ಶೃಂಗೇರಿ ನ್ಯಾಯಾಲಯದ ಆವರಣದಲ್ಲಿ ನಕ್ಸಲ್ ಪರ ಘೋಷಣೆ ಕೂಗಿದ ರಮೇಶ್
Team Udayavani, Jul 4, 2017, 11:43 AM IST
ಶೃಂಗೇರಿ: ನಕ್ಸಲ್ ಚಟುವಟಿಕೆ ಆರೋಪದಡಿ ಬಂಧಿತರಾಗಿರುವ ರಮೇಶ್, ಕನ್ಯಾಕುಮಾರಿ ಹಾಗೂ ನಿಲಗುಳಿ
ಪದ್ಮನಾಭ ಅವರನ್ನು ವಿಚಾರಣೆಗಾಗಿ ಸೋಮವಾರ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಈ
ಸಂದರ್ಭದಲ್ಲಿ ರಮೇಶ್, ನಕ್ಸಲ್ ಪರ ಘೋಷಣೆ ಕೂಗಿದ ಘಟನೆಯೂ ನಡೆದಿದೆ.
ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ನ್ಯಾಯಾಲಯದ ಆವರಣದಲ್ಲಿ ಬಂದಿಳಿಯುತ್ತಿದ್ದಂತೆ ಆರೋಪಿ ರಮೇಶ್, ನಕ್ಸಲ್ ಪರ ಘೋಷಣೆ ಕೂಗಲಾರಂಭಿಸಿದ. ನ್ಯಾಯಾಲಯದ ಆವರಣದಲ್ಲಿ ಘೋಷಣೆ ಕೂಗದಂತೆ ಪೊಲೀಸರು ಎಚ್ಚರಿಕೆ
ನೀಡಿದರೂ ರಮೇಶ್ ಅದನ್ನು ಲೆಕ್ಕಿಸಲಿಲ್ಲ. ವಿಚಾರಣೆ ಮುಗಿದ ಬಳಿಕ ನ್ಯಾಯಾಲಯದಿಂದ ಹೊರ ಬರುತ್ತಿದ್ದಂತೆ ಮತ್ತೆ ಘೋಷಣೆ ಕೂಗುವುದನ್ನು ಮುಂದುವರಿಸಿದ. ಅಲ್ಲದೆ ಪೊಲೀಸರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿ ಘೋಷಣೆ ಕೂಗಿದ. ಕನ್ಯಾಕುಮಾರಿ ತನ್ನ ಮಗಳು ಗೆಲುವು ಜೊತೆಗೆ ನ್ಯಾಯಾಲಯಕ್ಕೆ ಹಾಜರಾಗಿದ್ದಳು. ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ. ಗೌತಮ್ ಅವರು ಪ್ರಕರಣದ ವಿಚಾರಣೆಯನ್ನು ಜು. 17ಕ್ಕೆ ಮುಂದೂಡಿದ್ದಾರೆ.
ಏನೇನು ಪ್ರಕರಣ?: ಕುದುರೆಮುಖ ರಾಷ್ಟ್ರೀಯ ಉದ್ಯಾನದಲ್ಲಿ 2000ನೇ ಇಸ್ವಿಯಿಂದ ಆರಂಭಗೊಂಡ ನಕ್ಸಲ್ ಚಟುವಟಿಕೆ 2014ರವರೆಗೂ ಚುರುಕಾಗಿತ್ತು. ಈ ಸಂದರ್ಭದಲ್ಲಿ ಅನೇಕ ಹಿಂಸಾಕೃತ್ಯಗಳು ನಡೆದಿದ್ದವು. ದಟ್ಟಾರಣ್ಯದಲ್ಲಿ ಅಡಗಿಕೊಂಡಿದ್ದ ನಕ್ಸಲರು, ಕಾನೂನುಬಾಹಿರ ಚಟುವಟಿಕೆಗಳನ್ನು ನಿರಂತರವಾಗಿ ನಡೆಸುತ್ತಿದ್ದರು. ತನಿಕೋಡು ಗೇಟ್ ಧ್ವಂಸ ಪ್ರಕರಣ, ಕೆಸಮುಡಿ ವೆಂಕಟೇಶ್ ಹತ್ಯೆ, ಅರಣ್ಯ ಇಲಾಖೆ ಪ್ರವಾಸಿ ಮಂದಿರ ಸ್ಫೋಟ, ಮಗೇಬೈಲು ಪೊಲೀಸ್ ಸಿಬ್ಬಂದಿಯ ಬಂದೂಕು ಅಪಹರಣ ಸೇರಿದಂತೆ ರಮೇಶ್, ನಿಲಗುಳಿ ಪದ್ಮನಾಭ ಹಾಗೂ ಕನ್ಯಾಕುಮಾರಿ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ ಕನ್ಯಾಕುಮಾರಿ ಒಬ್ಬಳ ಮೇಲೆಯೇ 13 ಪ್ರಕರಣಗಳು ದಾಖಲಾಗಿದ್ದವು. ಈ ಎಲ್ಲ ಪ್ರಕರಣಗಳ ವಿಚಾರಣೆಗಾಗಿ ಆರೋಪಿಗಳನ್ನು ಸೋಮವಾರ ಶೃಂಗೇರಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
ಕ್ರೀಡೆಯೊಂದಿಗೆ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ
HD Devegowda: ರಾಮೇಶ್ವರ ದೇವರ ದರ್ಶನ ಪಡೆದ ಮಾಜಿ ಪ್ರಧಾನಿ
MUST WATCH
ಹೊಸ ಸೇರ್ಪಡೆ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ