ಲ್ಯಾಂಡ್‌ ಆರ್ಮಿಗೆ ನೋಟಿಸ್‌ ನೀಡಲು ಒತ್ತಾಯ


Team Udayavani, Sep 4, 2018, 4:24 PM IST

chikk-1.jpg

ಎನ್‌.ಆರ್‌.ಪುರ: ಪಟ್ಟಣದ ಹಳೇಪೇಟೆಯಲ್ಲಿ ಹೈಟೆಕ್‌ ಮೀನು ಮಾರುಕಟ್ಟೆ ನಿರ್ಮಾಣ ಜವಾಬ್ದಾರಿ ಪಡೆದ ಲ್ಯಾಂಡ್‌ ಆರ್ಮಿಯವರು ಇದುವರೆಗೂ ಕಾಮಗಾರಿ ಪ್ರಾರಂಭಿಸಿಲ್ಲ, ಇದರಿಂದ ಲ್ಯಾಂಡ್‌ ಆರ್ಮಿಗೆ ನೋಟಿಸ್‌ ನೀಡುವಂತೆ ಸದಸ್ಯರು ಪ.ಪಂ. ಸಾಮಾನ್ಯ ಸಭೆಯಲ್ಲಿ ಒತ್ತಾಯಿಸಿದರು.

 ಪ.ಪಂ. ಅಧ್ಯಕ್ಷ ಆರ್‌.ರಾಜಶೇಖರ್‌ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಪ.ಪಂ. ಸಾಮಾನ್ಯ ಸಭೆಯಲ್ಲಿ ಸದಸ್ಯರಾದ ಲಕ್ಷ್ಮಣ ಶೆಟ್ಟಿ, ಸುಕುಮಾರ್‌ ಮಾತನಾಡಿ, ಇದುವರೆಗೂ ಕೂಡ ಮೀನು ಮಾರುಕಟ್ಟೆ ಕಾಮಗಾರಿ ಪ್ರಾರಂಭಿಸಿಲ್ಲ. 

ಕಾಮಗಾರಿ ಪ್ರಾರಂಭಿಸುತ್ತಾರೆ ಎಂಬ ಉದ್ದೇಶದಿಂದ ಮೀನು ಮಾರುಕಟ್ಟೆಯಲ್ಲಿದ್ದ ಹಳೆಯ 6 ಮಳಿಗೆಗಳನ್ನು ನೆಲಸಮ ಮಾಡಲಾಗಿದೆ. ಅಂಗಡಿ ಮಳಿಗೆಗಳನ್ನು ನೆಲಸಮ ಮಾಡದೇ ಇದ್ದಿದ್ದರೆ ಬಾಡಿಗೆಯಾದರೂ ಬರುತ್ತಿತ್ತು. ಪ.ಪಂ. ಆದಾಯವನ್ನೂ ಕಳೆದುಕೊಂಡಿದ್ದೇವೆ. ಮೀನು ಮಾರುಕಟ್ಟೆಯನ್ನೂ ಸಹ ಕಳಪೆ ಮಾಡಿದಲ್ಲಿ ಕಳಪೆ ಕಾಮಗಾರಿ ಮಾಡಿದ ಆರೋಪವನ್ನು ಜನಪ್ರತಿನಿಧಿಗಳಾದ ನಾವು ಎದುರಿಸಲು ಸಿದ್ಧವಿಲ್ಲ. ಆದ್ದರಿಂದ ಕೂಡಲೇ ಲ್ಯಾಂಡ್‌ ಆರ್ಮಿಯವರಿಗೆ ನೋಟಿಸ್‌ ನೀಡಿ ಎಂದು ಪ.ಪಂ. ಮುಖ್ಯಾಧಿಕಾರಿ ಕುರಿಯಕೋಸ್‌ ಅವರನ್ನು ಒತ್ತಾಯಿಸಿದರು.

ಪಟ್ಟಣದ ಅಗ್ನಿ ಶಾಮಕದಳ ಸಮೀಪದಲ್ಲಿ ಪ.ಪಂ.ಗೆ ಸೇರಿದ 1.20 ಎಕ್ರೆ ಜಾಗವನ್ನು ಪೋಡಿ ಮಾಡಿ ಜಾಗವನ್ನು ಗುರ್ತಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಈ ಬಗ್ಗೆ ಅಧಿಕಾರಿಗಳು ತುರ್ತು ಕ್ರಮಕೈಗೊಳ್ಳಬೇಕೆಂದು ಸದಸ್ಯರು ಒತ್ತಾಯಿಸಿದರು. ಮುಖ್ಯಾಧಿಕಾರಿ ಕುರಿಯಕೋಸ್‌ ಪ.ಪಂ.ಯ ಕಸವಿಲೇವಾರಿ ಘಟಕ ಸ್ಥಳಾಂತರಿಸುವಂತೆ ದ್ರುವತಾರೆ ಕನ್ನಡ ರಕ್ಷಣಾ ವೇದಿಕೆಯವರು ಹಾಗೂ ಲಿಂಗಾಪುರ ಗಾಮಸ್ಥರು ಮನವಿ ನೀಡಿದ್ದಾರೆ ಎಂದು ಸಭೆಗೆ ತಿಳಿಸಿದರು.

ಅಲ್ಲದೆ ಕಸವಿಲೇವಾರಿ ಘಟಕವನ್ನು 2001ರಲ್ಲಿಯೇ ಗುರ್ತಿಸಲಾಗಿದೆ. ಇದರ ಸುತ್ತಮುತ್ತಲಿನ 500 ಮೀಟರ್‌ ಅಳೆತ ಬಫರ್‌ ಜೋನ್‌ ಎಂದು ಘೋಷಿಸಲಾಗಿದೆ. ಆದರೂ ನಾಗಲಾಪುರ ಗ್ರಾ.ಪಂ ಯವರು ಅಲ್ಲಿ 2001ರ ನಂತರವೂ
ಕೂಡ ಹೊಸ ಮನೆಗಳಿಗೆ ಪರವಾನಗಿ ನೀಡಿದ್ದಾರೆ. ಇದರಿಂದ ಮನೆಗಳು ನಿರ್ಮಾಣವಾಗಿವೆ. ದ್ರುವತಾರೆ ಕರವೇಯವರು ಸ್ಥಳಾಂತರಕ್ಕೆ ಮನವಿ ನೀಡಿದ್ದಾರೆ. ಆದ್ದರಿಂದ ವೇದಿಕೆಗೆ ಹಾಗೂ ನಾಗಲಾಪುರ ಗ್ರಾ.ಪಂ.ಯವರಿಗೆ ಕಸವಿಲೇವಾರಿ ಘಟಕದಿಂದ 500 ಮೀಟರ್‌ ವ್ಯಾಪ್ತಿಗೆ ಬರುವ ಮನೆಗಳನ್ನು ತೆರವುಗೊಳಿಸಿಕೊಡುವಂತೆ ಹಿಂಬರ ನೀಡಿ ಎಂದರು. ನಂತರ ಸಭೆಯಲ್ಲಿ ಈ ಕುರಿತು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲು ತೀರ್ಮಾನ ಕೈಗೊಳ್ಳಲಾಯಿತು.

 ಸದಸ್ಯ ಲಕ್ಷ್ಮಣ ಶೆಟ್ಟಿ ಮಾತನಾಡಿ, ಪ.ಪಂ.ಯಲ್ಲಿ ಪಟ್ಟಣದ ವಾಸಿಗಳ ಕಟ್ಟಡ ಹಾಗೂ ನಿವೇಶನಕ್ಕೆ ಸಂಬಂಧಿಸಿದಂತೆ ದಾಖಲೆಗಳು ಹರಿದು ಹೋಗಿವೆ. ಇದರಿಂದ ಜನರು ಖಾತೆ ಮಾಡಿಸಿಕೊಳ್ಳಲು ತೊಂದರೆಯಾಗುತ್ತಿದೆ. ನಮ್ಮ ಪ.ಪಂ. ಕಚೇರಿಯಿಂದ ಆಗಿರುವ ತಪ್ಪಿಗೆ ಜನರು ಪರದಾಡುವಂತಾಗಿದೆ. ಆದ್ದರಿಂದ ನಿವೇಶನಕ್ಕೆ ಸಂಬಂಧಿಸಿದ ದಾಖಲೆ, ಅಸಸ್‌ಮೆಂಟ್‌ ಆಧಾರದ ಮೇಲೆ ಇ-ಸ್ವತ್ತು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

 ಪ.ಪಂ. ಉಪಾಧ್ಯಕ್ಷೆ ಸಾವಿತ್ರಿ, ಸದಸ್ಯರಾದ ಸಮೀರಾನಯೀಂ, ಅಬ್ದುಲ್‌ಸುಬಾನ್‌, ಆಶಾ ಶ್ರೀನಾಥ್‌, ನಾಗರತ್ನ, ಸುನೀಲ್‌ ಕುಮಾರ್‌, ಬಿಳಲ್‌ ಮನೆ ಉಪೇಂದ್ರ, ಲೆಕ್ಕಾಧಿಕಾರಿ ಉಷಾ, ಭವಾನಿ, ಛಾಯಾದೇವಿ, ಲಕ್ಷ್ಮ ಗೌಡ, ಕೃಷ್ಣಪ್ಪ, ಚಂದ್ರಕಾಂತ್‌, ವಿಜಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Temple Run: ಮತ್ತೆ ಮೋದಿ ಪ್ರಧಾನಿ ಆಗಬೇಕೆಂದು ಶತಾಯುಷಿ ಅಜ್ಜಿಯ ಟೆಂಪಲ್ ರನ್…

Temple Run: ಮತ್ತೆ ಮೋದಿ ಪ್ರಧಾನಿ ಆಗಬೇಕೆಂದು ಶತಾಯುಷಿ ಅಜ್ಜಿಯ ಟೆಂಪಲ್ ರನ್…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.