ತಾಲೂಕಿನಲ್ಲಿ ಮೇವಿಗೆ ತೀವ್ರ ಬರ


Team Udayavani, Mar 23, 2019, 7:37 AM IST

tallukina.jpg

ಗೌರಿಬಿದನೂರು: ತಾಲೂಕಿನಲ್ಲಿ ತೀವ್ರ ಬರಗಾಲದಿಂದ ನೀರಿನ ಸಮಸ್ಯೆ ಉಂಟಾಗಿದ್ದು, ಕುಡಿಯುವ ನೀರಿಗೆ ಮಾತ್ರವಲ್ಲದೇ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದೆ. ªಜಾನುವಾರುಗಳನ್ನು ಪೋಷಿಸಲು ಸಾಧ್ಯವಾಗದೆ ರೈತರು ಜಾತ್ರೆ ಮತ್ತು ಸಂತೆಗಳಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡಬೇಕಾದ ಪರಿಸ್ಥಿತಿ ಬಂದೊದಗಿದೆ. 

ಮೇವು ಸಿಗುತ್ತಿಲ್ಲ: ಬಹುತೇಕ ಕೊಳವೆ ಬಾವಿಗಳು ಬತ್ತಿ ಹೋಗಿವೆ. ಮೇವಿಗೂ ತತ್ವಾರ ಎದುರಾಗಿದೆ. ಪ್ರತಿ ವರ್ಷ ಬೇಸಿಗೆ ಸಮಯದಲ್ಲಿ ಸರ್ಕಾರವು ಎಚ್ಚೆತ್ತುಕೊಂಡು ಮೇವಿನ ಸಮಸ್ಯೆಗೆ ಸ್ಪಂದಿಸಲು ಜಿಲ್ಲಾಡಳಿತದ ಮೂಲಕ ಮೇವು ಬ್ಯಾಂಕ್‌ ಸ್ಥಾಪಿಸಿ ಬೇಡಿಕೆಗೆ ತಕ್ಕಂತೆ ಮೇವನ್ನು ಪಶು ಇಲಾಖೆ ಮುಖಾಂತರ ರೈತರಿಗೆ ಒದಗಿಸುತ್ತಿತ್ತು. 

ಆದರೆ ಕಳೆದ 2-3 ತಿಂಗಳಿನಿಂದ ಮೇವಿಗೆ ತೀವ್ರ ಬೇಡಿಕೆಯುಂಟಾಗಿದ್ದು, 2-3 ಸಾವಿರ ರೂ. ಇದ್ದ ಒಂದು ಟ್ರ್ಯಾಕ್ಟರ್‌ ಜೋಳದ ಮೇವು 7ರಿಂದ 9 ಸಾವಿರ ರೂ. ಆಗಿದ್ದು, ರಾಗಿಯ ತಾಳು ಒಂದು ಟ್ರ್ಯಾಕ್ಟರ್‌ಗೆ 14 ಸಾವಿರ ರೂ. ಆಗಿದ್ದು, ಇಷ್ಟೊಂದು ಹಣ ನೀಡಲು ಸಿದ್ಧರಿದ್ದರೂ ಮೇವು ಸಿಗುತ್ತಿಲ್ಲ. 

ಅರ್ಧಬೆಲೆಗೆ ಮಾರಾಟ: ಮೇವಿಗಾಗಿ ತುಮಕೂರು, ಮಧುಗಿರಿ ಹಾಗೂ ಕೊರಟಗೆರೆ ಹಾಗೂ ಆಂಧ್ರದಲ್ಲಿ ಹೆಚ್ಚಾಗಿ ಸಿಗುವ ಕಡಲೆ ಕಾಯಿಯ ಕಗ್ಗು (ಸೊಪ್ಪು) ಒಂದು ಟ್ರ್ಯಾಕ್ಟರ್‌ಗೆ 16 ಸಾವಿರ ರೂ. ಬೆಲೆಯಿದ್ದು, ಇಷ್ಟೊಂದು ಬೆಲೆ ಕೊಟ್ಟು ಖರೀದಿಸಿ ಕಟಾವು, ಸಾಗಣೆ, ಬಣವೆ ಹಾಕುವ ವೆಚ್ಚ, ಕುಡಿಯುವ ನೀರಿನ ಸಮಸ್ಯೆ ಇವೆಲ್ಲಾ ನಷ್ಟವನ್ನು ಯೋಚಿಸುವ ರೈತರು, ಜಾನುವಾರುಗಳನ್ನು ನಿರ್ವಹಿಸಲು ಸಾಧ್ಯವಾಗದೇ ಜಿಲ್ಲೆಯ ಚಿಂತಾಮಣಿ ಜಾನುವಾರು ಸಂತೆ ಹಾಗೂ ಜಾತ್ರೆಗಳಲ್ಲಿ ಹಾಗೂ ದಲ್ಲಾಳಿಗಳ ಮೂಲಕ ಅರ್ಧಬೆಲೆಗೆ ಮಾರಾಟ ಮಾಡುತ್ತಿದ್ದಾರೆ. 

ಇಂತಹ ಸಂಕಷ್ಟದಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಂಡು ಮೇವು ಖರೀದಿಸಿ ಮೇವು ಬ್ಯಾಂಕ್‌ ಸ್ಥಾಪಿಸಿ ತೀವ್ರ ಸಂಕಷ್ಟದಲ್ಲಿರುವ ರೈತರಿಗೆ ಮೇವನ್ನು ವಿತರಿಸಬೇಕೆಂದು ರೈತರು ಒತ್ತಾಯಿಸಿದ್ದಾರೆ. 

ರೈತರಿಂದ ಲಿಖಿತವಾಗಿ ಮೇವು ಬೇಕೆಂಬ ಬೇಡಿಕೆ ಅರ್ಜಿಗಳು ಬಂದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಮೇವಿನ ವ್ಯವಸ್ಥೆ ಮಾಡಲಾಗುವುದು.
-ಮಧುರನಾಥರೆಡ್ಡಿ, ಉಪನಿರ್ದೇಶಕರು ಪಶುವೈದ್ಯ ಇಲಾಖೆ ಚಿಕ್ಕಬಳ್ಳಾಪುರ

ಸರ್ಕಾರ ಮೇವು ಬೆಳೆದುಕೊಳ್ಳಲು ನೀರಿನ ಅನುಕೂಲವಿರುವ ರೈತರಿಗಾಗಿ ಸಮೃದ್ಧ ಮೇವು ಗೋವುಗಳ ನಲಿವು ಯೋಜನೆಯನ್ನು ಜಾರಿಗೆ ತಂದಿದ್ದು, ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸ್ವೀಕರಿಸುತ್ತಿದ್ದು, ಪ್ರತಿ ರೈತರಿಗೆ 5 ಸಾವಿರ ರೂ. ನೀಡಲಿದೆ. ಈಗಾಗಲೇ ತಾಲೂಕಿನಲ್ಲಿ 173 ರೈತರಿಂದ 162 ಎಕರೆ ಬೀಜಕ್ಕಾಗಿ ಅರ್ಜಿ ಬಂದಿದ್ದು, ಅನುಷ್ಠಾನಗೊಳಿಸುತ್ತಿದ್ದೇವೆ.  
-ಡಾ.ಮಾರುತಿ, ಸಹಾಯಕ ನಿರ್ದೇಶಕರು ಪಶುವೈದ್ಯ ಇಲಾಖೆ ಗೌರಿಬಿದನೂರು 

ಪ್ರತಿ ವರ್ಷದಂತೆ ಈ ವರ್ಷವೂ ಸರ್ಕಾರವೇ ಮುಂದೆ ಬಂದು ಮೇವಿನ ವ್ಯವಸ್ಥೆ ಮಾಡಬೇಕಿತ್ತು. ಆದರೆ  ಮೇವಿನ ವ್ಯವಸ್ಥೆಗೆ ರೈತರಿಂದ ಅರ್ಜಿ ಬರುವವರೆಗೆ ಪಶುಸಂಂಗೋಪನೆ ಇಲಾಖೆ ಅಧಿಕಾರಿಗಳು ಕಾಯುತ್ತಿರುವುದು ವಿಪರ್ಯಾಸ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮೇವು ಖರೀದಿ ನಂತರ ವಿತರಣೆ ಮಾಡುತ್ತೇವೆ ಹೇಳುತ್ತಿರುವುದು ಅಚ್ಚರಿ ಮೂಡಿಸಿದೆ. ಕೂಡಲೇ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. 
-ಆನಂದರೆಡ್ಡಿ, ಪ್ರಗತಿಪರ ರೈತರ ಚೀಗಟಗೆರೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.