ಪಿಒಪಿ ಗಣಪತಿ ವಿಗ್ರಹಗಳಿಗೆ ಕಡಿವಾಣ ಹಾಕಿ: ಸತ್ಯವತಿ
Team Udayavani, Aug 23, 2017, 2:02 PM IST
ಚಿಕ್ಕಮಗಳೂರು: ರಾಸಾಯನಿಕ ವಸ್ತುಗಳ ಬಳಕೆಯಿಂದ ತಯಾರದ ಗಣಪತಿ ವಿಗ್ರಹಗಳನ್ನು ಜಲ ಮೂಲಗಳಲ್ಲಿ ವಿಸರ್ಜಸುವುದರಿಂದ ನೀರು ಕಲುಷಿತಗೊಂಡು ಜಲಚರಗಳ ಜೀವಕ್ಕೆ ಅಪಾಯ ಉಂಟಾಗುತ್ತದೆ. ಇವುಗಳಿಗೆ ಕಡಿವಾಣ ಹಾಕುವಂತೆ ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಜಿ.ಸತ್ಯವತಿ ಕರೆ ನೀಡಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಗಣೇಶ ಚತುರ್ಥಿ ಹಾಗೂ ಇತರೆ ಹಬ್ಬಗಳ ಕುರಿತ ಮುನ್ನೆಚರಿಕೆ ಕ್ರಮದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡದರು. ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಬ್ರಿಟಿಷರ ವಿರುದ್ಧ ಹೊರಾಡಲು ಬಾಲಗಂಗಾಧರನಾಥ ತಿಲಕರು ಎಲ್ಲಾ ಧರ್ಮದವರನ್ನು
ಒಗ್ಗೂಡಿಸಲು ಗಣೇಶ ಚತುರ್ಥಿಯನ್ನು ಪ್ರಾರಂಭಿಸಿದರು ಎಂದರು. ಪ್ಲಾಸ್ಟರ್ ಆಫ್ ಪ್ಯಾರೀಸ್ ಹಾಗೂ ರಾಸಾನಿಕಯುಕ್ತ ಸಿಂಥೆಟಿಕ್ ಬಣ್ಣಗಳ ಗಣಪತಿ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡಿ ಅವುಗಳನ್ನು ಕೆರೆ ಕಟ್ಟೆಗಳಲ್ಲಿ, ನದಿಗಳಲ್ಲಿ ವಿಸರ್ಜನೆ ಮಾಡುವುದರಿಂದ ನೀರು ಕಲುಷಿತಗೊಂಡು ಪಶು,
ಪಕ್ಷಿ, ಪ್ರಾಣಿ ಹಾಗೂ ಜಲಚರಗಳ ಜೀವಕ್ಕೆ ಕುತ್ತು ಉಂಟಾಗುವುದರ ಜೊತೆಗೆ ಸಾರ್ವಜನಿಕರ ಆರೋಗ್ಯಕ್ಕೆ ದಕ್ಕೆಯಾಗುತ್ತದೆ. ಬಣ್ಣವಿಲ್ಲದ, ಗಾತ್ರದಲ್ಲಿ ಚಿಕ್ಕದಾದ ರಾಸಾಯನಿಕ ಬಳಕೆ ಇಲ್ಲದ ಪರಿಸರ ಸ್ನೇಹಿ ಗಣಪತಿ ವಿಗ್ರಹಗಳನ್ನು ಪ್ರತಿಸ್ಥಾಪನೆ ಮಾಡಲು ಮುಂದಾಗಬೇಕು ಎಂದರು. ಗಣಪತಿ ವಿಗ್ರಹಗಳ ವಿಸರ್ಜನೆ ಸಮಯದಲ್ಲಿ ಸ್ಥಳೀಯ ಸಂಸ್ಥೆಗಳು ನಿಗಧಿ ಪಡಿಸಿರುವ ಸ್ಥಳಗಳಲ್ಲಿ ಅವುಗಳನ್ನು ವಿಸರ್ಜಸಬೇಕು. ಗಣಪತಿ ಪೆಂಡಾಲ್ಗಳಲ್ಲಿ ಕರ್ಕಶವಾದ ಶಬ್ದ ಹೊರಡಿಸುವ ಧ್ವನಿ ವರ್ಧಕಗಳನ್ನು ಬಳಸಬಾರದು ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಸಾಲು ಸಾಲಾಗಿ ಹಬ್ಬಗಳು ಬರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡಲು ತಾಲೂಕು ದಂಡಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕಲ್ಲದೆ ಶಾಂತಿ ಸಭೆಗಳನ್ನು ನಡೆಸಬೇಕೆಂದರು. ಹೊರ ಜಿಲ್ಲೆಗಳಿಂದ ಆಗಮಿಸುವ ರಾಸಾಯನಿಕ ಬಳಕೆ ಮಾಡಿದ ವಿಗ್ರಹಗಳನ್ನು ತಡೆಹಿಡಿಯಬೇಕು. ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಸಾರ್ವಜನಿಕರು ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಜಗದೀಶ್, ನಗರಸಭೆ ಆಯುಕ್ತೆ ತುಷಾರಮಣಿ, ಪರಿಸರ ಅಧಿಕಾರಿ ಶ್ವೇತಾ, ತಾಲೂಕಿನ ತಹಶೀಲ್ದಾರ್ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು