ಆಡಳಿತ ಪಕ್ಷದ ಶಾಸಕರಿಗಿಂತ ಹೆಚ್ಚಿನ ಅನುದಾನ ತಂದಿರುವೆ


Team Udayavani, Aug 20, 2017, 5:40 PM IST

chikku.jpg

ಕಡೂರು: ಸರ್ಕಾರಗಳು ಯಾವುದೇ ಇದ್ದರೂ ಅನುದಾನಗಳನ್ನು ತರುವಲ್ಲಿ ಆಯಾಯ ಕ್ಷೇತ್ರದ ಶಾಸಕನ ಶ್ರಮ ಇರುತ್ತದೆ ಎಂದು ಶಾಸಕ ವೈ.ಎಸ್‌.ವಿ. ದತ್ತ ಹೇಳಿದರು. ತಾಲೂಕಿನ ಹರುವನಹಳ್ಳಿ ಸಮೀಪದಲ್ಲಿ 8 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸರ್ಕಾರಿ ಪಾಲಿಟೆಕ್ನಿಕ್‌ನ ನೂತನ ಕಾಲೇಜು ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಅನುದಾನಗಳನ್ನು ತರುವಲ್ಲಿ ಭಗೀರಥ ಪ್ರಯತ್ನ ಮಾಡಬೇಕು. ಅದರಲ್ಲೂ ವಿರೋಧ ಪಕ್ಷದ
ಶಾಸಕನಾದರೆ ಇನ್ನೂ ಕಷ್ಟ. ತಾವು ವಿರೋಧ ಪಕ್ಷದ ಶಾಸಕನಾಗಿ ಆಡಳಿತರೂಢ ಕಾಂಗ್ರೆಸ್‌ ಸರ್ಕಾರದಿಂದ
ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ತಂದಿದ್ದೇನೆ ಎಂದರು. ಇದನ್ನು ಟೀಕೆ ಮಾಡುವ ಜನರು ತಾವೇ ಸರ್ಕಾರದ ಮೇಲೆ ಪ್ರಭಾವ ಬಳಸಿ ಅನುದಾನ ತರಲಿ. ಇತಂಹ ಕಾಮಗಾರಿಗಳಿಗೆ ತಮ್ಮ ಶ್ರಮದಿಂದಲೇ ಅನುದಾನ ಬಂದಿದೆ ಎಂದು ಘೋಷಿಸಲಿ. ಹೃದಯ ವೈಶಾಲ್ಯತೆ ಮೆರೆಯಲಿ ಎಂದು ಪರೋಕ್ಷವಾಗಿ ತಮ್ಮ ಟೀಕಕಾರರಿಗೆ ಚಾಟಿ ಬೀಸಿದರು. ಇಂದು ಭುಮಿ ಪೂಜೆಯಾಗುತ್ತಿರುವ ಸರ್ಕಾರ ಪಾಲಿಟೆಕ್ನಿಕ್‌ ಕೂಡ ವಿವಾದಾಸ್ಪದ ವಿಷಯವಾಗಿತ್ತು. ಇದರ ಮಂಜೂರಾತಿ ಬಿಜೆಪಿ ಸರ್ಕಾರವಿದ್ದಾಗ ಆಗಿದ್ದು. ಶಾಸಕ ಸಿ.ಟಿ. ರವಿ ಅವರ ಶ್ರಮ ಇದಕ್ಕೆ ಕಾರಣ. ನಂತರದ ದಿನಗಳಲ್ಲಿ ಅ ಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಹಿಂದಿನ ಸರ್ಕಾರದ ಮಂಜೂರಾತಿಗಳನ್ನು ಕಿತ್ತುಕೊಂಡರು. ಉತ್ನತ ಶಿಕ್ಷಣ ಸಚಿವ ಆರ್‌.ವಿ. ದೇಶಪಾಂಡೆ ಅವರ ಮೇಲೆ ಒತ್ತಡ ತಂದು ತಾವು ಈ ಕಾಲೇಜನ್ನು ಮರು ಮಂಜೂರಾತಿ ಮಾಡಿಸಿದೆ. ಈ ಇಬ್ಬರನ್ನು ಸ್ಮರಿಸುತ್ತೇನೆ ಎಂದು ಹೇಳಿದರು. ಮಂಜೂರಾತಿ ನಂತರ ತಾವು ಈ ಕಾಲೇಜನ್ನು ಗ್ರಾಮೀಣ ಭಾಗದ ಚೌಳಹಿರಿಯೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದು ನಿಜ. ಅಭಿವೃದ್ಧಿ ವಿಕೇಂದ್ರಿಕರಣ ಮತ್ತು ಗ್ರಾಮೀಣ ಜನರಿಗೆ ನಗರ ಮಟ್ಟದ ಸೌಲಭ್ಯ ಸಿಗಲಿ ಎಂಬುದು ತಮ್ಮ ಮಹದಾಸೆಯಾಗಿತ್ತು. ಆದರೆ ಅದಕ್ಕೆ ಕಾಂಗ್ರೆಸ್‌ ಪಕ್ಷದ ಮಾಜಿ ವಿಧಾನಪರಿಷತ್‌ ಸದಸ್ಯೆಯೊಬ್ಬರು ಅಡ್ಡಿಯಾದರೆಂದು ಟೀಕಿಸಿದರು. ಈ ಕಾಲೇಜಿಗಾಗಿ ಅರಣ್ಯ ಭೂಮಿಯನ್ನು
ಕಂದಾಯ ಭೂಮಿಯಾಗಿ ಪರಿವರ್ತಿಸಲು ಹೋರಾಡಿದ್ದೇನೆ. ಕಾಲೇಜು ಕಟ್ಟಲು ಮಾತ್ರ ಭೂಮಿಯನ್ನು ಬಳಸಿಕೊಂಡು ಉಳಿದ ಭಾಗವನ್ನು ಹರುವನಹಳ್ಳಿ ಗ್ರಾಮದ ಜನರ ಮೂಲಭೂತ ಅವಶ್ಯಕತೆಗಳಿಗಾಗಿ ಹಾಗೂ ರುದ್ರಭೂಮಿ ಸ್ಥಾಪಿಸಲು ತಾವು ಬದ್ದ ಎಂದರು. ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು ವಿಶೇಷಾಧಿಕಾರಿ ಶೇಖರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ನೂತನ ಕಾಲೇಜಿನ ಕಟ್ಟಡಕ್ಕೆ ರಾಷ್ಟ್ರೀಯ ಹೆದ್ದಾರಿಯಿಂದ ರಸ್ತೆಯನ್ನು ಅಭಿವೃದ್ಧಿಗೊಳಿಸಿ ಕೊಡಬೇಕೆಂದು ಶಾಸಕರಲ್ಲಿ ಮನವಿ ಮಾಡಿದ್ದು ಇದಕ್ಕೆ ಶಾಸಕರು ಸಮ್ಮತಿಸಿದರು.  ಜಿಪಂ ಸದಸ್ಯೆ ಕಾವೇರಿ ಲಕ್ಕಪ್ಪ, ತಾಲೂಕು ಪಂಚಾಯತ್‌ ಅಧ್ಯಕ್ಷೆ ರೇಣುಕಾ ಉಮೇಶ್‌, ಸದಸ್ಯೆ ಸವಿತಾ ಆನಂದ್‌(ಡೆ„ರಿ), ತಂಗಲಿ ಗ್ರಾಪಂ ಅಧ್ಯಕ್ಷ ಟಿ.ಟಿ.ಶ್ರೀನಿವಾಸ್‌, ಚಿಕ್ಕಮಗಳೂರು ಪಾಲಿಟೆಕ್ನಿಕ್‌ ಪ್ರಾಂಶುಪಾಲ ಉಮಾಪತಿ, ಜೆಡಿಎಸ್‌ ಮುಖಂಡರಾದ ಭಂಡಾರಿ ಶ್ರೀನಿವಾಸ್‌, ಎಂ. ರಾಜಪ್ಪ ಮುಂತಾದವರು ಇದ್ದರು. 

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.