ಎರಡು ಗುಂಪುಗಳ ಮಧ್ಯೆ ಗಲಾಟೆ: ಏಳು ಜನರ ಮೇಲೆ ಹಲ್ಲೆ


Team Udayavani, Jul 17, 2017, 10:26 AM IST

17-CHI-1.gif

ಚಿಕ್ಕಮಗಳೂರು: ನಗರದ ಇಂದಿರಾ ಬಡಾವಣೆಯಲ್ಲಿ ಎರಡು ಗುಂಪಿನ ನಡುವೆ ಶನಿವಾರ ರಾತ್ರಿ ನಡೆದ ಮಾರಾಮಾರಿಯಲ್ಲಿ
ಮಹಿಳೆಯರೂ ಸೇರಿದಂತೆ 7 ಮಂದಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. 

ಇಂದಿರಾ ಬಡಾವಣೆಯ ಶ್ರೀನಿವಾಸ್‌ ಮತ್ತು ಕಿರಣಗೆ ತಲೆಗೆ ತೀವ್ರ ಪೆಟ್ಟಾಗಿದೆ, ರಾಜು ಅವರ ಎಡಗೈ ಮುರಿದಿದೆ, ರೇವಂತ್‌, ಪ್ರದೀಪ್‌, ಮಮತ ಹಾಗೂ ರತ್ನ ಅವರಿಗೆ ಗಂಭೀರ ಗಾಯವಾಗಿದ್ದು ಎಲ್ಲರೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಲಾಟೆ ಮಾಹಿತಿ ತಿಳಿದು ಪೊಲೀಸರು ಬರುವ ಹೊತ್ತಿಗೆ ದುಷ್ಕರ್ಮಿಗಳು ಸ್ಥಳದಿಂದ ಕಾಲ್ಕಿತ್ತಿದ್ದರೆಂದು ಗಾಯಾಳುಗಳು ಹೇಳುತ್ತಾರೆ.

ದೊಣ್ಣೆ, ಕತ್ತಿ, ರಾಡು ಮತ್ತಿತರೆ ಮಾರಕಾಸ್ತ್ರಗಳಿಂದ ಬಂದಿದ್ದ 20ಕ್ಕೂ ಹೆಚ್ಚು ದುಷ್ಕರ್ಮಿಗಳು ಇಂದಿರಾ ಬಡಾವಣೆಯ
ರಾಜೇಶ್‌ ಎಂಬಾತನನ್ನು ಕೇಳಿದ್ದಾರೆ. ಆತ ಮನೆಯಲ್ಲಿಲ್ಲ ಎಂದು ಗೊತ್ತಾದಾಗ ಮನೆ ಮೇಲೆ ಕಲ್ಲೆಸೆದು ಕಿಟಕಿ ಗಾಜು ಪುಡಿ
ಮಾಡಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಬೈಕನ್ನು ಬಡಿಗೆಯಿಂದ ನುಜ್ಜುಗುಜ್ಜು ಮಾಡಿದ್ದಾರೆ. ತನ್ನ ಮನೆ ಇಳಿಜಾರಿನಲ್ಲಿದ್ದರಿಂದ ದಿನನಿತ್ಯ ರಾಜೇಶನ ಮನೆ ಬಳಿ ಬೈಕ್‌ ನಿಲ್ಲಿಸುತ್ತಿದ್ದ ಶ್ರೀನಿವಾಸ್‌ ಬಂದು ತನ್ನ ಬೈಕ್‌ ಪುಡಿ ಮಾಡಿದ್ದೇಕೆ ಎಂದು ಕೇಳಿದಾಗ ಇಲ್ಲಿರುವ ಎಲ್ಲರನ್ನೂ ಥಳಿಸುತ್ತೇವೆ ಎಂದು ಬೆದರಿಸಿದ ಗುಂಪು ಶ್ರೀನಿವಾಸನ ತಲೆಗೆ ದೊಣ್ಣೆಯಿಂದ ಹೊಡೆದಿದ್ದಾರೆ. ತನ್ನ ಪತಿಯ ರಕ್ಷಣೆಗೆ ಬಂದ ಪತ್ನಿಯ ಮೇಲೂ ಹಲ್ಲೆ ನಡೆಸಿದ್ದಾರೆ.

ಗಲಾಟೆ ನೋಡಿ ಅಕ್ಕಪಕ್ಕದ ಮನೆಯವರು ಹೊರಬಂದು ಪ್ರಶ್ನಿಸಿದಾಗ ಸಿಕ್ಕಿಸಿಕ್ಕಿದವರ ಮೇಲೆ ಮನಬಂದಂತೆ ಥಳಿಸಿದ್ದಾರೆ. ಮಮತ ಎಂಬಾಕೆ ಪೆಟ್ಟು ತಿಂದ ನಂತರ ತನ್ನ ಪುಟ್ಟ ಮಗುವನ್ನು ರಕ್ಷಿಸಿಕೊಳ್ಳುವ ಸಲುವಾಗಿ ಬಚ್ಚಿಟ್ಟುಕೊಂಡಿದ್ದಾಗಿ ಹೇಳುತ್ತಾರೆ. ಏನೂ ತಪ್ಪು ಮಾಡದೆ ವಿನಾ ಕಾರಣ ನಮ್ಮ ಮೇಲೆ ಹಲ್ಲೆ ನಡೆಸಿದರು, ಇದರಲ್ಲಿ ಕೆಲವರು ಪಾನಮತ್ತರಾಗಿದ್ದರು. ಕೆಲವರ ಪರಿಚಯವಿದೆ ಎಂದು ಕಿರಣ ಹೇಳುತ್ತಾರೆ. ಗಲಾಟೆಯಲ್ಲಿ ಮಹಿಳೆಯರ ಮಾಂಗಲ್ಯ ಸರ, ಮೊಬೈಲ್‌ ಕಿತ್ತುಕೊಂಡು ಹೋಗಿದ್ದಾರೆ ಎಂದು ಗಾಯಾಳು ಪ್ರದೀಪ್‌ ತಿಳಿಸಿದರು. ರಾಜೇಶ್‌ ಮೇಲಿನ ಹಳೆ ದ್ವೇಷವೆ ದಾಳಿಗೆ ಕಾರಣ ಎಂದು ಹೇಳಲಾಗಿದ್ದು ಈ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಶಾಸಕ ಸಿ.ಟಿ.ರವಿ ಭಾನುವಾರ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಗೆ ಸಾಂತ್ವನ ಹೇಳಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣ ಕಾರಣಕ್ಕೆ ಇಂದಿರಾ ಬಡಾವಣೆಯಲ್ಲಿ ಏಕಾಏಕಿ ದೊಡ್ಡ ಗಲಾಟೆ
ನಡೆದಿದೆ. ದಾಳಿ ಹಿಂದೆ ರಾಜಕೀಯ ಚಿತಾವಣೆಯಿದೆ ಎಂಬ ಆರೋಪವಿದೆ. ಅಮಾಯಕರ ಮೇಲೆ ದಾಳಿ ನಡೆಸುವುದು
ಹೇಯಕೃತ್ಯ, ಇದರ ಮೂಲ ತನಿಖೆ ಮಾಡಿ ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಆಗ್ರಹಿಸಿದರು. ವೈಯಕ್ತಿಕ ವಿಚಾರವಾಗಿದ್ದರೆ ಪರಿಹರಿಸಿ ಕೊಳ್ಳಲು ಕಾನೂನು ಇದೆ. ಆದರೆ, ಸಂಬಂಧವೇ ಇಲ್ಲದವರ ಮೇಲೆ ಹಲ್ಲೆ ನಡೆಸಿರುವುದು ಯಾರಿಗೂ ಶ್ರೇಯಸ್ಸು ತಂದುಕೊಡುವುದಿಲ್ಲ ಎಂದರು.

ನಗರ ಬಿಜೆಪಿ ಅಧ್ಯಕ್ಷ ಕೋಟೆ ರಂಗನಾಥ್‌, ನಗರಸಭಾ ಸದಸ್ಯ ಮುತ್ತಯ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.