ರಾಜ್ಯ ಮಟ್ಟದ ಬಯಲು ಕುಸ್ತಿ ಪಂದ್ಯಾವಳಿಗೆ ಚಾಲನೆ


Team Udayavani, Oct 21, 2018, 5:50 PM IST

bell-1.jpg

ತರೀಕೆರೆ: ಕುಸ್ತಿ ಒಂದು ಪ್ರಾಚೀನ ಕಲೆ. ರಾಜಾಶ್ರಯದಲ್ಲಿ ಬೆಳೆದು ಬಂದ ಜಾನಪದ ಕ್ರೀಡೆ ಇಂದಿಗೂ ಎಲ್ಲಾ ವಯೋಮಾನದವರನ್ನು ಸೆಳೆಯುತ್ತಿರುವುದು ಸಂತೋಷದ ಸಂಗತಿ ಎಂದು ಜಿ.ಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಹೇಳಿದರು.

ಅವರು ಶ್ರೀ ಗುರು ರೇವಣಸಿದ್ದೇಶ್ವರ ಕುಸ್ತಿ ಸಂಘ ಬಯಲು ರಂಗಮಂದಿರದಲ್ಲಿ ಏರ್ಪಡಿಸಿರುವ ರಾಜ್ಯ ಮಟ್ಟದ ಬಯಲು ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.

ತರೀಕೆರೆಯಲ್ಲಿ ಪಾಳೇಗಾರರ ಕಾಲದಿಂದ ನಡೆದು ಬಂದಿರುವ ಕುಸ್ತಿ ಸ್ಪರ್ಧೆಯನ್ನು ಇಂದಿಗೂ ಉಳಿಸಿಕೊಂಡು ಬಂದಿರುವುದು ಹೆಮ್ಮೆಯ ಸಂಗತಿ. ಕುಸ್ತಿ ಅಭ್ಯಾಸ ಮಾಡುವುದರಿಂದ ಕುಸ್ತಿ ಪಟುವಿಗೆ ಸಮಾಜದಲ್ಲಿ ಉತ್ತಮ ಸ್ಥಾನ ದೊರೆಯುತ್ತದೆ. ಆತ ದೈಹಿಕವಾಗಿ ಬಲಿಷ್ಠವಾಗದೆ ತನ್ನ ಮನಸ್ಥಿತಿಯನ್ನು ತನ್ನ ಹತೋಟಿಯಲ್ಲಿಟ್ಟು ಕೊಳ್ಳುತ್ತಾನೆ. ಗರಡಿ ಮನೆಗಳಲ್ಲಿ ತನ್ನ ದೇಹವನ್ನು ಹುರುಪುಗೊಳಿಸುವುದರಿಂದ ಆತ ಆರೋಗ್ಯವಾಗಿರುತ್ತಾನೆ ಎಂದರು.

ಪುರಸಭಾಧ್ಯಕ್ಷೆ ಅಶ್ವಿ‌ನಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕುಸ್ತಿ ಪಂದ್ಯಾವಳಿಗಳಿಗೆ ಮಹಿಳೆಯರನ್ನು ಸಮಾರಂಭಕ್ಕೆ ಆಹ್ವಾನಿಸುತ್ತಿರುವುದು ಸಂತಸದ ವಿಷಯ. ಹಿಂದಿನ ದಿನಗಳಲ್ಲಿ ಕೇವಲ ಪತ್ರಿಕೆಗಳಲ್ಲಿ ಬರುವ ಸುದ್ದಿಗಳನ್ನು ಓದಿ ಕುಸ್ತಿ ಪಂದ್ಯಾವಳಿಗಳ ಬಗ್ಗೆ ತಿಳಿದುಕೊಳ್ಳುತ್ತಿದ್ದವು. ತರೀಕೆರೆ
ಕುಸ್ತಿಗೆ ತನ್ನದೆ ಆದ ಇತಿಹಾಸವಿದೆ.

ಇಲ್ಲಿನ ಕುಸ್ತಿ ಪಾಳೇಗಾರರ ಬಳುವಳಿ, ಅವರು ಬಿಟ್ಟು ಹೋದ ಕುಸ್ತಿ ಕಲೆಯನ್ನು ಇಂದಿಗೂ ಉಳಿಸಿ ಬೆಳೆಸಿಕೊಂಡು ಬಂದಿರುವುದು ಶ್ಲಾಘನೀಯ ವಿಚಾರ ಎಂದು ಹೇಳಿದರು. ಜಿ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಚ್‌.ಮಹೇಂದ್ರ ಮಾತನಾಡಿ, ನೂರಾರು ವರ್ಷಗಳಿಂದ ಕುಸ್ತಿ ಸ್ಪರ್ಧೆಯನ್ನು ಆಯೋಜಕರು ಆಯೋಜಿಸುತ್ತಿರುವುದು ಸುಲಭದ ಮಾತಲ್ಲ. ರಾಜ್ಯ ಮಟ್ಟದ ಹೆಸರು ಮಾಡಿರುವ ತರೀಕೆರೆ ಕುಸ್ತಿ ಸ್ಪರ್ಧೆಯನ್ನು ರಾಷ್ಟ್ರ ಮಟ್ಟದ ಕ್ರೀಡಾಪಟುಗಳು ಭಾಗವಹಿಸುವಂತೆ ಸಂಘಟಕರು ಮಾಡಬೇಕಾಗಿದೆ.

ಕುಸ್ತಿಯನ್ನು ಏರ್ಪಡಿಸುವುದಕ್ಕೆ ಎಲ್ಲರ ಸಹಕಾರ ಮುಖ್ಯ. ಕುಸ್ತಿ ಸಂಘದ ಪದಾಧಿಕಾರಿಗಳು ಶ್ರದ್ಧೆಯಿಂದ ಸಂಘಟಿಸುತ್ತಿರುವುದು ಸುತ್ಯಾರ್ಹವಾದುದು ಎಂದರು.

ಕುಸ್ತಿ ಸಂಘದ ಗೌರವಾಧ್ಯಕ್ಷ ವಗ್ಗಪ್ಪ ಮಂಜಣ್ಣ, ಡಿ.ಸಿ.ಸಿ. ಬ್ಯಾಂಕ್‌ ನಿರ್ದೇಶಕ ಟಿ.ಎಲ್‌. ರಮೇಶ್‌, ಕುಸ್ತಿ ಸಂಘದ ಅಧ್ಯಕ್ಷ ಟಿ.ಆರ್‌.ಕೇಶವ, ಪುರಸಭಾ ಸದಸ್ಯ ಬೈಟು ರಮೇಶ್‌, ಕರಡಿ ಲಕ್ಷ್ಮಣ, ಗೋವಿಂದಪ್ಪ ಮಾತನಾಡಿದರು. ಸಮಾರಂಭದಲ್ಲಿ ಮಾಜಿ ಪೈಲ್ವಾನರು, ರವಿ, ಟಿ.ಎಂ.ಭೋಜರಾಜ್‌ ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweqwe

Devaramane; ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರು

Charmady ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ… ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್

Charmady ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ… ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್

420 ನಂಬರ್‌ನವರಿಂದ 400 ಸ್ಥಾನ ಗೆಲ್ಲುವ ಮಾತು… ಬಿಜೆಪಿ ವಿರುದ್ಧ ಪ್ರಕಾಶ್ ರಾಜ್ ಕಿಡಿ

420 ನಂಬರ್‌ನವರಿಂದ 400 ಸ್ಥಾನ ಗೆಲ್ಲುವ ಮಾತು… ಬಿಜೆಪಿ ವಿರುದ್ಧ ಪ್ರಕಾಶ್ ರಾಜ್ ಕಿಡಿ

Chikkamagaluru: ಈಶ್ವರಪ್ಪನವರ ಬಂಡಾಯ ನಿರ್ಧಾರದಿಂದ ಪಕ್ಷಕ್ಕೆ ಮಾರಕವಾಗಬಾರದು: ಸಿಟಿ ರವಿ

Chikkamagaluru: ಈಶ್ವರಪ್ಪನವರ ಬಂಡಾಯ ನಿರ್ಧಾರದಿಂದ ಪಕ್ಷಕ್ಕೆ ಮಾರಕವಾಗಬಾರದು: ಸಿಟಿ ರವಿ

ಈಶ್ವರಪ್ಪ ಬಂಡಾಯ ಸ್ಪರ್ಧೆ: ಶೀಘ್ರದಲ್ಲಿ ಗೊಂದಲಗಳು ಬಗೆಹರಿಯುತ್ತದೆ; ಕೋಟ ಶ್ರೀನಿವಾಸ ಪೂಜಾರಿ

ಈಶ್ವರಪ್ಪ ಬಂಡಾಯ ಸ್ಪರ್ಧೆ: ಶೀಘ್ರದಲ್ಲಿ ಗೊಂದಲಗಳು ಬಗೆಹರಿಯುತ್ತದೆ; ಕೋಟ ಶ್ರೀನಿವಾಸ ಪೂಜಾರಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.