ಪಾಸಿಟಿವಿಟಿ ದರ ಶೇ. 5ಕ್ಕೆ ಇಳಿದರೆ ಲಾಕ್ ತೆರವು
Team Udayavani, Jun 23, 2021, 10:30 PM IST
ಶೃಂಗೇರಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.5 ಕ್ಕೆ ಇಳಿದರೆ ಮಾತ್ರ ಸಂಪೂರ್ಣ ಲಾಕ್ಡೌನ್ ತೆರವು ಮಾಡಬಹುದಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ತಾಪಂ ಸಭಾಂಗಣದಲ್ಲಿ ಮಂಗಳವಾರ ಕೋವಿಡ್ ನಿರ್ವಹಣೆ ಮತ್ತು ಪ್ರಕೃತಿ ವಿಕೋಪ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಸರಕಾರ ಪ್ರತಿ ಜಿಲ್ಲೆಯ ಸ್ಥಿತಿಗತಿ ಬಗ್ಗೆ ಪ್ರತಿ ದಿನವೂ ವರದಿ ಪಡೆಯುತ್ತಿದ್ದು, ಲಾಕ್ಡೌನ್ ತೆರವು ಮಾಡಲು ನಿದಿ ಷ್ಟ ಪಡಿಸಿದ ಪಾಸಿಟಿವಿಟಿ ಇರಬೇಕಿದೆ.
ಜಿಲ್ಲೆಯಲ್ಲಿ ಹಂತ- ಹಂತವಾಗಿ ಇಳಿಯುತ್ತಿರುವ ಪಾಸಿಟಿವಿಟಿ ದರದಿಂದ ಒಂದೆರಡು ದಿನದಲ್ಲಿ ಲಾಕ್ಡೌನ್ ತೆರವಾಗುವ ವಿಶ್ವಾಸವಿದೆ. ಪಾಸಿಟಿವ್ ಬಂದ ವ್ಯಕ್ತಿಗಳಿಗೆ ಬೇಗಾರಿನ ಮೊರಾರ್ಜಿ ಶಾಲೆ ವಸತಿ ಗೃಹದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 71 ರೋಗಿಗಳು ಬೇಗಾರು ವಸತಿ ನಿಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಕೋವಿಡ್ ಮೊದಲ ಅಲೆಗಿಂತ ಎರಡನೇ ಅಲೆ ಜೋರಾಗಿದ್ದು, ತಜ್ಞರ ಅನಿಸಿಕೆಯಂತೆ ಮೂರನೇ ಅಲೆ ಮಕ್ಕಳ ಮೇಲಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ತಾಲೂಕು ಆಡಳಿತ ಈಗಿನಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಆಸ್ಪತ್ರೆಯಲ್ಲಿ ಏನೆಲ್ಲಾ ಕೊರತೆ ಇದೆ ಅದನ್ನು ಶೀಘ್ರದಲ್ಲಿ ಭರ್ತಿ ಮಾಡಿಕೊಳ್ಳಬೇಕು. ಲಸಿಕೆ ಅಭಿಯಾನವನ್ನು ಪ್ರಧಾನ ಮಂತ್ರಿಗಳ ಆದೇಶದಂತೆ ಈಗ ಮತ್ತಷ್ಟು ಚುರುಕುಗೊಳಿಸಲಾಗಿದೆ ಎಂದರು.
ಸಭೆಯಲ್ಲಿ ಶಾಸಕ ಟಿ.ಡಿ. ರಾಜೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್, ತಹಶೀಲ್ದಾರ್ ಅಂಬುಜಾ, ತಾಪಂ ಕಾರ್ಯನಿರ್ವಹಣಾಧಿ ಕಾರಿ ಜಯರಾಂ ಇದ್ದರು. ಪಪಂ ಅಧ್ಯಕ್ಷ ಹರೀಶ್ ಶೆಟ್ಟಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ.ಸಿ. ಶಂಕರಪ್ಪ, ವೇಣುಗೋಪಾಲ್, ನೂತನಕುಮಾರ್, ತಲಗಾರು ಉಮೇಶ್ ಮತ್ತಿತರರು ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ