ಭೂಮಿ-ವಸತಿ ಹಕ್ಕು ಸಮಸ್ಯೆ ಬಗೆಹರಿಸಲು ಆಗ್ರಹ


Team Udayavani, Nov 30, 2018, 4:34 PM IST

chikk-2.jpg

ಚಿಕ್ಕಮಗಳೂರು: ಭೂಮಿ ಮತ್ತು ವಸತಿ ಹಕ್ಕು ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಭೂಮಿ ಮತ್ತು ವಸತಿ ಹಕ್ಕು ವಂಚಿತರ ಸಮಿತಿ ವತಿಯಿಂದ ನಗರದ ಆಜಾದ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಮುಖಂಡರು ಮತ್ತು ಕಾರ್ಯಕರ್ತರು ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಚಿಕ್ಕಮಗಳೂರು ತಾಲೂಕಿನ ಆವತಿ ಹೋಬಳಿಯ ದಾನಿಹಳ್ಳಿ, ಅಂಬಳೆ ಹೋಬಳಿ, ಮಲ್ಲಂದೂರು, ಕೆಸರ್ಕೆ, ಮುಳ್ಳುವರೆ, ಲಕ್ಯಾ ಹೋಬಳಿಯ ಲಕ್ಕುಮ್ಮನಹಳ್ಳಿ, ಆಲ್ದೂರು ಹೋಬಳಿ ಕಬ್ಬಿಣದ ಸೇತುವೆ ಸಮೀಪದ ಕೆಳಗೂರು ಗ್ರಾಮ, ವಸ್ತಾರೆ ಹೋಬಳಿಯ ಕೆಳಗಣೆಯಲ್ಲಿ ತಲೆದೋರಿರುವ ಗ್ರಾಮದ ಭೂಮಿ ಸಮಸ್ಯೆ ಬಗೆಹರಿಸಬೇಕು. ಭೂರಹಿತರು ಮತ್ತು ನಿವೇಶನ ರಹಿತರಿಗೆ ಭೂಮಿ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮೂಡಿಗೆರೆ ತಾಲೂಕಿನ ಕಳಸಾ ಹೋಬಳಿ ಸಂಸ್ಥೆ ಗ್ರಾಮ, ಕೆ. ಕೆಳಗೂರು, ಕುಂದೂರು, ಸಾರಗೋಡು, ಅಣಜೂರು, ಗೋಣಿಬೀಡು ಗ್ರಾಮದ ನಿವಾಸಿಗಳಿಗೆ ಭೂಮಿ ಕೊಡಬೇಕು. ಕೊಪ್ಪ ತಾಲ್ಲೂಕಿನ ಮಾಗುಂಡಿ ಹೋಬಳಿಯ ಗುಡ್ಡೆತೋಟ, ಕೂಳೂರು, ಕಲ್ಲುಗುಡ್ಡೆ ಗ್ರಾಮದ ಭೂಹೀನ ದಲಿತರಿಗೆ ಹಕ್ಕುಪತ್ರ ಕೊಡಬೇಕು. ಕೌಳಿ ಮತ್ತು ಸೀಗೋಡು ದಲಿತ ಕುಟುಂಗಳಿಗೆ ತಲಾ ಎರಡು ಎಕರೆ ಭೂಮಿ ಮಂಜೂರು ಮಾಡಬೇಕು. ಹೆರೂರಿನ ದೇವಯ್ಯ ಇತರೆ 10 ದಲಿತ ಕುಟುಂಬಗಳಿಗೆ ಭೂಮಿ ಮಂಜೂರಾಗಿದ್ದು, ಜಮೀನು
ಗುರುತಿಸಿ ಕೊಡಬೇಕು. ಕಲ್ಲುಗುಡ್ಡೆಯ ಲಕ್ಷಯ್ಯ ಇತರರ 14 ಎಕರೆ ದರಖಾಸ್ತು ಭೂಮಿಗೆ ಹಕ್ಕು ಪತ್ರ ಕೊಡಬೇಕು ಎಂದು ಆಗ್ರಹಿಸಿದರು.

ಶೃಂಗೇರಿ ತಾಲೂಕಿನ ನೆಮ್ಮೆರಾ ಎಸ್ಟೇಟಿನ ಬಡವರಿಗೆ ಹಕ್ಕು ಪತ್ರ ನೀಡಬೇಕು. ಹೊಸಕೆರೆ ಗ್ರಾಮದ ಜನರಿಗೆ ಭೂಮಿ ಗುರುತಿಸಬೇಕು ಸೇರಿದಂತೆ ಇತರೆ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು. ಗೌಸ್‌ ಮೊಹಿಯುದ್ದೀನ್‌, ಕೃಷ್ಣಮೂರ್ತಿ, ಹಸನಬ್ಬ, ಕೌಳಿರಾಮು, ಹಾಂದಿ ಲಕ್ಷ್ಮಣ, ನೀಲುಗುಳಿ ಪದ್ಮನಾಬ್‌ ಇತರರಿದ್ದರು. 

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.