ತೈಲೋತ್ಪನ್ನ ಬೆಲೆ ಹೆಚ್ಚಳ ಖಂಡಿಸಿ 3 ವಿವಿಧ ಸಂಘಟನೆಗಳ ಪ್ರತಿಭಟನೆ


Team Udayavani, Jun 25, 2020, 10:11 AM IST

ತೈಲೋತ್ಪನ್ನ ಬೆಲೆ ಹೆಚ್ಚಳ ಖಂಡಿಸಿ 3 ವಿವಿಧ ಸಂಘಟನೆಗಳ ಪ್ರತಿಭಟನೆ

ಹುಬ್ಬಳ್ಳಿ: ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಹೆಚ್ಚಳ ವಿರೋಧಿಸಿ ವಿವಿಧ ಸಂಘಟನೆಗಳಿಂದ ಇಲ್ಲಿನ ಮಿನಿವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಸಿಐಟಿಯು, ಎಐಟಿಯುಸಿ ಮತ್ತು ಐಎನ್‌ಟಿಯುಸಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಬುಧವಾರ ತಹಶೀಲ್ದಾರ್‌ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಕಳೆದ 15 ದಿನಗಳಿಂದ 7.92ರೂ. ಪೆಟ್ರೋಲ್‌ ಹಾಗೂ 8.88 ರೂ.ಡಿಸೇಲ್‌ ದರ ಏರಿಕೆಯಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಸಾಕಷ್ಟು ಪ್ರಮಾಣದಲ್ಲಿ ಇಳಿಕೆಯಾಗಿದ್ದರೂ ದೇಶದಲ್ಲಿ ಮಾತ್ರ ದರ ನಿತ್ಯ ಏರಿಕೆಯಾಗುತ್ತಿದೆ. ಕೇಂದ್ರ ಸರಕಾರ ತನ್ನ ಆದಾಯ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಹೆಚ್ಚಿನ ತೆರಿಗೆ ವಿಧಿಸಿರುವುದು ಪ್ರಮುಖ ಕಾರಣವಾಗಿದ್ದು, ಕೂಡಲೇ ತೆರಿಗೆ ಸಂಪೂರ್ಣ ಕಡಿತಗೊಳಿಸಬೇಕೆಂದು ಒತ್ತಾಯಿಸಿದರು.

ಕೇಂದ್ರ ಸರಕಾರದ ಮಹಾಮಾರಿ ಕೋವಿಡ್ ನಿಯಂತ್ರಣದಲ್ಲಿ ಏಕಪಕ್ಷೀಯ ಹಾಗೂ ಅಯೋಜಿತ ಕ್ರಮಗಳಿಂದ ಜನರ ಸಂಕಷ್ಟಗಳು ಹೆಚ್ಚಲು ಕಾರಣವಾಗಿದೆ. ಕಳೆದ 3 ತಿಂಗಳಿಂದ ಕೋವಿಡ್‌-19 ದಾಳಿಯಿಂದ ಜನ ತತ್ತರಿಸಿದ್ದು, ಲಾಕಡೌನ್‌ನಿಂದ ಕೋಟ್ಯಂತರ ಜನ ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದಾರೆ. ಜನರು ಆರ್ಥಿಕ ಸಂಕಷ್ಟದಿಂದ ನಲುಗಿರುವ ಸಂದರ್ಭದಲ್ಲಿ ಇಂಧನ ಬೆಲೆ ಹೆಚ್ಚಳವಾಗುವ ಮೂಲಕ ಜೀವನಾವಶ್ಯಕ ವಸ್ತುಗಳ ಬೆಲೆ ಹೆಚ್ಚಳವಾಗಿದೆ. ಇದರಿಂದ ಜನರು ಮತ್ತಷ್ಟು ಸಮಸ್ಯೆಗೆ ಸಿಲುಕಿದಂತಾಗಿದೆ. ಜನರ ಸಂಕಷ್ಟಕ್ಕೆ ಸ್ಪಂದಿಸಬೇಕಾದ ಸರಕಾರಗಳು ಜನರ ಸುಲಿಗೆಗೆ ಮುಂದಾಗಿದೆ ಎಂದು ಆರೋಪಿಸಿದರು.

ಇಂಧನ ಬೆಲೆ ಹೆಚ್ಚಳದಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಲಿವೆ ಎನ್ನುವ ಕನಿಷ್ಠ ಪರಿಜ್ಞಾನ ಕೇಂದ್ರ ಸರಕಾರಕ್ಕೆ ಇಲ್ಲದಂತಾಗಿದೆ. ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವ ಬದಲು ಶ್ರೀಮಂತರ ಸಂಪತ್ತಿನ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಿ ಬೊಕ್ಕಸ ತುಂಬಿಕೊಳ್ಳುವ ಕೆಲಸ ಮಾಡಲಿ. ಪೆಟ್ರೋಲ್‌ ಉತ್ಪನ್ನಗಳ ಮೇಲಿನ ತೆರಿಗೆ ಕಡಿಮೆ ಮಾಡಬೇಕೆಂದು ಒತ್ತಾಯಿಸಿದರು. ಮುಖಂಡರಾದ ಮಹೇಶ ಪತ್ತಾರ, ಗುರುಸಿದ್ದಪ್ಪ ಅಂಬಿಗೇರ, ಎನ್‌.ಎ.ಖಾಜಿ, ದೇವಾನಂದ ಜಗಾಪೂರ, ಬಾಬಾಜಾನ ಮುಧೋಳ, ರಾಜಶೇಖರ ಮೆಣಸಿನಕಾಯಿ, ಬಿ.ಎಸ್‌.ಸೊಪ್ಪಿನ, ಬಸವರಾಜ ಕೋರಿಮಠ, ಎ.ಸಿ.ನವಲೂರ, ಎ.ಎಸ್‌.ಪೀರಜಾದೆ, ಎಂ.ಎಚ್‌.ಮುಲ್ಲಾ, ರಮೇಶ ಭೋಸ್ಲೆ, ಚಿದಾನಂದ ಸವದತ್ತಿ ಇನ್ನಿತರರಿದ್ದರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.