ಚುನಾವಣೆ ಬಹಿಷ್ಕಾರ ಮಾಡುವುದಿಲ್ಲ
Team Udayavani, Mar 16, 2019, 7:36 AM IST
ಚಿಂತಾಮಣಿ: ಮತದಾನ ಸಂವಿಧಾನ ನೀಡಿರುವ ಹಕ್ಕು, ಯಾವುದೇ ಕಾರಣಕ್ಕೂ ನಾವು ಲೋಕಸಭೆ ಚುನಾವಣೆಯನ್ನು ಬಹಿಷ್ಕಾರ ಮಾಡುವುದಿಲ್ಲ ಎಂದು ನೆರ್ನಕಲ್ಲು, ಮಡಬಹಳ್ಳಿ, ಮಾದರಕಲ್ಲು ಗ್ರಾಮಸ್ಥರು ತಿಳಿಸಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ನಮ್ಮ ಗ್ರಾಮಗಳ ಬಳಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ನಿಲ್ಲಿಸದಿದ್ದರೆ ಚುನಾವಣೆ ಬಹಿಷ್ಕರಿಸುತ್ತೇವೆ ಕೆಲ ಮುಖಂಡರು ಗ್ರಾಮಸ್ಥರ ಜೊತೆ ಯಾವುದೆ ರೀತಿಯಲ್ಲಿ ಚರ್ಚೆ ಮಾಡದೆ ಇಲ್ಲಸಲ್ಲದ ಹೇಳಿಕೆ ನೀಡಿ ಗ್ರಾಮಸ್ಥರನ್ನು ಮರಳು ಮಾಡಿದ್ದಾರೆ. ನೆರ್ನಕಲ್ಲು, ಮಡಬಹಳ್ಳಿ ಹಾಗೂ ಮಾದರ ಕಲ್ಲು ಗ್ರಾಮಸ್ಥರು ಮತದಾನ ಮಾಡಲಿದ್ದಾರೆ ಎಂದು ಸ್ಪಷ್ಟನೆ ನೀಡಿದರು.
ಶುಕ್ರವಾರ ಪತ್ರಿಕೆಯೊಂದಿಗೆ ಪೆರಮಾಚನಹಳ್ಳಿ ಗ್ರಾಪಂ ಸದಸ್ಯ ಶ್ಯಾಮೇಗೌಡ, ಮಡಬಹಳ್ಳಿಯ ಹಿರಿಯ ಮುಖಂಡ ಕೆ.ವಿ.ವೆಂಕಟೇಶ್ ಮೂರ್ತಿ ನೆತೃತ್ವದಲ್ಲಿ ಹಲವು ಗ್ರಾಮಸ್ಥರು ಮಾತನಾಡಿ, ಕಲ್ಲು ಗಣಿಗಾರಿಕೆ ವಿರುದ್ಧ ಆಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಆದರ ಕಲ್ಲು ಗಣಿಗಾರಿಕೆಯು ಕಾನೂನು ಬದ್ಧವಾಗಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಆದ್ದರಿಂದ ಚುನಾವಣೆ ಬಹಿಷ್ಕಾರ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಗ್ರಾಮದ ಕೆಲ ಮುಖಂಡರು ಗ್ರಾಮಸ್ಥರಿಂದ ಯಾವುದೇ ಅಭಿಪ್ರಾಯ ಪಡೆಯದೆ ಕಲ್ಲು ಗಣಿಗಾರಿಕೆಯ ಮಾಲೀಕರಿಂದ ಹಣ ವಸೂಲಿ ಮಾಡುವ ನೆಪದಲ್ಲಿ ಚುನಾವಣೆ ಬಹಿಷ್ಕಾರ ಮಾಡುತ್ತೇವೆ ಎಂದು ಇಲ್ಲಸಲ್ಲದ ಹೇಳಿಕೆ ನೀಡಿರುವುದು ಸರಿಯಲ್ಲ ಎಂದರು. ಕೃಷಿಕ ಸಮಾಜದ ನಿರ್ದೇಶಕ ಕೆ.ವಿ.ವೆಂಕಟೇಶ್ ಮೂರ್ತಿ, ಆನಂದ, ಕರವೇ ಜಿಲ್ಲಾ ಕಾರ್ಯದರ್ಶಿ ಅಮರನಾಥ್, ನಾರಾಯಣಸ್ವಾಮಿ, ಮಂಜುನಾಥ ಸೇರಿದಂತೆ ಹಲವು ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ