ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಕಾರ್ಯ ಆರಂಭ: ವೈಶಾಲಿ


Team Udayavani, Aug 4, 2018, 4:57 PM IST

chikk.jpg

ಚಿಕ್ಕಮಗಳೂರು: ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ ನಡೆಯುತ್ತಿದ್ದು, ಮತಗಟ್ಟೆ ಅಧಿಕಾರಿಗಳು ಆ.10ರವರೆಗೆ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಹಾಗೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಎಂ.ಎಲ್‌. ವೈಶಾಲಿ ತಿಳಿಸಿದರು. ಅಪರ ಜಿಲ್ಲಾಧಿಕಾರಿಗಳ ಕಚೇರಿ ಕೊಠಡಿಯಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮತದಾರರ ಪಟ್ಟಿಯಲ್ಲಿ 18 ವರ್ಷ ತುಂಬಿದ ಹಾಗೂ ಬಿಟ್ಟು ಹೋಗಿರುವವರ ಹೆಸರನ್ನು ಸೇರ್ಪಡೆ ಮಾಡಬೇಕಲ್ಲದೆ
ಮರಣ ಹೊಂದಿರುವವರ, ಬೇರೆಡೆಗೆ ವರ್ಗಾವಣೆಯಾಗಿರುವವರ ಹೆಸರುಗಳನ್ನು ಪರಿಶೀಲಿಸಿ ಕೈಬಿಡಬೇಕು. ನಗರ ಪ್ರದೇಶಗಳಲ್ಲಿ ಒಂದು ವಾರ್ಡ್‌ನಲ್ಲಿ ಅಪ್ಪ ಅಮ್ಮನ ಹೆಸರು ಇದ್ದರೆ, ಮತ್ತೂಂದು ವಾರ್ಡ್‌ನಲ್ಲಿ ಮಕ್ಕಳ ಹೆಸರಿದ್ದರೆ ಇದನ್ನು ಸರಿಪಡಿಸಬೇಕು ಎಂದು ಹೇಳಿದರು.

ಮತದಾನ ಕೇಂದ್ರಗಳ ಭೌತಿಕ ಪರಿಶೀಲನೆ ಹಾಗೂ ಮತಗಟ್ಟೆಗಳ ಪುನರ್‌ ವಿಂಗಡಣೆ ಕಾರ್ಯ ಆ.20 ರಿಂದ ಸೆ.15 ರವರೆಗೆ ನಡೆಯಲಿದೆ. ಪೂರಕ ಪಟ್ಟಿಗಳ ತಯಾರಿಕೆ, ಪೂರಕ ಪಟ್ಟಿಯ ಮತದಾರರ ಪಟ್ಟಿಗೆ ಜೋಡಣೆ ಮಾಡುವ ಹಾಗೂ ಕರಡು ಮತದಾರರ ಪಟ್ಟಿಯ ತಯಾರಿಕೆ ಕಾರ್ಯವು ಸೆ.15 ರವರೆಗೆ ನಡೆಯಲಿದ್ದು ಏಕೀಕರಣಗೊಂಡ ಮತದಾರರ ಕರಡು ಪಟ್ಟಿಯನ್ನು ಅ.10 ರಂದು ಎಲ್ಲಾ ತಾಲೂಕು ಕಚೇರಿಗಳಲ್ಲಿ ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿ ಮತ್ತು ಆಯಾ ಮತದಾನದ ಕೇಂದ್ರಗಳಲ್ಲಿ ಪ್ರಕಟಿಸಲಾಗುವುದು ಎಂದರು. 

ಕರಡು ಪಟ್ಟಿಯ ಕುರಿತು ಅ.10 ರಿಂದ ನ.20ರವರೆ ಆಕ್ಷೇಪಣೆ ಹಾಗೂ ಹಕ್ಕನ್ನು ಸಲ್ಲಿಸಬಹುದಾಗಿದೆ. ಸ್ವೀಕೃತಗೊಂಡ ಹಕ್ಕು ಮತ್ತು ಆಕ್ಷೇಪಣೆಗಳನ್ನು ಡಿ.20 ರವರೆಗೆ ತೀರುವಳಿಗೊಳಿಸಲಾಗುವುದು ಎಂದು ಹೇಳಿದರು.

ಡಾಟಾ ಬೇಸ್‌ ಜೋಡಣೆ ಮಾಡಿ ಪೂರಕ ಪಟ್ಟಿಗಳ ತಯಾರಿಕೆ ಹಾಗೂ ಮುದ್ರಣ ಕಾರ್ಯವು 2019 ರ ಜನವರಿ 3 ರೊಳಗೆ ಮುಗಿಯಲಿದೆ. ಭಾವಚಿತ್ರವಿರುವ ಅಂತಿಮ ಮತದಾರರ ಪಟ್ಟಿಯನ್ನು 2019 ಜನವರಿ 4 ರಂದು ಪ್ರಕಟಿಸಲಾಗುವುದೆಂದು ತಿಳಿಸಿದರು. 

ಸಾರ್ವಜನಿಕರು ಈ ಸದಾವಕಾಶವನ್ನು ಸದುಪಯೋಗಪಡಿಸಿಕೊಂಡು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರ್ಪಡೆ ಮಾಡುವಂತೆ ಮನವಿ ಮಾಡಿದರು. ಸಭೆಯಲ್ಲಿ ಬಹುಜನ ಸಮಾಜ ಪಕ್ಷದ ಕೆ.ಟಿ.ರಾಧಾಕೃಷ್ಣ, ಸಿಪಿಐನ ಆರಾಧ್ಯ, ಕಾಂಗ್ರೆಸ್‌ ನ ಎಂ.ಎಸ್‌.ಸುರೇಶ್‌ ಕುಮಾರ್‌, ಬಿಜೆಪಿಯ ವರಸಿದ್ಧಿ ವೇಣುಗೋಪಾಲ್‌ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.