ತರೀಕೆರೆ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ; ಕುರ್ಚಿ ಪುಡಿ, ಪುಡಿ
Team Udayavani, Jan 1, 2018, 4:45 PM IST
ಚಿಕ್ಕಮಗಳೂರು:ಮಾಜಿ ಶಾಸಕ ಸುರೇಶ್ ಹಾಗೂ ಗೋಪಿಕೃಷ್ಣ ಬಣದ ಬಿಜೆಪಿ ಕಾರ್ಯಕರ್ತರೇ ಕೈ, ಕೈ ಮಿಲಾಯಿಸಿಕೊಂಡು, ಬಿಜೆಪಿ ಪರಿವರ್ತನಾ ಸಮಾವೇಶಕ್ಕೆ ಹಾಕಲಾಗಿದ್ದ ಕುರ್ಚಿಗಳನ್ನು ಪುಡಿಗೈದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ತರೀಕೆರೆಯಲ್ಲಿ ನಡೆಯುವ ಮೂಲಕ ಟಿಕೆಟ್ ಆಕಾಂಕ್ಷಿಗಳ ಜಗಳ ಬೀದಿಗೆ ಬಂದಂತಾಗಿದೆ.
ಬಿಜೆಪಿ ಪರಿವರ್ತನಾ ಸಮಾವೇಶಕ್ಕೆ ಗೋಪಿಕೃಷ್ಣ ಅವರು ಹಾಕಿಸಿದ್ದ ಫ್ಲೆಕ್ಸ್ ಅನ್ನು ಭಾನುವಾರ ರಾತ್ರಿ ಹರಿದು ಹಾಕಲಾಗಿತ್ತು. ಇದರಿಂದ ರೊಚ್ಚಿಗೆದ್ದ ಗೋಪಿಕೃಷ್ಣ ಬೆಂಬಲಿಗರು ಸೋಮವಾರ ಪರಿವರ್ತನಾ ಸಮಾವೇಶಕ್ಕೆ ಹಾಕಲಾಗಿದ್ದ ಕುರ್ಚಿಗಳನ್ನು ಪುಡಿಗೈದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಳೆ ತರೀಕೆರೆಯಲ್ಲಿ ಬಿಜೆಪಿ ಪರಿವರ್ತನಾ ಸಮಾವೇಶ ನಡೆಯಲಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಆಗಮಿಸಲಿದ್ದಾರೆ. ಏತನ್ಮಧ್ಯೆ ಮಾಜಿ ಶಾಸಕ ಸುರೇಶ್ ಹಾಗೂ ಗೋಪಿಕೃಷ್ಣ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಸುರೇಶ್ ಹಾಗೂ ಗೋಪಿಕೃಷ್ಣ ಅವರು ಪರಿವರ್ತನಾ ಸಮಾವೇಶಕ್ಕೆ ಶುಭ ಹಾರೈಸಿ ಫ್ಲೆಕ್ಸ್ ಹಾಕಿಸಿದ್ದರು. ಆದರೆ ನಿನ್ನೆ ರಾತ್ರಿ ಗೋಪಿಕೃಷ್ಣ ಅವರ ಫ್ಲೆಕ್ಸ್ ಅನ್ನು ಹರಿದು ಹಾಕುವ ಮೂಲಕ ಬಿಜೆಪಿ ಕಲಹ ಸ್ಫೋಟಗೊಂಡಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ