ಸಂಸದ ಮೊಯ್ಲಿಗೆ ನಿಜ ಹೇಳುವ ಅಭ್ಯಾಸ ಇಲ್ಲ


Team Udayavani, Mar 17, 2019, 7:43 AM IST

samsada.jpg

ಚಿಕ್ಕಬಳ್ಳಾಪುರ: ಎರಡು ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಗೊಂಡಿರುವ ಡಾ.ಎಂ.ವೀರಪ್ಪ ಮೊಯ್ಲಿಗೆ ನಿಜ ಹೇಳುವ ಅಭ್ಯಾಸ ಇಲ್ಲ. ಅವರು ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಾದರೂ ಏನು?

ಅವರೇ ಸೃಷ್ಟಿಸಿದ ಎತ್ತಿನಹೊಳೆ ಯೋಜನೆ 10 ವರ್ಷ ಕಳೆದರೂ ಈ ಭಾಗಕ್ಕೆ ನೀರು ಹರಿಸಲು ಅವರಿಂದ ಸಾಧ್ಯವಾಗಲಿಲ್ಲ ಎಂದು ಸಿಪಿಎಂ ಪಕ್ಷದ ಮಾಜಿ ಶಾಸಕ ಬಾಗೇಪಲ್ಲಿ ಜಿ.ವಿ.ಶ್ರೀರಾಮರೆಡ್ಡಿ ಟೀಕಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಿಪಿಎಂ ಪಕ್ಷ ಈ ಬಾರಿ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತಿದೆ ಎಂದು ತಿಳಿಸಿದರು. 

ದಾರಿ ತಪ್ಪಿದ ಹೋರಾಟ: ಅವಿಭಜಿತ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಶ್ವತ ನೀರಾವರಿ ಹೋರಾಟವನ್ನು ಮೊಟ್ಟ ಮೊದಲ ಬಾರಿಗೆ ಆರಂಭಿಸಿದ್ದು ಸಿಪಿಎಂ ಪಕ್ಷ. ಆದರೆ ಇಂದು ಕೆಲವರು ಸ್ವಾರ್ಥಕ್ಕಾಗಿ ನೀರಾವರಿ ಹೋರಾಟವನ್ನು ದಿಕ್ಕು ತಪ್ಪಿಸಿದ ಪರಿಣಾಮ ಹೋರಾಟ ಯಶಸ್ಸು ಕಾಣಲಿಲ್ಲ. 

ಈ ಭಾಗಕ್ಕೆ ಶಾಶ್ವತ ನೀರಾವರಿ ಬರಬೇಕಾದರೆ ಡಾ.ಪರಮಶಿವಯ್ಯ ವರದಿ ಆಧಾರಿತ ಸಮಗ್ರ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಬೇಕೆಂದು ಹೋರಾಟ ನಡೆಸಿ ಬೆಂಗಳೂರಿಗೆ ಪಾದಯಾತ್ರೆ ನಡೆಸಿದೆವು. ಅಂದಿನ ಹೋರಾಟಕ್ಕೆ ಮಣಿದು ಮುಖ್ಯಮಂತ್ರಿಯಾಗಿದ್ದ ಎಸ್‌.ಎಂ.ಕೃಷ್ಣ ಯೋಜನೆಯ ಸಾಧಕ ಬಾಧಕಗಳ ಬಗ್ಗೆ ಸರ್ವೆ ಮಾಡಿಸಿದರು. 

ಆದರೆ ಬಳಿಕ ಬಂದ ಸರ್ಕಾರಗಳು ಪರಮಶಿವಯ್ಯ ವರದಿಯ°ನು ಮೂಲೆಗುಂಪು ಮಾಡಿ ಈ ಭಾಗಕ್ಕೆ ನೀರಾವರಿ ದಾದ ತೀರಿಸಲಾಗದ ಎತ್ತಿನಹೊಳೆ, ಹೆಬ್ಟಾಳ, ನಾಗವಾರ ಹಾಗೂ ಕೆ.ಸಿ. ವ್ಯಾಲಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದಾರೆ. ಎತ್ತಿನಹೊಳೆ ಯೋಜನೆ ಈ ಭಾಗಕ್ಕೆ ಹನಿ ನೀರು ಕೊಡಲು ಸಾಧ್ಯವಿಲ್ಲ. ಯೋಜನೆಯಡಿ ಪೈಪ್‌ಲೈನ್‌ ಕಾಮಗಾರಿ ನಡೆಯುತ್ತಿರಬಹುದು. ಆದರೆ ಹರಿಯುವ ನೀರನ್ನು ಈ ಭಾಗಕ್ಕೆ ಹರಿಸಲು ಸಾಧ್ಯವಿಲ್ಲ ಎಂದರು. 

ಪಶ್ಚಿಮ ಘಟ್ಟಗಳಲ್ಲಿ ಮಳೆಗಾಲದಲ್ಲಿ ಮಾತ್ರ ನೀರು ಹರಿಸಬಹುದು. ಅದು ಕೇವಲ 10 ಟಿಎಂಸಿ ನೀರು ಮಾತ್ರ ಲಭ್ಯವಾಗುತ್ತದೆ. ಆದರೆ ಯೋಜನೆಯಲ್ಲಿ 24 ಟಿಎಂಸಿ ನೀರು ಸಿಗುತ್ತದೆ ಎಂದು ಅವೈಜ್ಞಾನಿಕವಾಗಿ ಹೇಳಲಾಗುತ್ತಿದೆ. ಎತ್ತಿನಹೊಳ ಯೋಜನೆ ಹೆಸರಿನಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ದೂರಿದರು. 

ಸರ್ಕಾರಗಳು ಕೇವಲ ಪೈಪ್‌ ಲಾಬಿಗೆ ಮಣಿದು ಹೆಚ್‌.ಎನ್‌, ಕೆ.ಸಿ.ವ್ಯಾಲಿ ಹಾಗೂ ಎತ್ತಿನಹೊಳೆ ಯೋಜನೆಗಳನ್ನು ರೂಪಿಸಲಾಗಿದೆ. ಈ ಮೂರು ಯೋಜನೆಗಳಿಂದ ಮುಕ್ಕಾಲು ಭಾಗ ನೀರು ಕೂಡ ಈ ಭಾಗಕ್ಕೆ ಬರುವುದಿಲ್ಲ. ಈ ಯೋಜನೆಗಳಿಂದ ಈ ಭಾಗದ ಶಾಶ್ವತವಾದ ನೀರಾವರಿ ಸಮಸ್ಯೆ ಬಗೆಹರಿಯುವುದಿಲ್ಲ.

ಡಾ.ಪರಮಶಿವಯ್ಯ ಯೋಜನೆ ಅನುಷ್ಠಾನಕ್ಕೆ ತಂದರೆ ಮಾತ್ರ ಈ ಭಾಗಕ್ಕೆ ನೀರು ಸಿಗಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಗುಡಿಬಂಡೆ ಜಯರಾಮರೆಡ್ಡಿ, ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ಚೆನ್ನರಾಯಪ್ಪ, ಬಿ.ಎನ್‌.ಮುನಿಕೃಷ್ಣಪ್ಪ, ಜೆಸಿಬಿ ಮಂಜುನಾಥ, ಬಾಗೇಪಲ್ಲಿ ಅಕ್ರಂಪಾಷ, ಗುಡಿಬಂಡೆ ಎಚ್‌.ಪಿ.ಲಕ್ಷ್ಮೀನಾರಾಯಣರೆಡ್ಡಿ ಇದ್ದರು. 

ಮಾ.25 ರಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಸಿಪಿಎಂ ಪಕ್ಷದ ಅಭ್ಯರ್ಥಿಯಾಗಿ ಸಿಐಟಿಯು ರಾಜ್ಯಾಧ್ಯಕ್ಷೆ ಎಸ್‌.ವರಲಕ್ಷ್ಮೀ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಈ ಭಾಗಕ್ಕೆ ಡಾ.ಪರಮಶಿವಯ್ಯ ವರದಿ ಆಧಾರಿತ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. 
-ಜಿ.ವಿ.ಶ್ರೀರಾಮರೆಡ್ಡಿ, ಮಾಜಿ ಶಾಸಕ 

ಟಾಪ್ ನ್ಯೂಸ್

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.