ಸ್ಥಳ ವಿವಾದ ಇತ್ಯರ್ಥಕ್ಕೆ ಆಗ್ರಹ 


Team Udayavani, Mar 15, 2019, 7:26 AM IST

stala-vi.jpg

ಚಿಂತಾಮಣಿ: ಚೌಡದೇನಹಳ್ಳಿಯ ಗ್ರಾಮದ ದಲಿತ ಮತ್ತು ಸವರ್ಣಿàಯರ ಮಧ್ಯೆ ಸರ್ಕಾರಿ ಜಮೀನಿಗಾಗಿ ಉದ್ಬವಿಸಿದ್ದ ವಿವಾದವನ್ನು ಶೀಘ್ರ ಪರಿಹರಿಸಬೇಕೆಂದು ದಲಿತರು ತಹಶೀಲ್ದಾರ್‌ ವಾಹನವನ್ನು ಅಡ್ಡಗಟ್ಟಿ ಒತ್ತಾಯಿಸಿದ ಪ್ರಸಂಗ ಗುರುವಾರ ನಗರದ ತಾಲೂಕು ಕಚೇರಿ ಮುಂದೆ ನಡೆಯಿತು.

ಪ್ರಕರಣ ಠಾಣೆ ಮೆಟ್ಟಿಲೇರಿತ್ತು: ತಾಲೂಕಿನ ಚೌಡದೇನಹಳ್ಳಿ ಗ್ರಾಮದ ಸರ್ವೆ ನಂ.52 ರಲ್ಲಿ 3 ಎಕರೆ 5 ಗುಂಟೆ ಸರ್ಕಾರಿ ಜಮೀನಿದ್ದು ಈ ಜಮೀನಿಗಾಗಿ ಗ್ರಾಮದ ದಲಿತರು ಮತ್ತು ಸವರ್ಣಿàಯರ ಮಧ್ಯೆ ಹಲವು ತಿಂಗಳುಗಳಿಂದ ವಾದ ವಿವಾದಗಳು ನಡೆದು ಪ್ರಕರಣ ಠಾಣೆ ಮೆಟ್ಟಿಲೇರಿತ್ತು.

ಅಂದಿನ ತಹಶೀಲ್ದಾರ್‌ ಮತ್ತು ಜಿಲ್ಲಾ ಉಪವಿಭಾಗಾಧಿಕಾರಿಗಳು ಚೌಡದೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಸರ್ವೆ ನಂ.52ರ ಜಮೀನನ್ನು ಸರ್ವೇ ಮಾಡಿ ಸರ್ಕಾರಿ ಜಮೀನೆಂದು ಗುರುತಿಸಿ ಸದರಿ ಜಮೀನಿನಲ್ಲಿ ಯಾರು ಯಾವುದೇ ರೀತಿಯ ಕೆಲಸ ಮಾಡಬಾರದು ಹಾಗೂ ಸರ್ಕಾರಿ ಜಮೀನನ್ನು ತಮ್ಮ ವಶಕ್ಕೆ ಪಡೆದುಕೊಳ್ಳುವಂತೆ ತಹಶೀಲ್ದಾರ್‌ ಅವರಿಗೆ ತಿಳಿಸಿದ್ದರು. 

ವಾಹನ ತಡೆದು ಆಕ್ರೋಶ: ಸವರ್ಣಿಯರು ಸದರಿ ಜಮೀನಿನಲ್ಲಿ 60-70 ಗಜ ವಿಸ್ತೀರ್ಣದ ಜಮೀನಿಗೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದು ಅವರಿಗೆ ಇಷ್ಟ ಬಂದ ರೀತಿಯಲ್ಲಿ ಜಮೀನಿನಲ್ಲಿ ಕೆಲಸ ಕಾರ್ಯ ಮಾಡುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ತಹಶೀಲ್ದಾರ್‌ ವಿಶ್ವನಾಥರ ವಾಹನ ತಡೆದು ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳ ತಾರತಮ್ಯ ಧೋರಣೆ: ವಿವಾದಿತ ಸ್ಥಳದಲ್ಲಿ ಯಾರು ಯಾವುದೇ ಕೆಲಸ ಕಾರ್ಯಗಳನ್ನು ಮಾಡಬಾರದೆಂದು ಹಿಂದಿನ ಪ್ರೊಬೇಷನರಿ ಎಸಿ ಅಶೋಕ್‌ ತೇಲಿ ಆದೇಶಿಸಿದ್ದರೂ ಸಹ ವಿವಾದಿತ ಸ್ಥಳದಲ್ಲಿ ದಲಿತರು ಹಾಕಿದ್ದ ಗುಡಿಸಲುಗಳನ್ನು ಕಿತ್ತು ಸವರ್ಣಿàಯರು ವಾಹನ ನಿಲ್ಲಿಸಿ, ದನಕರುಗಳನ್ನು ಕಟ್ಟುತ್ತಿದ್ದರೂ ಅಧಿಕಾರಿಗಳು ಮೌನ ವಹಿಸಿದ್ದಾರೆ. 

ಆದರೆ ಸರ್ಕಾರದಿಂದ ಮಂಜೂರಾಗಿದ್ದ ಮನೆಯನ್ನು ನಿರ್ಮಾಣ ಮಾಡಲು ಮುಂದಾದರೆ ಖುದ್ದು ಅಧಿಕಾರಿಗಳೇ ಸ್ಥಳಕ್ಕೆ ಬಂದು ಮನೆ ಕಾಮಗಾರಿ ನಿಲ್ಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮಸ್ಥರ ಒತ್ತಾಯದ ಮೇರೆಗೆ ಕಚೇರಿಗೆ ಬಂದ ತಹಶೀಲ್ದಾರ್‌ ವಿಶ್ವನಾಥ ರವರು ಚೌಡದೇನಹಳ್ಳಿಯ ಗ್ರಾಮಸ್ಥರು ಬೇಡಿಕೆ ಇಟ್ಟಿರುವ ಜಾಗವು ಸರ್ಕಾರಿ ಜಾಗವಾಗಿದ್ದು, ಪಂಚಾಯ್ತಿಯ ಅಧಿಕಾರಿಗಳ ಕೈ ತಪ್ಪಿನಿಂದ ಆ ಜಾಗವನ್ನು ಗ್ರಾಮಠಾಣ ಎಂದು ಮಂಜೂರು ಮಾಡಲಾಗಿದೆ.

ಈಗಾಗಲೇ ಈ ಕಡತಕ್ಕೆ ಸಂಬಂಧಿಸಿದಂತೆ ಸಿವಿಲ್‌ ಕೋರ್ಟ್‌ನಲ್ಲಿ  ಸ್ಟೇ ತಂದಿದ್ದು ಈ ಪ್ರಕರಣದಲ್ಲಿ ಭಾಗಿಯಾಗಿ ಇದ್ದನ್ನು ಇತ್ಯರ್ಥಗೊಳಿಸಲು ಎಸಿ ಸೂಚನೆಯಂತೆ ಜಾಗವನ್ನು ಯಾರು ಒತ್ತುವರಿ ಮಾಡಿಕೊಂಡಿರುತ್ತಾರೋ ಅವರಿಗೆ ನೋಟಿಸ್‌ ಕಳುಹಿಸಿ ತೆರವುಗೂಳಿಸುವುದಾಗಿ ಭರವಸೆ ನೀಡಿದರು. ಚೌಡದೇನಹಳ್ಳಿಯ ಯುವ ಮುಖಂಡ ನಾಗೇಶ್‌, ಮುನಿರಾಜು, ಮುನಿವೆಂಕಟಪ್ಪ ಇದ್ದರು.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.