ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮ: ಸಿಎಂ


Team Udayavani, Jan 6, 2018, 2:58 PM IST

06-33.jpg

ಚಿಕ್ಕಮಗಳೂರು: ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಶುಕ್ರವಾರ ಮೂಡಿಗೆರೆಯ ಹೆಲಿಪ್ಯಾಡ್‌ನ‌ಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಎಲ್ಲರ ಜೀವವೂ ಅಮೂಲ್ಯ. ಗಲಭೆಗಳಿಂದ ಯಾರೂ ಸಾಯಬಾರದು. ಸತ್ತವರ ಕುಟುಂಬದ ಬಗ್ಗೆ ನಮಗೆ ಅನುಕಂಪ ಇದೆ. ದೀಪಕ್‌ ಕುಟುಂಬಕ್ಕೆ ಸರ್ಕಾರದಿಂದ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದರಲ್ಲದೇ ಸತ್ತವರನ್ನು ಹಿಂದೂ ಎಂದು ಹೇಳಿಕೊಂಡು ಗಲಾಟೆ ಮಾಡಲು ಬಿಜೆಪಿಯವರಿಗೆ ಅಧಿಕಾರ ಕೊಟ್ಟವರು ಯಾರು? ಹಿಂದುತ್ವವನ್ನು ಇವರು ಗುತ್ತಿಗೆ ಪಡೆದುಕೊಂಡಿದ್ದಾರಾ? ಎಂದು ಪ್ರಶ್ನಿಸಿದರು.

ಯಡಿಯೂರಪ್ಪಗೆ ಎಷ್ಟು ರಕ್ತವಿದೆ: ದಕ್ಷ, ಪ್ರಾಮಾಣಿಕ, ಸ್ವಚ್ಛ ಆಡಳಿತ ನಡೆಸುತ್ತೇನೆಂದು ಯಡಿಯೂರಪ್ಪ ರಕ್ತದಲ್ಲಿ ಬರೆದುಕೊಡುತ್ತೇನೆ ಎಂಬ ಹೇಳಿಕೆಯನ್ನು ಟೀಕಿಸಿದ ಸಿದ್ದರಾಮಯ್ಯ, ಯಡಿಯೂರಪ್ಪಗೆ ಎಷ್ಟು ರಕ್ತವಿದೆ, ಹೋದ ಕಡೆಯಲ್ಲೆಲ್ಲ ರಕ್ತದಲ್ಲಿ ಬರೆದು ಕೊಡುತ್ತೇನೆಂದ್ರೆ ಏನರ್ಥ. ಅಧಿಕಾರ ದೊರೆತ ನಂತರ ಏನು ಮಾಡುತ್ತಾರೆ ಎಂಬುದಕ್ಕಿಂತ, ಅಧಿಕಾರದಲ್ಲಿದ್ದಾಗ ಏನು ಮಾಡಿದ್ದಾರೆಂಬುದು ಮುಖ್ಯ ಎಂದರು. 

ಜೈಲಿಗೆ ಹೋಗಿದ್ದನ್ನು ಜನ ಮರೆತಿಲ್ಲ: ಹಿಂದೆ ಅಧಿಕಾರದಲ್ಲಿದ್ದಾಗ ಅವರು ಜೈಲಿಗೆ ಹೋಗಿ ಬಂದಿದ್ದು, ಸದನದಲ್ಲಿ ಬ್ಲೂ ಫಿಲ್ಮ್ ನೋಡಿದ್ದು, ಇದಾವುದನ್ನೂ ಜನತೆ ಮರೆತಿಲ್ಲ. ಯಡಿಯೂರಪ್ಪ ರಕ್ತದಲ್ಲಿ ಬರೆದುಕೊಟ್ರೆ ಜನ ನಂಬುವುದಿಲ್ಲ ಎಂದು ವ್ಯಂಗ್ಯವಾಡಿದರು. ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಬಿಜೆಪಿಯವರು ನಾಟಕವಾಡುತ್ತಿದ್ದಾರೆ. ಗೋವಾ ಸಿಎಂಗೆ ತಾವು ಎಷ್ಟು ಬಾರಿ ಪತ್ರ ಬರೆದರೂ ಉತ್ತರ ಕೊಟ್ಟಿಲ್ಲ. ಒಮ್ಮೆ ನ್ಯಾಯಯುತವಾಗಿ ನೀರು ಹಂಚಿಕೆ ಯಾಗಬೇಕು ಎನ್ನುತ್ತಾರೆ, ಮತ್ತೂಮ್ಮೆ ಟ್ರಿಬ್ಯುನಲ್‌ನಲ್ಲಿ ತೀರ್ಮಾನವಾಗಬೇಕು ಎನ್ನುತ್ತಾರೆ. ಅವರು ಕೇವಲ
ನಾಟಕವಾಡುತ್ತಿದ್ದಾರೆಯೇ ಹೊರತು ಬೇರೇನೂ ಇಲ್ಲ ಎಂದರು.

ಕೇಂದ್ರ ಸರ್ಕಾರ ಸಬ್ಸಿಡಿ ದರದಲ್ಲಿ ಕೊಡುವ ಗೋಧಿಯನ್ನು ಬಳಸಿಕೊಳ್ಳುತ್ತಿಲ್ಲ. ಈ ರೀತಿ ಮಾಡಿದರೆ ಗೋಧಿ ವಿತರಣೆ ಸ್ಥಗಿತಗೊಳಿಸಲು ಕೇಂದ್ರ
ಸಚಿವರೊಂದಿಗೆ ಚರ್ಚಿಸುವುದಾಗಿ ಬಿಎಸ್‌ವೈ ಹೇಳಿದ್ದಾರೆ. ಅವರಿಗೆ ಕಾನೂನು ಅರಿವಿಲ್ಲ. ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ ಆಹಾರ ಭದ್ರಾ ಕಾಯ್ದೆ ಜಾರಿಗೆ ತಂದಿದೆ. ಅದರನ್ವಯ ಆಹಾರ ಪದಾರ್ಥ ಕೊಡಲೇಬೇಕು. ಗೋಧಿ ಕೊಡುತ್ತಿಲ್ಲ ಎಂದು ಇವರಿಗೆ ಹೇಳಿದವರು ಯಾರು?
ಗೋಧಿ ಬೇಕು ಎನ್ನುವವರಿಗೆ ಕೊಡಲಾಗುತ್ತಿದೆ. ಬೇಡ ಎಂದವರಿಗೆ ಬಲವಂತವಾಗಿ ಕೊಡಲು ಸಾಧ್ಯವಿಲ್ಲ ಎಂದರು.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.