಗರಿಗೆ ಮನವಿ ಮಾಡಿದರೂ ಕೂಡ ಕ್ರಮ ಕೈಗೊಳ್ಳದ ಅಧಿಕಾರಿಗಳು ಬಲಾಡ್ಯರ ಹಣದ ಆಸೆಗೆ ಒಳಗಾಗಿ ಕಂಡುಕಾಣದಂತೆ ಇದ್ದಾರೆ ಎಂದು ದೂರಿದ್ದಾರೆ. 

ಗ್ರಾಮದ ನಕಾಶೆ ಪರಿಶೀಲಿಸಿ ದಾರಿಯನ್ನು ಅತಿಕ್ರಮಿಸಿಕೊಂಡಿರುವವರಿಂದ ಬಿಡಿಸಿಕೊಡುವಂತೆ ಸಾರ್ವಜನಿಕರು ಕಂದಾಯ ಇಲಾಖೆ ಸಚಿವರ ಆದಿಯಾಗಿ ರಾಜ್ಯಪಾಲರಿಗೆ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ತಹಶೀಲ್ದಾರ್‌ ಮುಖಾಂತರ ದೂರು ನೀಡಿದ್ದು, ಈ ಬಗ್ಗೆ ತಕ್ಷಣವೇ ಅಧಿಕಾರಿಗಳು ಗಮನಹರಿಸಿ ಕೂಡಲೇ ಕ್ರಮ ಕೈಗೊಂಡು ಮುಚ್ಚಿರುವ ಕಾಲುದಾರಿ ತೆರವು ಮಾಡಿಕೊಡಬೇಕೆಂದು ದೂರಿನಲ್ಲಿ ಆಗ್ರಹಿಸಿದ್ದಾರೆ. 

ದೂರಿನಲ್ಲಿ ವೈ.ಕುರುಪಲ್ಲಿ ಗ್ರಾಮಸ್ಥರಾದ ಮುನಿಕೃಷ್ಣ, ಮಂಜು.ಕೆ.ಎಸ್‌, ಸಿಂಧು.ಕೆ.ಎಸ್‌, ಕೃಷ್ಣಾರೆಡ್ಡಿ, ಶ್ರೀನಿವಾಸರೆಡ್ಡಿ, ರಘೂನಾಥರೆಡ್ಡಿ, ವೆಂಕಟೇಶ್‌ರೆಡ್ಡಿ, ಪವಿತ್ರ, ಜೋತ್ಯ, ರತ್ನಮ್ಮ, ಕೆ.ವಿ.ಕೃಷ್ಣಾರೆಡ್ಡಿ ಸೇರಿದಂತೆ ನೂರಾರೂ ಮಂದಿ ಸಾರ್ವಜನಿಕರು ಕಾಲುದಾರಿ ಮಾಡಿಕೊಡುವಂತೆ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರತರ ಹೋರಾಟವನ್ನು ರೂಪಿಸಲಾಗುವುದೆಂದು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.