ಗನ್ ತೋರಿಸಿದ ಪಿಎಸ್ಐಗೆ ಗ್ರಾಮಸ್ಥರಿಂದ ಥಳಿತ, ಏನಿದು ವಿವಾದ?
Team Udayavani, Feb 28, 2017, 12:21 PM IST
ಚಿಕ್ಕಮಗಳೂರು: ಮುಂದುಗಡೆ ಸಾಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಗೂಂಡಾಗಿರಿ ಪ್ರದರ್ಶಿಸಿದ ಪಿಎಸ್ಐಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಚಿಕ್ಕಮಗಳೂರಿನ ಸಿರಗುಂದ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಚಿಕ್ಕಮಗಳೂರಿನ ಸಿರಗುಂದ ಗ್ರಾಮದ ಬಳಿ ಕಾರೊಂದು ಮುಂದೆ ಸಾಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿತ್ತು. ಆಗ ಡಿಕ್ಕಿ ಹೊಡೆದುದನ್ನು ಪ್ರಶ್ನಿಸಿದಾಗ, ಹಿಂಬದಿ ಕಾರಿನಲ್ಲಿದ್ದ ಪಿಎಸ್ಐ ಪಿಸ್ತೂಲ್ ಹೊರಗೆ ತೆಗೆದು, ಏಯ್ ಮಗನೇ ಮೂಳೆ ಮುರಿದು ಕೈಗೆ ಕೊಡ್ತೀನಿ ಎಂದು ಆವಾಜ್ ಹಾಕಿದ್ದ ಪ್ರಸಂಗ ನಡೆಯಿತು.
ಆಗ ಗ್ರಾಮಸ್ಥರು ಒಟ್ಟಾಗಿ ಮಫ್ತಿಯಲ್ಲಿದ್ದ ಪಿಎಸ್ಐ ಗವಿರಾಜು ಹಾಗೂ ಇನ್ನಿಬ್ಬರನ್ನು ತರಾಟೆಗೆ ತೆಗೆದುಕೊಂಡಿದ್ದರು, ಈ ಸಂದರ್ಭದಲ್ಲಿ ವಾಗ್ವಾದ ನಡೆದಾಗ ಗ್ರಾಮಸ್ಥರು ಮೂವರು ಪೊಲೀಸರನ್ನು ಥಳಿಸಿ ಕೂಡಿ ಹಾಕಿದ್ದರು.
ಗಲಾಟೆ ವಿಕೋಪಕ್ಕೆ ಹೋದಾಗ ಸ್ಥಳಕ್ಕೆ ಪೊಲೀಸರ ಪಡೆ ಆಗಮಿಸಿತ್ತು. ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಕೂಡಾ ಸ್ಥಳಕ್ಕೆ ಬಂದಾಗ ಪುಂಡಾಟಿಕೆ ನಡೆಸುತ್ತಿದ್ದವರನ್ನು ತರಾಟೆಗೆ ತೆಗೆದುಕೊಂಡರು. ಪಿಎಸ್ಐ ಜೊತೆ ಹೇಗೆ ನಡೆದುಕೊಳ್ಳಬೇಕು ಅಂತ ಗೊತ್ತಿಲ್ವೇನ್ರೋ…ಹಲ್ಲು ಮುರಿದು ಕೈಗೆ ಕೊಡ್ತೀನಿ ಎಂದು ಆವಾಜ್ ಹಾಕಿದ್ದರು. ಪ್ರಕರಣದ ಸಂಬಂಧ 6 ಮಂದಿಯನ್ನು ವಶಕ್ಕೆ ತೆಗೆದುಕೊಂಡು ಕೇಸ್ ಹಾಕಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು