ಹಿಂದುಳಿದವರ ಅಭಿವೃದ್ಧಿಕಾರ್ಯಗತವಾಗಲಿ: ಸಿದ್ದು


Team Udayavani, Nov 12, 2018, 3:42 PM IST

shiv-1.jpg

ಚಿಕ್ಕಮಗಳೂರು: ಹಿಂದುಳಿದ ವರ್ಗದವರಿಗೆ ಶೈಕ್ಷಣಿಕ ಸಂಸ್ಥೆ ಬೇಕು. ಧಾರ್ಮಿಕ ಕೇಂದ್ರ ಬೇಕು ಎಂದು ಬಾಯಿ ಮಾತಿನಲ್ಲಿ ಹೇಳಿದರೆ ಸಾಲದು. ಅದು ಕಾರ್ಯಗತವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ, ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.

ಜಿಲ್ಲಾ ಕುರುಬರ ಸಂಘದಿಂದ ಜಿಲ್ಲಾ ಪಂಚಾಯತ್‌ ಮುಂಭಾಗ ನಿರ್ಮಿಸಿರುವ ಕನಕ ಸಮುದಾಯ ಭವನವನ್ನು ಭಾನುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಹಿಂದುಳಿದ ವರ್ಗಕ್ಕೆ ಒಂದು ಗುರುಪೀಠ ಮಾಡಲೇಬೇಕು ಎಂಬ ಛಲದಿಂದ 1988 ರಿಂದ ಪ್ರಯತ್ನ ಆರಂಭಿಸಿ 1991ರಲ್ಲಿ ಕನಕ ಗುರುಪೀಠ ಸ್ಥಾಪನೆಯಾಯಿತು. ಅದರಡಿ ಶಿಕ್ಷಣ ಸಂಸ್ಥೆಗಳು ಬೆಳೆದಿವೆ. ಅಲ್ಲಿಯವರೆಗೆ ಕುರುಬ ಸಮಾವೇಶ ಮಾಡುವುದು ಉಂಡು ಎದ್ದು ಹೋಗುವ ಕೆಲಸ ನಡೆಯುತ್ತಿತ್ತು. ಈಗ ರಾಜ್ಯದ 4 ಭಾಗದಲ್ಲಿ ಕುರುಬ ಸಮಾಜದ ಗುರುಪೀಠಗಳು ತಲೆ ಎತ್ತಿವೆ. ಬೆಂಗಳೂರಿನಲ್ಲಿ ಮೂರ್‍ನಾಲ್ಕು ಕಡೆ ಇದ್ದ ಕುರುಬ ಸಮಾಜದ ಆಸ್ತಿಯನ್ನು ಕಬಳಿಸುವ ಪ್ರಯತ್ನ ನಡೆದಿತ್ತು. ಅದನ್ನು ತಡೆದು ಉಳಿಸಲಾಗಿದೆ ಎಂದರು. 

ಮುಖಂಡರು ಹಾಗೂ ಸಮುದಾಯದ ಸ್ವಾಮೀಜಿಗಳ ಪ್ರಯತ್ನದಿಂದ ಚಿಕ್ಕಮಗಳೂರಿನಲ್ಲಿ ಕನಕ ಸಮುದಾಯ ಭವನಕ್ಕೆ 5.5 ಎಕರೆ ಜಾಗ ಹಾಗೂ ಮೆಡಿಕಲ್‌ ಕಾಲೇಜಿಗೆಂದು 40 ಎಕರೆ ಭೂಮಿಯನ್ನು ಸರಕಾರ ಮಂಜೂರು ಮಾಡಿದೆ. ಮೆಡಿಕಲ್‌ ಕಾಲೇಜನ್ನೂ ನಾನೇ ಮಂಜೂರು ಮಾಡಿಸಿಕೊಟ್ಟೆ. ಆದರೆ, ಕಾಲೇಜ್‌ ಕಟ್ಟಡ ನಿರ್ಮಿಸಲು ದುಡ್ಡಿಲ್ಲ ಎಂದು ಕೈ ಚೆಲ್ಲಿದರು. 

1986 ರಲ್ಲಿ ನಾನು ಪಶುಸಂಗೋಪನಾ ಸಚಿವನಾಗಿದ್ದಾಗ ಕನಕ ಸಮುದಾಯ ಭವನಕ್ಕೆ ನಾನೇ ಅಡಿಗಲ್ಲು ಹಾಕಿದ್ದೆ. 32 ವರ್ಷದ ನಂತರ ಭವನ ಉದ್ಘಾಟನೆಯಾಗುತ್ತಿದೆ. ಇದರಲ್ಲಿ ಶ್ರೀ ಈಶ್ವರಾನಂದಪುರಿ ಸ್ವಾಮೀಜಿಯವರ ಪ್ರಯತ್ನವೂ ಸಾಕಷ್ಟಿದೆ. ಕಟ್ಟಡ ನಿರ್ಮಿಸಲು ಇಲ್ಲಿಯ ತನಕ ಕಷ್ಟವಾಗಿರಬಹುದು. ಇನ್ನು ಮುಂದೆ ನಿರ್ವಹಣೆ ಕಷ್ಟವಾಗುವುದಿಲ್ಲ. ಈ ಜಿಲ್ಲೆಯಲ್ಲಿ ಬಾಡಿಗೆ ಕೊಟ್ಟು ಮದುವೆ ಮಾಡುವವರೇ ಜಾಸ್ತಿಯಾಗಿದ್ದಾರೆ. 

ಉದ್ಘಾಟನೆಗೆ ಮುನ್ನವೇ 8 ಮದುವೆ ಬುಕ್‌ ಆಗಿವೆ ಎಂದು ಕೇಳಿದೆ. ಇಲ್ಲಿ ಪಾರ್ಕಿಂಗ್‌ ವ್ಯವಸ್ಥೆಗೆ ವಿಶಾಲ ಜಾಗವಿದೆ. ಹಾಗಾಗಿ ಇಲ್ಲಿಗೆ ಬಹಳ ಬೇಡಿಕೆಯೂ ಬರಲಿದೆ ಎಂದರು. ಕುರುಬ ಸಮುದಾಯದ ಬಡವರಿಗೆ ಆದಷ್ಟು ಕಡಿಮೆ ಬಾಡಿಗೆ ಪಡೆದು ಭವನ ಕೊಡಬೇಕು. ಇಲ್ಲದಿದ್ದರೆ ವ್ಯಾಪಾರ ಆಗಿಬಿಡುತ್ತದೆ. ಸರ್ಕಾರ ಅನುದಾನ ನೀಡಿರುವುದು ಸಾರ್ವಜನಿಕರಿಗೆ ಉಪಯೋಗವಾಗಲಿ ಎಂದು. ಆ ಉದ್ದೇಶ ಈಡೇರಿದರೆ ಸಾರ್ಥಕತೆ ಹೆಚ್ಚಾಗುತ್ತದೆ ಎಂದರು. 

ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆ ಏರುತ್ತಿದ್ದಂತೆ ಜಯಕಾರದ ಘೋಷಣೆ ಮಾರ್ಧನಿಸಿತು. ಕಾರ್ಯಕ್ರಮದುದ್ದಕ್ಕೂ ಸಂಘ, ಸಂಸ್ಥೆ ಹಾಗೂ ಅಭಿಮಾನಿಗಳಿಂದ  ಹಾರ ತುರಾಯಿ ಹಾಕಿ ಅಭಿನಂದಿಸಿದರು. ಹೆಲಿಕಾಪ್ಟರ್‌ ಸಮಯಕ್ಕೆ ಸರಿಯಾಗಿ ಟೇಕಾಫ್‌ ಆಗಬೇಕಿದ್ದ ಕಾರಣ ಸ್ವತಃ ಸಿದ್ದರಾಮಯ್ಯ ನಾನೇ ಭಾಷಣ ಆರಂಭಿಸುವುದಾಗಿ ಮೈಕ್‌ ಮುಂದೆ ನಿಂತರು. ಆದರೂ ಹಾರ ಹಾಕುವವರ ಸಂಖ್ಯೆ ಹೆಚ್ಚಾದಾಗ ಒಂದು ಹಂತದಲ್ಲಿ ತುಸು ಕೋಪದಿಂದ ಅಭಿಮಾನಿಗಳನ್ನು ಗದರಿಸಿ ಸುಮ್ಮನಿರಿಸಿದ ಸಿದ್ದರಾಮಯ್ಯ ಮಾತು ಆರಂಭಿಸಿದರು. ಕಾರ್ಯಕ್ರಮದಲ್ಲಿ ಸಹಸ್ರಾರು ಜನ ಭಾಗವಹಿಸಿದ್ದರು.

ಕನಕ ಗುರುಪೀಠದ ಶ್ರೀಈಶ್ವರಾನಂದಪುರಿ ಸ್ವಾಮೀಜಿ, ಶ್ರೀ ಶಿವಾನಂದಪುರಿ ಸ್ವಾಮೀಜಿ ಆಶೀರ್ವಚನ ನೀಡಿದರು. ಮಾಜಿ
ಎಂಎಲ್‌ಸಿ ಗಾಯತ್ರಿ ಶಾಂತೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಅರಣ್ಯ ಸಚಿವ ಆರ್‌.ಶಂಕರ್‌, ಮಾಜಿ ಸಚಿವ ಎಚ್‌.ಎಂ. ರೇವಣ್ಣ, ಶಾಸಕರಾದ ಸಿ.ಟಿ.ರವಿ, ಟಿ.ಡಿ. ರಾಜೇಗೌಡ, ಎಂ.ಪಿ. ಕುಮಾರಸ್ವಾಮಿ, ಎಸ್‌.ಎಲ್‌. ಧರ್ಮೇಗೌಡ, ಎಸ್‌.ಎಲ್‌. ಭೋಜೇಗೌಡ ಮಾತನಾಡಿದರು.
 
ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕೆ.ಎಂ. ಮಂಜುನಾಥ್‌ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಭಾ ಸದಸ್ಯ ಜೈರಾಂ ರಮೇಶ್‌, ಎಂ ಎಲ್‌ ಸಿ ಪ್ರಾಣೇಶ್‌, ಮಾಜಿವರಾದ ಡಾ| ಮೋಟಮ್ಮ, ಬಿ.ಬಿ. ನಿಂಗಯ್ಯ, ಮಾಜಿ ಶಾಸಕರಾದ ಶ್ರೀನಿವಾಸ್‌, ಟಿ.ವಿ. ಶಿವಶಂಕರಪ್ಪ, ಕುರುಬರ ಸಂಘದ ಕಾರ್ಯದರ್ಶಿ ಶಾಂತೇಗೌಡ, ಕೆ.ಎಂ. ಕೆಂಪರಾಜು, ರೇಖಾಹುಲಿಯಪ್ಪಗೌಡ, ಬಿ.ಎಲ್‌.ಶಂಕರ್‌, ಕಾಂಗ್ರೆಸ್‌ ಅಧ್ಯಕ್ಷ ಡಾ| ಡಿ.ಎಲ್‌.ವಿಜಯ್‌ಕುಮಾರ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.