ಮಾಲಿನ್ಯದಿಂದ ಪರಿಸರದ ಮೇಲೆ ದುಷ್ಪರಿಣಾಮ
Team Udayavani, Mar 23, 2018, 11:17 AM IST
ಬಾಳೆಹೊನ್ನೂರು: ಪರಿಸರ, ವಾಯು ಹಾಗೂ ಶಬ್ದ ಮಾಲಿನ್ಯದಿಂದ ಜನ ಸಂಖ್ಯೆಯ ಶೇ. 10 ರಷ್ಟು ಜನ ವಿವಿಧ ರೋಗಗಳಿಂದ ಬಳಲುತ್ತಿದ್ದಾರೆ ಎಂದು ಭಾರತೀಯ ಜೆ.ಸಿಐ ನ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ವಿಜ್ಞಾನಿ ನವೀನ್ ಲಾಯ್ಡ ಮಿಸ್ಕಿತ್ ತಿಳಿಸಿದರು.
ಕಾಫಿ ಸಂಶೋಧನ ಕೇಂದ್ರದ ಆವರಣದಲ್ಲಿ ಸಂಶೋಧನ ಕೇಂದ್ರ ಹಾಗೂ ಬಾಳೆಹೊನ್ನೂರು ಜೆ.ಸಿಐ ಹಮ್ಮಿಕೊಂಡಿದ್ದ ಸ್ವತ್ಛ ಭಾರತ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪರಿಸರ ಮಾಲಿನ್ಯದಿಂದ ಹವಾಮಾನದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಸಮುದ್ರದಲ್ಲೂ ಪ್ಲಾಸ್ಟಿಕ್ ತೇಲುತ್ತಿದ್ದು ಕಡಲ ಕಿನಾರೆ ಪ್ಲಾಸ್ಟಿಕ್ ನಿಂದ ತುಂಬಿ ತುಳುಕುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೊಳಿಸಿದ ಸ್ವತ್ಛ ಭಾರತ್ ಅಭಿಯಾನ ಯಶಸ್ವಿಯಾಗಲು ಪ್ರತಿಯೊಬ್ಬ ನಾಗರೀಕನು ತನ್ನ ಜವಬ್ದಾರಿಯನ್ನು ಅರಿತುಕೊಳ್ಳಬೇಕಿದೆ ಎಂದರು.
ಜೆಸಿಐನ ಅಧ್ಯಕ್ಷ ಮನುಕುಮಾರ್ ಮಾತನಾಡಿದರು. ಕಾಫಿ ಸಂಶೋದನ ಕೇಂದ್ರದ ಜಂಟಿ ನಿರ್ದೆಶಕ ಸಿ.ಜೆ. ಆನಂದರಾವ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ