ಕೇಂದ್ರ ಸರ್ಕಾರದಿಂದ ರೈತರಿಗೆ ದ್ರೋಹ
Team Udayavani, Aug 15, 2017, 3:29 PM IST
ಶೃಂಗೇರಿ: ಕೇಂದ್ರ ಸರಕಾರ ರಾಷ್ಟ್ರೀಕೃತ ಬ್ಯಾಂಕ್ನಲ್ಲಿ ರೈತರು ಮಾಡಿರುವ ಸಾಲವನ್ನು ಮನ್ನಾ ಮಾಡಬೇಕು. ಬರಿ ಉದ್ಯಮಿಗಳ ಸಾಲವನ್ನು ಮಾಡುವ ಮುಖಾಂತರ ಮೋದಿ ಅವರು ರೈತರಿಗೆ ದ್ರೋಹ ಎಸಗುತ್ತಿದ್ದಾರೆ ಎಂದು ರಾಜ್ಯ ಕಿಸಾನ್ ಖೇತ್ ಅಧ್ಯಕ್ಷ ಸಚಿನ್ ಮೀಗಾ ಆಕ್ಷೇಪಿಸಿದರು.
ಅವರು ಸೋಮವಾರ ತಾಲೂಕಿನ ಕೂತಗೋಡು ಗ್ರಾಪಂನ ಬೋಳೂರು ಸತೀಶ್ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ಮಾತನಾಡಿದರು. ಮೃತ ಸತೀಶ್ ಅವರ ಮನೆಗೆ ಪೊಲೀಸ್ ಇಲಾಖೆ ಹಾಗೂ ತಹಶೀಲ್ದಾರ್ ಭೇಟಿ ನೀಡದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮಲೆನಾಡಿನಲ್ಲಿ ಒಂದು ಅಥವಾ ಎರಡು ಎಕರೆ ತೋಟವುಳ್ಳ ರೈತರ ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ಸರಕಾರವು ಜಾಯಿಂಟ್
ಫಾರ್ಮಿಂಗ್ ಎಂಬ ಹೊಸ ಯೋಜನೆ ಪ್ರಾರಂಭ ಮಾಡಬೇಕಿದೆ. ಸಣ್ಣ ಸಣ್ಣ ಹಿಡುವಳಿದಾರರನ್ನು ಒಟ್ಟಾಗಿ ಸೇರಿಸಿ ಸ್ವ-ಸಹಾಯ ಗುಂಪಿನಡಿ ವ್ಯವಸಾಯ ಮಾಡುವ ಪ್ರಕ್ರಿಯೆ ಪ್ರಾರಂಭವಾಗಬೇಕಿದೆ. ಈ ಯೋಜನೆಯಲ್ಲಿ ರೈತರಿಗೆ ಆದಾಯ ಬರುವಂತೆ ಕೇಂದ್ರ ಹಾಗೂ ರಾಜ್ಯ
ಸರಕಾರಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ. ತೀವ್ರ ಬರದ ಹಿನ್ನೆಲೆಯಲ್ಲಿ ರೈತರ ಬಡ್ಡಿಮನ್ನಾ ಯೋಜನೆಯ ಅವಧಿ ವಿಸ್ತರಿಸಬೇಕು. ಆರ್ಥಿಕ ಸಂಕಷ್ಟದಲ್ಲಿದ್ದು ಆತ್ಮಹತ್ಯೆ ಮಾಡಿಕೊಂಡ ರೈತ ಸತೀಶ್ ಕುಟುಂಬಕ್ಕೆ ಸರಕಾರ ತಕ್ಷಣ ಐದು ಲಕ್ಷ ರೂ.ಪರಿಹಾರ ನೀಡಬೇಕು ಎಂದು
ಒತ್ತಾಯಿಸಿದರು.
ಬ್ಲಾಕ್ ಕಿಸಾನ್ ಅಧ್ಯಕ್ಷ ರವಿ ಹೆಗ್ಡೆ, ಎ.ಪಿ.ಎಂ.ಸಿ ಅಧ್ಯಕ್ಷ ರಮೇಶ ಭಟ್, ಕೂತಗೋಡು ಗ್ರಾಪಂ ಅಧ್ಯಕ್ಷ ನಾಗೇಶ್,ಸುಬ್ರಾಯ ಹೆಗ್ಡೆ, ಲಕ್ಷ್ಮಣ ನಾಯಕ್, ನವೀನ್, ವೆಂಕಟೇಶ್, ಶ್ರೀನಾಥ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ