ತೈಲೋತ್ಪನ್ನ ಬೆಲೆ ಹೆಚ್ಚಳ ಖಂಡಿಸಿ 3 ವಿವಿಧ ಸಂಘಟನೆಗಳ ಪ್ರತಿಭಟನೆ


Team Udayavani, Jun 25, 2020, 10:11 AM IST

ತೈಲೋತ್ಪನ್ನ ಬೆಲೆ ಹೆಚ್ಚಳ ಖಂಡಿಸಿ 3 ವಿವಿಧ ಸಂಘಟನೆಗಳ ಪ್ರತಿಭಟನೆ

ಹುಬ್ಬಳ್ಳಿ: ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಹೆಚ್ಚಳ ವಿರೋಧಿಸಿ ವಿವಿಧ ಸಂಘಟನೆಗಳಿಂದ ಇಲ್ಲಿನ ಮಿನಿವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಸಿಐಟಿಯು, ಎಐಟಿಯುಸಿ ಮತ್ತು ಐಎನ್‌ಟಿಯುಸಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಬುಧವಾರ ತಹಶೀಲ್ದಾರ್‌ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಕಳೆದ 15 ದಿನಗಳಿಂದ 7.92ರೂ. ಪೆಟ್ರೋಲ್‌ ಹಾಗೂ 8.88 ರೂ.ಡಿಸೇಲ್‌ ದರ ಏರಿಕೆಯಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಸಾಕಷ್ಟು ಪ್ರಮಾಣದಲ್ಲಿ ಇಳಿಕೆಯಾಗಿದ್ದರೂ ದೇಶದಲ್ಲಿ ಮಾತ್ರ ದರ ನಿತ್ಯ ಏರಿಕೆಯಾಗುತ್ತಿದೆ. ಕೇಂದ್ರ ಸರಕಾರ ತನ್ನ ಆದಾಯ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಹೆಚ್ಚಿನ ತೆರಿಗೆ ವಿಧಿಸಿರುವುದು ಪ್ರಮುಖ ಕಾರಣವಾಗಿದ್ದು, ಕೂಡಲೇ ತೆರಿಗೆ ಸಂಪೂರ್ಣ ಕಡಿತಗೊಳಿಸಬೇಕೆಂದು ಒತ್ತಾಯಿಸಿದರು.

ಕೇಂದ್ರ ಸರಕಾರದ ಮಹಾಮಾರಿ ಕೋವಿಡ್ ನಿಯಂತ್ರಣದಲ್ಲಿ ಏಕಪಕ್ಷೀಯ ಹಾಗೂ ಅಯೋಜಿತ ಕ್ರಮಗಳಿಂದ ಜನರ ಸಂಕಷ್ಟಗಳು ಹೆಚ್ಚಲು ಕಾರಣವಾಗಿದೆ. ಕಳೆದ 3 ತಿಂಗಳಿಂದ ಕೋವಿಡ್‌-19 ದಾಳಿಯಿಂದ ಜನ ತತ್ತರಿಸಿದ್ದು, ಲಾಕಡೌನ್‌ನಿಂದ ಕೋಟ್ಯಂತರ ಜನ ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದಾರೆ. ಜನರು ಆರ್ಥಿಕ ಸಂಕಷ್ಟದಿಂದ ನಲುಗಿರುವ ಸಂದರ್ಭದಲ್ಲಿ ಇಂಧನ ಬೆಲೆ ಹೆಚ್ಚಳವಾಗುವ ಮೂಲಕ ಜೀವನಾವಶ್ಯಕ ವಸ್ತುಗಳ ಬೆಲೆ ಹೆಚ್ಚಳವಾಗಿದೆ. ಇದರಿಂದ ಜನರು ಮತ್ತಷ್ಟು ಸಮಸ್ಯೆಗೆ ಸಿಲುಕಿದಂತಾಗಿದೆ. ಜನರ ಸಂಕಷ್ಟಕ್ಕೆ ಸ್ಪಂದಿಸಬೇಕಾದ ಸರಕಾರಗಳು ಜನರ ಸುಲಿಗೆಗೆ ಮುಂದಾಗಿದೆ ಎಂದು ಆರೋಪಿಸಿದರು.

ಇಂಧನ ಬೆಲೆ ಹೆಚ್ಚಳದಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಲಿವೆ ಎನ್ನುವ ಕನಿಷ್ಠ ಪರಿಜ್ಞಾನ ಕೇಂದ್ರ ಸರಕಾರಕ್ಕೆ ಇಲ್ಲದಂತಾಗಿದೆ. ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವ ಬದಲು ಶ್ರೀಮಂತರ ಸಂಪತ್ತಿನ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಿ ಬೊಕ್ಕಸ ತುಂಬಿಕೊಳ್ಳುವ ಕೆಲಸ ಮಾಡಲಿ. ಪೆಟ್ರೋಲ್‌ ಉತ್ಪನ್ನಗಳ ಮೇಲಿನ ತೆರಿಗೆ ಕಡಿಮೆ ಮಾಡಬೇಕೆಂದು ಒತ್ತಾಯಿಸಿದರು. ಮುಖಂಡರಾದ ಮಹೇಶ ಪತ್ತಾರ, ಗುರುಸಿದ್ದಪ್ಪ ಅಂಬಿಗೇರ, ಎನ್‌.ಎ.ಖಾಜಿ, ದೇವಾನಂದ ಜಗಾಪೂರ, ಬಾಬಾಜಾನ ಮುಧೋಳ, ರಾಜಶೇಖರ ಮೆಣಸಿನಕಾಯಿ, ಬಿ.ಎಸ್‌.ಸೊಪ್ಪಿನ, ಬಸವರಾಜ ಕೋರಿಮಠ, ಎ.ಸಿ.ನವಲೂರ, ಎ.ಎಸ್‌.ಪೀರಜಾದೆ, ಎಂ.ಎಚ್‌.ಮುಲ್ಲಾ, ರಮೇಶ ಭೋಸ್ಲೆ, ಚಿದಾನಂದ ಸವದತ್ತಿ ಇನ್ನಿತರರಿದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.