ಧರ್ಮಾಚರಣೆಯಿಂದ ಆತ್ಮಬಲ ಪ್ರಾಪ್ತಿ


Team Udayavani, Apr 13, 2018, 1:04 PM IST

chikk-2.jpg

ಚಿಕ್ಕಮಗಳೂರು: ಸತ್ಯಾನ್ವೇಷಣೆಯ ಹಾದಿಯಲ್ಲಿ ಬರುವ ಕಷ್ಟಗಳು ಅನಂತ. ಅವುಗಳಿಗೆ ಅಂಜದೇ ಅಳುಕದೇ ನಿಜ ದಾರಿಯಲ್ಲಿ ನಡೆಯುವುದೇ ಜೀವನದ ಪರಮ ಗುರಿ. ಧರ್ಮದ ದಿಕ್ಸೂಚಿ ಮತ್ತು ಆಚರಣೆಯಿಂದ ಮನುಷ್ಯನಲ್ಲಿ ಆತ್ಮಬಲ ಸಂವರ್ಧನೆಗೊಂಡು ಶಾಂತಿ ಪ್ರಾಪ್ತವಾಗುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ|ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು.

ಅವರು ತಾಲೂಕಿನ ಕುನ್ನಾಳು ಗ್ರಾಮದಲ್ಲಿ ಶ್ರೀ ಗಿರಿರುದ್ರೇಶ್ವರ ಸ್ವಾಮಿ ನೂತನ ದೇವಾಲಯ ಉದ್ಘಾಟನೆ-ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಅಂಗವಾಗಿ ನಡೆದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಬಾಲ್ಯದಲ್ಲಿ ಜ್ಞಾನ, ಯೌವನದಲ್ಲಿ ಸಂಪತ್ತು ಮತ್ತು ವೃದ್ಧಾಪ್ಯದಲ್ಲಿ ಪುಣ್ಯ ಸಂಪಾದಿಸಿ ಬಾಳಬೇಕು. ಮನುಷ್ಯನ ಸುಖ ಸಾಧನೆಗೆ ಬೇಕಾದಷ್ಟು ಅನುಕೂಲಗಳಿದ್ದರೂ ನೆಮ್ಮದಿಯಿಲ್ಲ. ಬುದ್ಧಿ ವಿಕಾಸಗೊಂಡರೂ ಮನಸ್ಸಿನಲ್ಲಿ ಶಾಂತಿ ನೆಮ್ಮದಿಗಳಿಲ್ಲ. ಸತ್ಯ, ಧರ್ಮ, ನ್ಯಾಯ, ಮಾರ್ಗದಲ್ಲಿ ಮುನ್ನಡೆವ ಪ್ರವೃತ್ತಿ ಕಡಿಮೆಯಾಗುತ್ತಿದೆ. ಬುನಾದಿ ಕಲ್ಲು ಕಣ್ಣಿಗೆ ಕಾಣದಿದ್ದರೂ ಆ ಭವ್ಯ ಕಟ್ಟಡ ನಿಂತಿರುವುದು ಆ ಬುನಾದಿಯಿಂದ ಎಂಬುದನ್ನು ಮರೆತವರೇ ಹೆಚ್ಚು ಎಂದರು.
 
ಸಕಲ ಜೀವಾತ್ಮರಿಗೂ ಲೇಸನ್ನೇ ಬಯಸಿದ ಶ್ರೀ ಜಗದ್ಗುರು ರೇಣುಕಾಚಾರ್ಯರು ವೀರಶೈವ ಧರ್ಮ ದರ್ಶನದಲ್ಲಿ ಏನೆಲ್ಲ ಅಧ್ಯಾತ್ಮ ಜ್ಞಾನವನ್ನು ಬೋಧಿಸಿದ್ದಾರೆ. ಬೆಳೆಯುತ್ತಿರುವ ಯುವ ಸಮೂಹದಲ್ಲಿ ಸಂಸ್ಕಾರ ಸಂಸ್ಕೃತಿ ಬೆಳೆಸುವ ಕೆಲಸವಾಗಬೇಕಾಗಿದೆ. ದೇಹವನ್ನು ದುಡಿಮೆಗೆ ಮನಸ್ಸನ್ನು ಭಗವಂತನಿಗೆ ಅರ್ಪಿಸಿ ಬಾಳಿದಾಗ ಬಾಳು ಉಜ್ವಲಗೊಳ್ಳುವುದು ಎಂದು ತಿಳಿಸಿದರು.

 ಶ್ರೀ ವೀರಭದ್ರಸ್ವಾಮಿ ಕುನ್ನಾಳು ಗ್ರಾಮದಲ್ಲಿ ಶ್ರೀ ಗಿರಿರುದ್ರೇಶ್ವರ ಸ್ವಾಮಿಯಾಗಿ ನೆಲೆಗೊಂಡಿರುವುದು ಸಂತೋಷ ತಂದಿದೆ. ದುಷ್ಟರ ಸಂಹಾರ ಶಿಷ್ಟರ ಸಂರಕ್ಷಣೆಗಾಗಿ ಅವತರಿಸಿದ ಶ್ರೀ ಗಿರಿರುದ್ರೇಶ್ವರ ಸ್ವಾಮಿ ಸರ್ವರನ್ನು ಕಾಪಾಡಲೆಂದು ಶುಭ ಹಾರೈಸಿದರು.

ಸಮಾರಂಭದ ನೇತೃತ್ವ ವಹಿಸಿದ್ದ ಹುಲಿಕೆರೆ ದೊಡ್ಡಮಠದ ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ದೇವರು ಕೊಟ್ಟಿದ್ದು ಕೊನೆತನಕ ಮನುಷ್ಯ ಕೊಟ್ಟಿದ್ದು ಮನೆತನಕ ಎಂಬ ಗಾದೆ ಮಾತಿದೆ. ಭೌತಿಕ ಬದುಕು ಬಲಗೊಳ್ಳಲು ದೈವ ಸಾನ್ನಿಧ್ಯದ ಅವಶ್ಯಕತೆಯಿದೆ. ಧರ್ಮ ಮತ್ತು ಜ್ಞಾನ ಮಾರ್ಗದಲ್ಲಿ ನಡೆದು ಜೀವನ ಸಾರ್ಥಕಪಡಿಸಿಕೊಳ್ಳಬೇಕಾಗಿದೆ ಎಂದರು.

ಅ.ಭಾ.ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಎಚ್‌.ಎಂ.ಲೋಕೇಶ್‌ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಅರ್ಚಕ ಕೆ.ಯು. ಚಿದಾನಂದ ಶರ್ಮಾ ಸ್ವಾಗತಿಸಿ ನಿರೂಪಿಸಿದರು. 

ಟಾಪ್ ನ್ಯೂಸ್

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.