ಜಾನಪದ ಕಲೆ ಉಳಿವಿಗೆ ಶ್ರಮಿಸಿ: ದತ್ತಾ


Team Udayavani, Feb 6, 2018, 6:26 PM IST

06-5.jpg

ಕಡೂರು(ಬೀರೂರು): ದೇಶೀಯ ಕಲೆ, ಸಾಂಸ್ಕೃತಿಕ ವೈಭವ ಉಳಿಸಿ ಬೆಳೆಸುವುದು ನಾಗರಿಕರ ಕರ್ತವ್ಯ ಎಂದು ಶಾಸಕ ವೈ.ಎಸ್‌.ವಿ ದತ್ತ ಹೇಳಿದರು.

ಪಟ್ಟಣದ ಕೆ.ಎಲ್‌.ಕೆ. ಮೈದಾನದಲ್ಲಿ ಹಮ್ಮಿಕೊಂಡಿದ್ದ ಆಳ್ವಾಸ್‌ ನುಡಿಸಿರಿ ಮತ್ತು ವಿರಾಸತ್‌ ವೈಭವ ಘಟಕದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ
ಅವರು ಮಾತನಾಡಿದರು. ಜಗತ್ತಿನ ಯಾವ ದೇಶದಲ್ಲೂ ಇರದಷ್ಟು ಕಲಾ ಪ್ರಕಾರಗಳು ನಮ್ಮಲ್ಲಿವೆ. ಈ ಆಧುನಿಕ ಯುಗದಲ್ಲೂ ಇಂತಹ
ಸಾಂಸ್ಕೃತಿಕ, ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವಂತ ಕಾರ್ಯವನ್ನು ಆಳ್ವಾಸ್‌ ಸಂಸ್ಥೆ ಮಾಡುತ್ತಿದೆ ಎಂದರು. 25 ಸಾವಿರಕ್ಕೂ ಹೆಚ್ಚು ಮಕ್ಕಳಿಗೆ
ಶಿಕ್ಷಣ ವ್ಯವಸ್ಥೆ ಕಲ್ಪಿಸಿರುವ ಡಾ| ಮೋಹನ್‌ ಆಳ್ವಾಸ್‌ ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸಬಹುದಿತ್ತು. ಆದರೆ, ಹಾಗೆ ಮಾಡದೆ ಶಿಕ್ಷಣವನ್ನು
ಮತ್ತಷ್ಟು ಗುಣಾತ್ಮಕವಾಗಿಸಲು ಶ್ರಮಿಸುತ್ತಿದ್ದಾರೆ ಎಂದರು. 

ಜೋ ಮೇರಿ ಲೋಬೋ ಸ್ವಾಮೀಜಿ , ವೈದ್ಯಕೀಯ ಶಿಕ್ಷಣ ಪಡೆದವರು ಜನರ ರೋಗ ನಿವಾರಿಸುವ ಕಾಯಕದಲ್ಲಿ ತೊಡಗಿದ್ದರೆ ಡಾ| ಮೋಹನ್‌ ಆಳ್ವಾ
ಅವರು ಜ್ಞಾನ ಪ್ರಸರಣದ ಮೂಲಕ ಜನರಿಗೆ ರೋಗವೇ ಬಾರದಂತೆ ಜಾಗೃತಿ ಮೂಡಿಸುವ ಉತ್ತಮ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡು ಅದರಲ್ಲೇ ತೃಪ್ತಿ ಕಂಡುಕೊಂಡಿದ್ದಾರೆ ಎಂದರು. ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಡಾ| ಮೋಹನ್‌ ಆಳ್ವಾ ಮಾತನಾಡಿ,  ವಿದ್ಯಾರ್ಥಿಯೆಂದರೆ ಕೇವಲ ಶಿಕ್ಷಣ ಪಡೆಯುವುದಷ್ಟೇ ಅಲ್ಲ. ತನ್ನಲ್ಲಿರುವ ಆಸಕ್ತಿಗೆ ಅನುಗುಣವಾಗಿ ಸುಸಂಸ್ಕೃತ ಜೀವನ ರೂಪಿಸಿಕೊಳ್ಳಲು ಕಲಾ ಆರಾಧಕನಾಗುವುದು ಅಗತ್ಯ. ನಮ್ಮ ಸಂಸ್ಥೆಯು ಮಕ್ಕಳ ಆಸಕ್ತಿ ಮತ್ತು ಬದುಕಿಗೆ ಪೂರಕವಾಗಬಲ್ಲ ಕಲಾ ಪ್ರಕಾರಗಳಿಗೆ ಪೋತ್ಸಾಹ ನೀಡಲಾಗುತ್ತಿದೆ. ಸೂಕ್ತ ತರಬೇತಿ ನೀಡಿ ದೇಶೀಯ ಕಲೆಗಳನ್ನು ಅವರಲ್ಲಿ ಬಿತ್ತಬೇಕು ಎಂದರು. 

ನೂರಾರು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಬದುಕಿನ ಜೊತೆಗೆ ವಿವಿಧ ಕಲಾ ಪ್ರಕಾರಗಳಲ್ಲಿ ಪ್ರಾವಿಣ್ಯತೆ ಹೊಂದಿ ದೇಶ ವಿದೇಶಗಳ ವೇದಿಕೆಗಳಲ್ಲಿ ಪ್ರದರ್ಶಿಸುವ ಮಟ್ಟಿಗೆ ಬೆಳೆದು ನಿಂತಿದ್ದಾರೆ. ದೇಶದ ಕಲೆ ಮತ್ತು ಸಂಸ್ಕೃತಿ ಉಳಿಸಲು ಆಳ್ವಾಸ್‌ ನುಡಿಸಿರಿ, ವಿರಾಸತ್‌ ಘಟಕಗಳು ಕೆಲಸ
ಮಾಡುತ್ತಿವೆ ಎಂದರು. ಕೇರಳದ ಮೋಹಿನಿಯಾಟ್ಟಂ, ಬಡಗು ತಿಟ್ಟಿನ ಶ್ರೀರಾಮ ಪಟ್ಟಾಭಿಷೇಕ, ಆಂಧ್ರದ ಬಂಜಾರ ನೃತ್ಯ, ಮಣಿಪುರದ
ಸ್ಟಿಕ್‌ ಡ್ಯಾನ್ಸ್‌, ಒಡಿಶಾದ ಗೋಟಿಪುವ. ಮಹಾರಾಷ್ಟ್ರದ ಲಾವಣಿ ನೃತ್ಯ, ದಕ್ಷಿಣ ಭಾರತದ ಭರತನಾಟ್ಯಂ, ಒಡಿಸ್ಸಾದ ಕಥಕ್‌, ಶ್ರೀಲಂಕಾದ ಕ್ಯಾಂಡಿಯನ್‌, ಮಣಿಪುರದ ಡೋಲ್‌ಚಲಂ, ಪುರುಲಿಯಾ ಸಿಂಹನೃತ್ಯ, ತೆಂಕುತಿಟ್ಟಿನ ಯಕ್ಷಗಾನ ಅಗ್ರಪೂಜೆ ಕಥಾನಕ, ಗುಜರಾತಿನ ದಾಂಡಿಯಾ, ಮಲ್ಲಕಂಬ ಕಸರತ್ತು, ರೋಪ್‌ ಕಸರತ್ತು, ನೃತ್ಯ ಪ್ರಕಾರಗಳು ಹಾಗೂ ಅಂತಿಮವಾಗಿ ವಂದೇ ಮಾತರಂ ನೃತ್ಯ ಸಾವಿರಾರು ಪ್ರೇಕ್ಷಕರ ಮನಸೂರೆಗೊಂಡವು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.