ಚಿಕ್ಕಮಗಳೂರು: ಆಸ್ತಿಗಾಗಿ ಅಣ್ಣ, ಅತ್ತಿಗೆಗೆ ವಿಷ ಹಾಕಿ ಕೊಂದ ತಮ್ಮ!
Team Udayavani, Jan 23, 2018, 3:55 PM IST
ಚಿಕ್ಕಮಗಳೂರು: ಆಸ್ತಿಗಾಗಿ ತಮ್ಮ ಒಡಹುಟ್ಟಿದ ಅಣ್ಣ ಹಾಗೂ ಅತ್ತಿಗೆಗೆ ಊಟದಲ್ಲಿ ವಿಷ ಬೆರೆಸಿ ಕೊಂದ ಹೃದಯವಿದ್ರಾವಕ ಘಟನೆ ಮೂಡಿಗೆರೆ ತಾಲೂಕು ಕಣಚೂರಿನಲ್ಲಿ ನಡೆದಿದೆ.
ನಾಲ್ಕು ಎಕರೆ ಆಸ್ತಿ ತನಗೊಬ್ಬನಿಗೆ ಸಿಗಬೇಕೆಂಬ ದುರಾಸೆಯಿಂದ ತಮ್ಮ ದಿನೇಶ್ ಎಂಬಾತ ಈ ದುಷ್ಕೃತ್ಯ ಎಸಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅಣ್ಣ ವೆಂಕಟೇಶ್ ಹಾಗೂ ಅತ್ತಿಗೆ ರುಕ್ಮಿಣಿಗೆ ದಿನೇಶ್ ಊಟದಲ್ಲಿ ವಿಷ ಬೆರೆಸಿ ಕೊಟ್ಟಿದ್ದ, ಊಟದ ನಂತರ ದಂಪತಿ ತೀವ್ರವಾಗಿ ಅಸ್ವಸ್ಥಗೊಂಡಿದ್ದರು, ಕೂಡಲೇ ನೆರೆಹೊರೆಯವರು ಮಣಿಪಾಲದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ದಂಪತಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
ದಂಪತಿ ಸಾವನ್ನಪ್ಪಿದ್ದು, ಅವರ ಮಕ್ಕಳು ಅನಾಥರಾದಂತಾಗಿದೆ. ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು