ಇಂದಿನಿಂದ ಕೊಪ್ಪದಲ್ಲಿ ನುಡಿಜಾತ್ರೆ
Team Udayavani, Jan 12, 2019, 9:17 AM IST
ಕೊಪ್ಪ: ಕಮ್ಮರಡಿಯಲ್ಲಿ ಜ.12 ಮತ್ತು 13ರಂದು ನಡೆಯಲಿರುವ ಕೊಪ್ಪ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕೆ ಭರದ ಸಿದ್ದತೆ ನಡೆಯುತ್ತಿದೆ.
ಸುಭಾಷ್ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ಬೃಹತ್ ಪೆಂಡಾಲ್ ಹಾಕಲಾಗಿದ್ದು, ಕುಸುರಿಗೆ ಕೃಷ್ಣಪ್ಪಗೌಡ ಮಂಟಪ ಎಂದು ಹೆಸರಿಡಲಾಗಿದೆ. ಕಾರ್ಯಕ್ರಮ ನಡೆಯುವ ಮುಖ್ಯ ವೇದಿಕೆಗೆ ಸಂತ ಶಿಶುನಾಳ ಶರೀಫರ ಹೆಸರಿಡಲಾಗಿದೆ.
ಸಮ್ಮೇಳನಾಧ್ಯಕ್ಷರ ಮೆರವಣಿಗೆ ಹೊರಡುವ ಸ್ಥಳದಿಂದ ಸಾಹಿತ್ಯ ಸಮ್ಮೇಳನ ವೇದಿಕೆಯವರೆಗೆ ಮೂರು ಕಡೆ ಮಹಾದ್ವಾರಗಳನ್ನು ನಿರ್ಮಿಸಲಾಗಿದ್ದು, ಅವುಗಳಿಗೆ ಚಾವಲ್ಮನೆ ಪಟೇಲ್ ಸುಬ್ಬಣ್ಣ ನಾಯ್ಕ, ಉಂಟುಗೋಡು ಯು.ಪಿ. ವೆಂಕಟೇಶ್ ಹಾಗೂ ರಾಘವೇಂದ್ರ ಸ್ವಾಮಿ ಭಕ್ತವೃಂದದ ಹೆಸರಿಡಲಾಗಿದೆ.
ವೇದಿಕೆಯ ಬಲಭಾಗದಲ್ಲಿ 60ಕ್ಕೂ ಹೆಚ್ಚು ಮಳಿಗೆಗಳನ್ನು ನಿರ್ಮಿಸಲಾಗಿದೆ. ಸಮ್ಮೇಳನಾಧ್ಯಕ್ಷರ ಮೆರವಣಿಗೆ ಸಾಗುವ ದಾರಿ, ಸಮ್ಮೇಳನ ನಡೆಯುವ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದ ತುಂಬಾ ಸಮ್ಮೇಳಕ್ಕೆ ಸ್ವಾಗತಕೋರುವ, ಶುಭಕೋರುವ ಬ್ಯಾನರ್, ಫ್ಲೆಕ್ಸ್ಗಳು ರಾರಾಜಿಸುತ್ತಿವೆ. ಕಮ್ಮರಡಿ ಪೇಟೆ ಹಾಗೂ ಸಮ್ಮೇಳನದ ಸ್ಥಳದಲ್ಲಿ ಬಂಟಿಂಗ್ಸ್, ವಿದ್ಯುದ್ದೀಪಗಳಿಂದ ಸಿಂಗರಿಲಾಗಿದೆ. ಇಡೀ ಕಮ್ಮರಡಿ ಮದುವಣಗಿತ್ತಿಯಂತೆ ಸಾಹಿತ್ಯ ಜಾತ್ರೆಗೆ ಅಲಂಕಾರಗೊಂಡಿದೆ.
ಸ್ವಾಗತ ಸಮಿತಿ ಅಧ್ಯಕ್ಷ ಎಸ್.ಎನ್. ರಾಮಸ್ವಾಮಿ ನೇತೃತ್ವದಲ್ಲಿ ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಸಾಹಿತ್ಯ ಪರಿಷತ್ ಅಧ್ಯಕ್ಷರು, ಪದಾಕಾರಿಗಳು, ಕಮ್ಮರಡಿ ಗ್ರಾಮಸ್ಥರು ಹಗಲಿರುಳೆನ್ನದೇ ಸಮ್ಮೇಳನದ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ