ಐದು ಕುಟುಂಬಗಳಿಗೆ ಜಲಬಂಧನ


Team Udayavani, Jul 10, 2018, 4:20 PM IST

chikk.jpg

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ಸೋಮವಾರವೂ ಮುಂದುವರಿದಿದೆ. ಭದ್ರಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಮೂಡಿಗೆರೆ ತಾಲೂಕಿನ ಹೊಳೆಕುಡಿಗೆ ಗ್ರಾಮದಲ್ಲಿ ಐದು ಕುಟುಂಬಗಳು ಕಳೆದ ಒಂದು ವಾರದಿಂದ ಮನೆಯಿಂದ ಹೊರ ಬರಲು ಆಗದೆ ನರಕಯಾತನೆ ಅನುಭವಿಸುತ್ತಿವೆ.

ಮೂಡಿಗೆರೆ ತಾಲೂಕಿನ ಹೊಳೆಕುಡಿಗೆ ಗ್ರಾಮಕ್ಕೆ ರಸ್ತೆ ಸಂಪರ್ಕವಿಲ್ಲ. ಈ ಗ್ರಾಮದಲ್ಲಿ ವಾಸವಾಗಿರುವ ಐದು ಕುಟುಂಬಗಳು ಗ್ರಾಮದಿಂದ ಬೇರೆಡೆ ತೆರಳಬೇಕಾದರೆ ಭದ್ರಾ ನದಿ ದಾಟಬೇಕಾಗಿದೆ. ಕಳೆದ 40 ವರ್ಷಗಳಿಂದ ಇಲ್ಲಿಯ ಜನ ತೆಪ್ಪದ ಸಹಾಯದಿಂದ ನದಿ ದಾಟಿ ಬೇರೆಡೆ ತೆರಳುತ್ತಿದ್ದರು. 

ಆದರೆ ಕಳೆದ ಹಲವು ದಿನಗಳಿಂದ ಎಡಬಿಡದೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭದ್ರಾ
ನದಿಯಲ್ಲಿ ನೀರು ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ನದಿಯಲ್ಲಿ ತೆಪ್ಪವನ್ನೂ ಬಳಸಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮನೆಯಿಂದ ಹೊರ ಬರಲು ಸಾಧ್ಯವಾಗದೆ ನಿತ್ಯ ಬಳಕೆ ಸಾಮಗ್ರಿಗಳನ್ನು ತರಲೂ ಪರಿತಪಿಸುವಂತಾಗಿದೆ.

ಶೃಂಗೇರಿ ತಾಲೂಕಿನಲ್ಲೂ ಸೋಮವಾರ ನಿರಂತರ ಮಳೆ ಸುರಿಯುತ್ತಲೇ ಇದ್ದು, ತುಂಗಾ ನದಿ ತುಂಬಿ ಹರಿಯುತ್ತಿದೆ.
ಮೆಣಸೆ ಗ್ರಾಪಂ ವ್ಯಾಪ್ತಿಯ ಕಿಕ್ರೆ ಹಳ್ಳದ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಸಂಚಾರ ಸ್ಥಗಿತಗೊಂಡಿದೆ. ಕಿಕ್ರೆ ರಸ್ತೆ ಬಂದ್‌ ಆದ ಪರಿಣಾಮ ಸಸಿಮನೆ-ಕೆರೆಮನೆ ರಸ್ತೆ ಮೂಲಕ ಜನ ಸಂಚರಿಸಲು ಆರಂಭಿಸಿದ್ದಾರೆ. ಆದರೆ ಮಧ್ಯಾಹ್ನ ಮರಟೆ ಹಳ್ಳವೂ ಉಕ್ಕಿ ಹರಿದ ಪರಿಣಾಮ ಇಲ್ಲಿಯೂ ಸಂಚಾರ ಸ್ಥಗಿತಗೊಂಡು ಜನ ಪರದಾಡಿದರು. ಸತತ ಮಳೆಯಿಂದ ಹಲವೆಡೆ ಭೂ ಕುಸಿತವಾಗಿದೆ.

ಎನ್‌.ಆರ್‌.ಪುರ ಹಾಗೂ ಕೊಪ್ಪ ತಾಲೂಕುಗಳಲ್ಲಿಯೂ ಬೆಳಗ್ಗೆಯಿಂದ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ನಗರ
ಸೇರಿದಂತೆ ತಾಲೂಕಿನ ವಿವಿಧೆಡೆಗಳಲ್ಲಿ ಬೆಳಗ್ಗೆಯಿಂದ ಆಗಾಗ ಮಳೆ ಜೋರಾಗಿ ಸುರಿಯುತ್ತಿದೆ. ಉಳಿದಂತೆ ಬಯಲು ಸೀಮೆಯ ಕಡೂರು ಮತ್ತು ತರೀಕೆರೆ ತಾಲೂಕುಗಳಲ್ಲಿ ಇಡೀದಿನ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಆಗಾಗ ಸೋನೆ ಮಳೆಯಾಗಿದೆ.

ಗಿರಿ ಶ್ರೇಣಿಯಲ್ಲಿ ಸುಗಮ ಸಂಚಾರ: ಧಾರಾಕಾರ ಮಳೆಯಿಂದಾಗಿ ಮುಳ್ಳಯ್ಯನಗಿರಿಯ ಅಲ್ಲಲ್ಲಿ ಗುಡ್ಡ ಕುಸಿದು ಭಾನುವಾರ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ವಾರಾಂತ್ಯವಾಗಿದ್ದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದರಿಂದ ಕುಸಿದಿದ್ದ ಬಂಡೆ ಕಲ್ಲುಗಳನ್ನು ತೆರವುಗೊಳಿಸಲು ವಿಳಂಬವಾಗಿತ್ತು. ಪ್ರವಾಸಿಗರ ಸಂಖ್ಯೆ ಕಡಿಮೆಯಾದ ಕೂಡಲೇ ಭಾನುವಾರ ರಾತ್ರಿಯೇ ಕಲ್ಲುಗಳನ್ನು ತೆರವುಗೊಳಿಸಲಾಯಿತು. ಸೋಮವಾರವು ಗಿರಿಶ್ರೇಣಿಯಲ್ಲಿ ಉತ್ತಮ ಮಳೆಯಾಗಿದ್ದರೂ ಎಲ್ಲಿಯೂ ಗುಡ್ಡ ಕುಸಿತವಾಗಿರುವ ಬಗ್ಗೆ ವರದಿಯಾಗಿಲ್ಲ

ಮುಂದುವರಿದ ವರುಣನ ಆರ್ಭಟ
ಶಿವಮೊಗ್ಗ:
ಮೂರ್‍ನಾಲ್ಕು ದಿನಗಳಿಂದ ಪುನರ್ವಸು ಮಳೆ ತನ್ನ ಅಬ್ಬರ ತೋರುತ್ತಿದ್ದು, ತೀರ್ಥಹಳ್ಳಿ, ಸಾಗರ, ಹೊಸನಗರ ವ್ಯಾಪ್ತಿಯಲ್ಲಿ ಭರ್ಜರಿ ಮಳೆಯಾಗುತ್ತಿದೆ. ಭಾನುವಾರ ಎಡೆಬಿಡದೆ ಸುರಿದ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದ ಜನಜೀವನ ಅಸ್ತವ್ಯಸ್ತವಾಗಿದೆ. ಸೋಮವಾರ ಮಧ್ಯಾಹ್ನದ ನಂತರ ಮಳೆ ಅಬ್ಬರ ಕಡಿಮೆಯಾಗಿದೆ. ಮೂರ್‍ನಾಲ್ಕು ದಿನಗಳಿಂದ ಮಳೆ ಅಬ್ಬರಿಸುತ್ತಿದ್ದ ಕಾರಣ ಸೋಮವಾರ ಜಿಲ್ಲಾಧಿಕಾರಿ ತೀರ್ಥಹಳ್ಳಿ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದರು. ಶಾಲೆ ರಜೆಯಿದ್ದ ಕಾರಣ ತಾಯಿಯೊಂದಿಗೆ ದಿನಸಿ ಖರೀದಿಗೆ ಹೋಗುತ್ತಿದ್ದ ಬಾಲಕಿಯೊಬ್ಬಳು ಕಾಲುಸಂಕ ದಾಟುವಾಗ ಜಾರಿ ಬಿದ್ದು ಹಳ್ಳದಲ್ಲಿ ಕೊಚ್ಚಿ ಹೋಗಿರುವ ಘಟನೆ ಆಗುಂಬೆ ಬಳಿಯ ಹೊನ್ನೆತಾಳು ಗ್ರಾಪಂ ವ್ಯಾಪ್ತಿಯ ದುಡ್ಲಿ ಮನೆ ಬಳಿ ನಡೆದಿದೆ. ಆಗಾಗ ಬರುತ್ತಿರುವ ಜಡಿ ಮಳೆಯಿಂದಾಗಿ ಶೋಧ ಕಾರ್ಯಕ್ಕೆ ತೊಡಕಾಗಿದೆ. ಬಾಲಕಿ ಕೊಚ್ಚಿ ಹೋಗಿರುವ ಹಳ್ಳವು ಮಾಲತಿ ನದಿ ಸೇರಿ ಅಲ್ಲಿಂದ ಮುಂದೆ ತುಂಗಾ ನದಿ ಸೇರುತ್ತದೆ. ಜಡಿ ಮಳೆ ಹಾಗೂ ಉಕ್ಕಿ ಹರಿಯುತ್ತಿರುವ ಹಳ್ಳಕೊಳ್ಳ, ನದಿಗಳಿಂದಾಗಿ ಶೋಧ ಕಾರ್ಯಕ್ಕೆ ಅಡ್ಡಿಯಾಗಿದೆ. ಆಶಿಕಾ (15) ಕೊಚ್ಚಿ ಹೋದ ಯುವತಿ. ದಿ| ಯೋಗೇಂದ್ರ ಗೌಡ್ರು ಹಾಗೂ ಅನಿತಾ ದಂಪತಿ ಪುತ್ರಿಯಾದ ಆಕೆ ಗುಡ್ಡೇಕೇರಿಯಲ್ಲಿ 9ನೇ ತರಗತಿ ಓದುತ್ತಿದ್ದಳು.

ಇನ್ನು ಅರೆಮಲೆನಾಡು ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ, ಸೊರಬದಲ್ಲಿ ಸಾಮಾನ್ಯ ಮಳೆಯಾಗಿದೆ. ಉಳಿದಂತೆ ಯಾವುದೇ ತಾಲೂಕುಗಳಲ್ಲಿ ಮಳೆ ಅವಘಡಗಳು ಸಂಭವಿಸಿಲ್ಲ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.