ಭಗವಾನ್‌ ವಿರುದ್ಧ ಸಾಗರ ಠಾಣೆಗೆ ದೂರು


Team Udayavani, Dec 31, 2018, 10:31 AM IST

chikk-1.jpg

ಸಾಗರ: ಶ್ರೀರಾಮ, ಸೀತೆ ಮತ್ತು ಹಿಂದೂ ಧರ್ಮದ ನಂಬಿಕೆಗಳ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಸಾಹಿತಿ ಭಗವಾನ್‌ ವಿರುದ್ಧ ಇಲ್ಲಿನ ನಗರ ಠಾಣೆಗೆ ಶನಿವಾರ ಪೊಲೀಸ್‌ ದೂರು ನೀಡಲಾಗಿದೆ.  ಹಳೆ ಇಕ್ಕೇರಿ ವಾಸಿ ಮಹಾಬಲೇಶ್ವರ ಬಿನ್‌ ಬಿ. ಶ್ರೀಧರ್‌ ವಿಶ್ವಹಿಂದೂ ಪರಿಷತ್‌ ಮತ್ತು ಭಜರಂಗದಳ ನೇತೃತ್ವದಲ್ಲಿ ಭಗವಾನ್‌ ವಿರುದ್ಧ ದೂರು ದಾಖಲಿಸಿದ್ದಾರೆ.

ಸಾಹಿತಿ ಭಗವಾನ್‌ ಅವರ “ರಾಮಮಂದಿರ ಏಕೆ ಬೇಡ’ ಕೃತಿಯ ಎರಡನೇ ಅಧ್ಯಾಯದಲ್ಲಿ ರಾಮಾಯಣ, ಸೀತೆ ಮತ್ತು ಹಿಂದೂಧರ್ಮದ ನಂಬಿಕೆಗಳ ಬಗ್ಗೆ ಅವಹೇಳನಕಾರಿಯಾಗಿ ಬರೆಯಲಾಗಿದೆ. ಶ್ರೀರಾಮ ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಧರ್ಮಕಾರ್ಯದದಲ್ಲಿ ತೊಡಗಿರುತ್ತಿದ್ದ. ಮಧ್ಯಾಹ್ನದ ಮೇಲಿನ ಕಾಲವನ್ನು ಅಂತಃಪುರದಲ್ಲಿ ಕಳೆಯುತ್ತಿದ್ದ. ಸೀತೆಯ ಜೊತೆ ಮಧು ಮೈರೇಯಕಂ ಎಂಬ ಮದ್ಯ ಸೇವಿಸುತ್ತಿದ್ದ. ಮಾಂಸ ಸೇವನೆ ಮಾಡುತ್ತಿದ್ದ. ಅಲ್ಲದೆ ನಿತ್ಯಗೀತೆಗಳಲ್ಲಿ ಪರಿಣಿತರಾದ ಹುಡುಗಿಯರು, ವನಿತೆಯರು ಪಾನಮತ್ತರಾಗಿ ರಾಮನ ಎದುರು ನರ್ತಿಸುತ್ತಿದ್ದರು ಎಂದೆಲ್ಲ ಅವಹೇಳನಕಾರಿಯಾಗಿ ಬರೆಯಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. 

ಧರ್ಮವಂತ, ವಿನೋದಪ್ರಿಯ ಪರಮಭೂಷಿತನಾದ ರಾಮ ಆ ಸ್ತ್ರೀಯರನ್ನು ಸಂತೋಷಪಡಿಸಿದನು. ರಾಮ ಎಂದೂ ಏಕಪತ್ನಿ ವ್ರತಸ್ಥನಾಗಿರಲಿಲ್ಲ. ಅದೆಲ್ಲಾ ಕಟ್ಟುಕಥೆ ಎನಿಸುತ್ತದೆ. ಅಲ್ಲದೆ ರಾಮ ಸಾಮಾನ್ಯ ವ್ಯಕ್ತಿಯಂತೆ ಮದಿರೆ ಮತ್ತು ಮಾನಿನಿಯರಲ್ಲಿ ಮೈಮರೆಯುತ್ತಿದ್ದು, ಅವನು ಸತ್ಯವಂತನಲ್ಲ, ವೀರನೂ ಅಲ್ಲ. ಗರ್ಭಿಣಿ ಪತ್ನಿಯನ್ನು ಕಾಡಿನಲ್ಲಿ ಬಿಟ್ಟು ಮೋಸ ಮಾಡಿದ್ದಾನೆ. 

ರಾಮನಿಗೆ ಒಳ್ಳೆಯ ಚಾರಿತ್ರ್ಯ ಇಲ್ಲ. ರಾಮನು ಭೋಗದ ಜೀವನ ನಡೆಸುತ್ತಿದ್ದ ಎಂಬಿತ್ಯಾದಿಯಾಗಿ ಸಾಹಿತಿ ಭಗವಾನ್‌ ಬರೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದಲ್ಲದೆ ಭಗವಾನ್‌ ಅವರು ಈ ಪುಸ್ತಕದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರನ್ನೂ ಸಹ ಒಬ್ಬ ಮತಾಂಧ ಎಂದು ಬರೆದಿದ್ದಾರೆ. ಭಗವಾನ್‌ ಅವರು ಒಂದಲ್ಲ ಒಂದು ರೀತಿಯಲ್ಲಿ ಹಿಂದೂ ಧರ್ಮ ಮತ್ತು ನಂಬಿಕೆ ವಿರುದ್ಧ ನಿರಂತರ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಅಲ್ಲದೆ ತಮ್ಮ ಕೃತಿಯಲ್ಲೂ
ಸಹ ಹಿಂದೂ ಧರ್ಮವನ್ನು ಅವಮಾನಿಸಿದ್ದಾರೆ. ಹೀಗಾಗಿ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ. 

ಮಾಪು ಇಕ್ಕೇರಿ, ಕುಮಾರ್‌, ಕೆ.ವಿ. ಪ್ರವೀಣ್‌, ಶ್ರೀಧರ ಸಾಗರ, ರಾಮು, ಅರುಣ್‌, ಮಹೇಶ್‌, ರಾಜು ಬಿ. ಮಡಿವಾಳ, ಸಂತೋಷ್‌ ಕೆ.ಜಿ., ರವಿಶೆಟ್ಟಿ, ಕಿರಣ್‌ ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.