ತೈಲೋತ್ಪನ್ನ ಬೆಲೆ ಹೆಚ್ಚಳ ಖಂಡಿಸಿ 3 ವಿವಿಧ ಸಂಘಟನೆಗಳ ಪ್ರತಿಭಟನೆ


Team Udayavani, Jun 25, 2020, 10:11 AM IST

ತೈಲೋತ್ಪನ್ನ ಬೆಲೆ ಹೆಚ್ಚಳ ಖಂಡಿಸಿ 3 ವಿವಿಧ ಸಂಘಟನೆಗಳ ಪ್ರತಿಭಟನೆ

ಹುಬ್ಬಳ್ಳಿ: ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಹೆಚ್ಚಳ ವಿರೋಧಿಸಿ ವಿವಿಧ ಸಂಘಟನೆಗಳಿಂದ ಇಲ್ಲಿನ ಮಿನಿವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಸಿಐಟಿಯು, ಎಐಟಿಯುಸಿ ಮತ್ತು ಐಎನ್‌ಟಿಯುಸಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಬುಧವಾರ ತಹಶೀಲ್ದಾರ್‌ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಕಳೆದ 15 ದಿನಗಳಿಂದ 7.92ರೂ. ಪೆಟ್ರೋಲ್‌ ಹಾಗೂ 8.88 ರೂ.ಡಿಸೇಲ್‌ ದರ ಏರಿಕೆಯಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಸಾಕಷ್ಟು ಪ್ರಮಾಣದಲ್ಲಿ ಇಳಿಕೆಯಾಗಿದ್ದರೂ ದೇಶದಲ್ಲಿ ಮಾತ್ರ ದರ ನಿತ್ಯ ಏರಿಕೆಯಾಗುತ್ತಿದೆ. ಕೇಂದ್ರ ಸರಕಾರ ತನ್ನ ಆದಾಯ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಹೆಚ್ಚಿನ ತೆರಿಗೆ ವಿಧಿಸಿರುವುದು ಪ್ರಮುಖ ಕಾರಣವಾಗಿದ್ದು, ಕೂಡಲೇ ತೆರಿಗೆ ಸಂಪೂರ್ಣ ಕಡಿತಗೊಳಿಸಬೇಕೆಂದು ಒತ್ತಾಯಿಸಿದರು.

ಕೇಂದ್ರ ಸರಕಾರದ ಮಹಾಮಾರಿ ಕೋವಿಡ್ ನಿಯಂತ್ರಣದಲ್ಲಿ ಏಕಪಕ್ಷೀಯ ಹಾಗೂ ಅಯೋಜಿತ ಕ್ರಮಗಳಿಂದ ಜನರ ಸಂಕಷ್ಟಗಳು ಹೆಚ್ಚಲು ಕಾರಣವಾಗಿದೆ. ಕಳೆದ 3 ತಿಂಗಳಿಂದ ಕೋವಿಡ್‌-19 ದಾಳಿಯಿಂದ ಜನ ತತ್ತರಿಸಿದ್ದು, ಲಾಕಡೌನ್‌ನಿಂದ ಕೋಟ್ಯಂತರ ಜನ ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದಾರೆ. ಜನರು ಆರ್ಥಿಕ ಸಂಕಷ್ಟದಿಂದ ನಲುಗಿರುವ ಸಂದರ್ಭದಲ್ಲಿ ಇಂಧನ ಬೆಲೆ ಹೆಚ್ಚಳವಾಗುವ ಮೂಲಕ ಜೀವನಾವಶ್ಯಕ ವಸ್ತುಗಳ ಬೆಲೆ ಹೆಚ್ಚಳವಾಗಿದೆ. ಇದರಿಂದ ಜನರು ಮತ್ತಷ್ಟು ಸಮಸ್ಯೆಗೆ ಸಿಲುಕಿದಂತಾಗಿದೆ. ಜನರ ಸಂಕಷ್ಟಕ್ಕೆ ಸ್ಪಂದಿಸಬೇಕಾದ ಸರಕಾರಗಳು ಜನರ ಸುಲಿಗೆಗೆ ಮುಂದಾಗಿದೆ ಎಂದು ಆರೋಪಿಸಿದರು.

ಇಂಧನ ಬೆಲೆ ಹೆಚ್ಚಳದಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಲಿವೆ ಎನ್ನುವ ಕನಿಷ್ಠ ಪರಿಜ್ಞಾನ ಕೇಂದ್ರ ಸರಕಾರಕ್ಕೆ ಇಲ್ಲದಂತಾಗಿದೆ. ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವ ಬದಲು ಶ್ರೀಮಂತರ ಸಂಪತ್ತಿನ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಿ ಬೊಕ್ಕಸ ತುಂಬಿಕೊಳ್ಳುವ ಕೆಲಸ ಮಾಡಲಿ. ಪೆಟ್ರೋಲ್‌ ಉತ್ಪನ್ನಗಳ ಮೇಲಿನ ತೆರಿಗೆ ಕಡಿಮೆ ಮಾಡಬೇಕೆಂದು ಒತ್ತಾಯಿಸಿದರು. ಮುಖಂಡರಾದ ಮಹೇಶ ಪತ್ತಾರ, ಗುರುಸಿದ್ದಪ್ಪ ಅಂಬಿಗೇರ, ಎನ್‌.ಎ.ಖಾಜಿ, ದೇವಾನಂದ ಜಗಾಪೂರ, ಬಾಬಾಜಾನ ಮುಧೋಳ, ರಾಜಶೇಖರ ಮೆಣಸಿನಕಾಯಿ, ಬಿ.ಎಸ್‌.ಸೊಪ್ಪಿನ, ಬಸವರಾಜ ಕೋರಿಮಠ, ಎ.ಸಿ.ನವಲೂರ, ಎ.ಎಸ್‌.ಪೀರಜಾದೆ, ಎಂ.ಎಚ್‌.ಮುಲ್ಲಾ, ರಮೇಶ ಭೋಸ್ಲೆ, ಚಿದಾನಂದ ಸವದತ್ತಿ ಇನ್ನಿತರರಿದ್ದರು.

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.