ಮುಗಿಯದ ನಾಮಫಲಕ ವಿವಾದ: ಪ್ರತಿಭಟನೆ


Team Udayavani, Dec 1, 2018, 5:01 PM IST

chikk.jpg

ಸಾಗರ: ನಗರದ ನೆಹರೂ ನಗರದ 7ನೇ ತಿರುವಿನ ಹೊಸ ಉಪ್ಪಾರ ಕೇರಿ ಸರ್ಕಲ್‌ನಲ್ಲಿ ತೆರವುಗೊಳಿಸಿರುವ ನಾಮಫಲಕವನ್ನು ಪುನರ್‌ ಅಳವಡಿಸುವಂತೆ ಒತ್ತಾಯಿಸಿ ಶುಕ್ರವಾರ ವೀರ ಮಾರುತಿ ಯುವಕ ಸಂಘದ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ವೀರಮಾರುತಿ ದೇವಸ್ಥಾನದಿಂದ ಹೊರಟ ಬೃಹತ್‌ ಪ್ರತಿಭಟನಾ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ನಗರಸಭೆ ಎದುರು ಧರಣಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಪ್ರತಿಭಟನಾನಿರತರು ಬೇಡಿಕೆ ಈಡೇರುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಪಟ್ಟು ಹಿಡಿದರು. ಪ್ರತಿಭಟನಾನಿರತರು ನಗರಸಭೆ ಅಧ್ಯಕ್ಷರ ವಾಹನವನ್ನು ಅಡ್ಡಗಟ್ಟಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸುವ ಜೊತೆಗೆ ಸ್ಥಳದಲ್ಲಿ ಗಂಜಿ ಕೇಂದ್ರ ಸ್ಥಾಪಿಸಿ ಅಹೋರಾತ್ರಿ ಧರಣಿ ನಡೆಸುವ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಡಿವೈಎಸ್‌ಪಿ ಮಂಜುನಾಥ ಕವರಿ, ಯಾವುದೇ ಕಾರಣಕ್ಕೂ ಗಂಜಿ ಕೇಂದ್ರ ಸ್ಥಾಪಿಸಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಆಗ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಪರಸ್ಪರ ಮಾತಿನ ಚಕಮಕಿ ನಡೆಯಿತು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯು.ಎಚ್‌. ರಾಮಪ್ಪ ಮಾತನಾಡಿ, ಹೊಸ ಉಪ್ಪಾರಕೇರಿ ಅತ್ಯಂತ ಹಳೆಯ ಸ್ಥಳವಾಗಿದೆ. ಮಾರಿಕಾಂಬಾ ದೇವಸ್ಥಾನ ಪ್ರಾರಂಭವಾದಾಗಿನಿಂದ ಉಪ್ಪಾರಕೇರಿ ಇಲ್ಲಿದೆ. ಮಾರಿಕಾಂಬಾ ಜಾತ್ರೆ ಸಂದರ್ಭದಲ್ಲಿ ಈ ಕೇರಿಯಿಂದಲೇ ಪೋತರಾಜ ಹೊರಡುತ್ತದೆ.  ಹಿಂದಿನಿಂದಲೂ ಈ ಕೇರಿಯನ್ನು ಹೊಸ ಉಪ್ಪಾರಕೇರಿ ರಸ್ತೆ ಸರ್ಕಲ್‌ ಎಂದು ಕರೆದುಕೊಂಡು ಬರಲಾಗುತ್ತಿದೆ. ಇದೀಗ ನಗರಸಭೆ ಅಧಿಕಾರಿಗಳು ನಾಮಫಲಕ ತೆಗೆದು ಹಾಕುವ ಮೂಲಕ ಸ್ಥಳೀಯರ ಮನಸ್ಸಿಗೆ ಘಾಸಿ ಉಂಟು ಮಾಡಿದ್ದಾರೆ ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಡಿ. ಮೇಘರಾಜ್‌ ಮಾತನಾಡಿ, ನಗರಸಭೆ ಅಧಿಕಾರಿಗಳು ಮತ್ತು ಪೊಲೀಸ್‌ ಇಲಾಖೆ ವಾಸ್ತವ ಸ್ಥಿತಿಯನ್ನು ಅರಿಯಬೇಕು. ಅತ್ಯಂತ ಹಳೆಯದಾದ ಉಪ್ಪಾರ ಕೇರಿಯಲ್ಲಿ ಅಶಾಂತಿ ಉಂಟು ಮಾಡಲು ಒಂದು ಕೋಮಿನವರು ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿರುವ ಕನ್ನಡ ಧ್ವಜಸ್ತಂಭವನ್ನು ಕೆಲವು ಕಿಡಿಗೇಡಿಗಳು ಕಾಲಿನಿಂದ ಒದ್ದು ನಾಡುನುಡಿಗೆ ಅವಮಾನ ಮಾಡಿದ್ದಾರೆ ಎಂದರು. ಸಂಘ ಪರಿವಾರದ ಪ್ರಮುಖರಾದ ಅ.ಪು. ನಾರಾಯಣಪ್ಪ ಮಾತನಾಡಿ, ಒಂದು ಕೋಮಿನವರು ಊರಿನಲ್ಲಿ ಅಶಾಂತಿ ಉಂಟು ಮಾಡಲು ಬೇರೆ ಬೇರೆ ಸಂದರ್ಭವನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ. ನಾವು ಕಾನೂನು ಉಲ್ಲಂಘಿಸುವ ಸ್ವಭಾವ ಹೊಂದಿಲ್ಲ. ಅಧಿಕಾರ ಇದೆ ಎಂದು ಜನರನ್ನು ಕೆರಳಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಕಿತ್ತು ಹಾಕಿರುವ ನಾಮಫಲಕವನ್ನು ತಕ್ಷಣ ಅಳವಡಿಸಬೇಕು. ಅನಗತ್ಯವಾಗಿ ನಮ್ಮನ್ನು ಹೋರಾಟಕ್ಕೆ ಇಳಿಸುವ ಪ್ರಯತ್ನ
ಮಾಡಲಾಗುತ್ತಿದೆ. ನಾವು ಸಮಾಧಾನಚಿತ್ತವಾಗಿ ನಾಮಫಲಕ ಅಳವಡಿಸುವತನಕ ಹೋರಾಟ ಮುಂದುವರಿಸುತ್ತೇವೆ ಎಂದು ತಿಳಿಸಿದರು.

ನಗರಸಭೆ ಸದಸ್ಯರಾದ ಸಂತೋಷ್‌ ಶೇಟ್‌, ಆರ್‌. ಶ್ರೀನಿವಾಸ್‌, ಅರವಿಂದ ರಾಯ್ಕರ್‌, ನಾಗರತ್ನ, ಸಂಘದ ಅಧ್ಯಕ್ಷ ಅನೂಪ್‌, ಸುದರ್ಶನ್‌, ವಿಶ್ವ ಹಿಂದೂ ಪರಿಷತ್‌ ತಾಲೂಕು ಅಧ್ಯಕ್ಷ ಐ.ವಿ.ಹೆಗಡೆ, ಪ್ರಮುಖರಾದ ಆರಗ ಚಂದ್ರಶೇಖರ್‌, ರಾಘವೇಂದ್ರ ಭಟ್‌, ಶ್ರೀಧರ ಜೋಗಿ, ಸತೀಶ್‌ ಕೆ. ಮೊಗವೀರ, ಏಜೆಂಟ್‌ ನಾಗರಾಜ್‌, ನಾಗರಾಜ ಮೊಗವೀರ, ಬಸವರಾಜ್‌, ಮಂಜಮ್ಮ, ನೇತ್ರಮ್ಮ, ರಾಜು ಬಿ. ಮಡಿವಾಳ, ಮಾ.ಪು. ಇಕ್ಕೇರಿ, ಕೆ.ವಿ. ಪ್ರವೀಣ್‌, ಗಣೇಶ್‌ ಗಟ್ಟಿ, ರವಿರಾಜ ಶೆಟ್ಟಿ, ಪರಶುರಾಮ್‌, ಶ್ರೀಧರ ಸಾಗರ್‌, ಹೇಮಾವತಿ, ಶಶಿಕಲ, ಕುಮಾರ, ಸಂತೋಷ್‌, ನಾಗವೇಣಿ ಇನ್ನಿತರರು ಇದ್ದರು.

ಈ ನಡುವೆ ಪ್ರತಿಭಟನೆ ಮುಂದುವರಿದಿದ್ದು, ಶಾಸಕರು ಹಾಗೂ ನಗರಸಭೆಯ ಜನಪ್ರತಿನಿಧಿಗಳು ಆಗಮಿಸಿ ವಿವಾದ ಬಗೆಹರಿಸಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದು ಕುಳಿತಿದ್ದಾರೆ.  

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.