ಧರ್ಮ ಎಂದೂ ಭೇದ ಭಾವ ಮಾಡಲ್ಲ


Team Udayavani, Jan 15, 2019, 10:13 AM IST

chikk-1.jpg

ಚಿಕ್ಕಮಗಳೂರು: ಜಗದ್ಗುರು ಪಂಚಾಚಾರ್ಯ ಸೇವಾ ಸಮಿತಿ ಮತ್ತು ರೇಣುಕಾಚಾರ್ಯ ಟ್ರಸ್ಟ್‌ನ ಆಶ್ರಯದಲ್ಲಿ ನಗರದ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಕಾಶಿ ಜಂಗಮವಾಡಿ ಮಠದ ಜಗದ್ಗುರು ಡಾ|ಚಂದ್ರಶೇಖರ ಶಿವಾಚಾರ್ಯರಿಂದ ಮೂರು ದಿನಗಳ ಕಾಲ ನಡೆದ ಧಾರ್ಮಿಕ ಪ್ರವಚನ ಭಾನುವಾರ ರಾತ್ರಿ ಸಮಾಪನಗೊಂಡಿತು.

ವೀರಶೈವ ಧರ್ಮದ ಪ್ರಮುಖ ಗ್ರಂಥ ಸಿದ್ದಾಂತ ಶಿಖಾಮಣಿಯ ಬಗ್ಗೆ ಕಾಶಿ ಮಠಾಧೀಶರು ಮೂರು ದಿನಗಳ ಕಾಲ ಉಪನ್ಯಾಸ ನೀಡಿದರು. ಜಗದ್ಗುರು ಪಂಚಾಚಾರ್ಯ ಸೇವಾ ಸಮಿತಿ ವತಿಯಿಂದ ಶ್ರೀಗಳಿಗೆ ಗುರುವಂದನೆ ಸಲ್ಲಿಸಲಾಯಿತು.

ಇದೇ ವೇಳೆ ಕಾಶಿ ಮಠದ ವತಿಯಿಂದ ನಗರದ ಆಶಾಕಿರಣ ಅಂಧ ಮಕ್ಕಳ ಶಾಲೆಗೆ ಶ್ರೀಗಳು 25 ಸಾವಿರ ರೂ.ಗಳನ್ನು ನೀಡಿದರು. ಪಂಚಾಚಾರ್ಯ ಸಮಿತಿ ಮತ್ತು ರೇಣುಕಾಚಾರ್ಯ ಟ್ರಸ್ಟ್‌ನ ಪದಾಧಿಕಾರಿಗಳು, ದಾನಿಗಳು, ಗಣ್ಯರು ಹಾಗೂ ಕಾರ್ಯಕ್ರಮಕ್ಕೆ ಸಹಕರಿಸಿದವರಿಗೆ ಗುರುರಕ್ಷೆ ನೀಡಿದರು.

ಅಂತಿಮ ದಿನದ ಪ್ರವಚನ ನೀಡಿದ ಕಾಶಿ ಮಠಾಧೀಶರಾದ ಜಗದ್ಗುರು ಡಾ|ಚಂದ್ರಶೇಖರ ಶಿವಾಚಾರ್ಯರು ಜಾತಿ, ಮತ, ಧರ್ಮಗಳ ನಡುವೆ ತಾರತಮ್ಯ ಮತ್ತು ಲಿಂಗಭೇದವನ್ನು ಮನುಷ್ಯರಾದ ನಾವು ಮಾಡಿಕೊಂಡಿದ್ದೇವೆಯೇ ಹೊರತು ದೇವರಾಗಲಿ ಅಥವಾ ಧರ್ಮವಾಗಲಿ ಮಾಡಿಲ್ಲ ಎಂದರು.

ಎಲ್ಲಾ ಮತಗಳು ಮತ್ತು ಧರ್ಮಗಳು ಮಾನವರನ್ನು ಒಂದುಗೂಡಿಸುವುದಕ್ಕೆ ಇವೆಯೇ ಹೊರತು ಒಡೆಯುವುದಕ್ಕಲ್ಲ. ನೀರು, ಗಾಳಿ, ಸೂರ್ಯ ಮತ್ತು ಚಂದ್ರ ಯಾವುದೇ ತಾರತಮ್ಯ ಮಾಡುವುದಿಲ್ಲ. ಪ್ರಪಂಚದ ಎಲ್ಲಾ ಮೂಲೆಯಲ್ಲೂ ಒಂದೇ ರೀತಿ ಇರುತ್ತಾರೆ. ಅದೇ ರೀತಿ ಧರ್ಮ ಸಹ ಭೇದಭಾವ ಮಾಡುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.

ವಿಧಾನ ಪರಿಷತ್‌ ಮಾಜಿ ಸಭಾಪತಿ ಡಾ|ಬಿ.ಎಲ್‌.ಶಂಕರ್‌ ಮಾತನಾಡಿ, ಸಮಾಜದಲ್ಲಿರುವ ತಾರತಮ್ಯವನ್ನು ನಿವಾರಿಸಲು ಮಠಾಧೀಶರುಗಳು ಮುಂದಾಗಬೇಕು ಎಂದು ಮನವಿ ಮಾಡಿದರು. ತರೀಕೆರೆ ಹಿರೇಮಠದ ಶ್ರೀ ಜಗದೀಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ವೀರಶೈವರು ವಿಭೂತಿ ಧರಿಸುವುದು, ಲಿಂಗಧಾರಣೆ ಮಾಡುವುದು ಸೇರಿದಂತೆ ತಮ್ಮ ಧರ್ಮವನ್ನು ಚಾಚೂ ತಪ್ಪದೆ ಪಾಲಿಸಬೇಕು. ಆ ಮೂಲಕ ಪರಂಪರೆ ಮುಂದುವರಿಸಬೇಕು ಎಂದು ಸಲಹೆ ಮಾಡಿದರು.

ಶಂಕರದೇವರ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಭೇರುಗಂಡಿಮಠದ ಶ್ರೀ ರೇಣುಕ ಮಹಾಂತ ಶಿವಾಚಾರ್ಯ ಸ್ವಾಮೀಜಿ, ಹುಲಿಕೆರೆಯ ವಿರೂಪಾಕ್ಷ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ರೇಣುಕಾಚಾರ್ಯ ಟ್ರಸ್ಟ್‌ನ ಗೌರವ ಕಾರ್ಯದರ್ಶಿ ಸಿ.ವಿ.ಮಲ್ಲಿಕಾರ್ಜುನ್‌, ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಬಿ.ಎ.ಶಿವಶಂಕರ್‌, ಸಿಪಿಐನ ಪಿ.ವಿ.ಲೋಕೇಶ್‌, ಎಚ್.ಎಂ.ರೇಣುಕಾರಾಧ್ಯ, ಆಲ್ದೂರು ವೀರಶೈವ ಸಮಾಜದ ಅಧ್ಯಕ್ಷ ಇ.ಸಿ.ಉಮೇಶ್‌, ನಿವೃತ್ತ ಉಪನ್ಯಾಸಕ ಬಿ.ತಿಪ್ಪೇರುದ್ರಪ್ಪ, ಪಂಚಾಚಾರ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಿ.ಬಿ.ನಂದೀಶ್‌, ಶ್ರೀದೇವಿ ಗುರುಕುಲದ ಡಾ| ದಯಾನಂದ ಶಾಸ್ತ್ರಿ, ವೀರಶೈವ ಮಹಾಸಭಾ ಸಹಕಾರ್ಯದರ್ಶಿ ಎಂ.ಸಿ.ಶಿವಾನಂದ ಸ್ವಾಮಿ, ಪ್ರಗತಿಪರ ಕೃಷಿಕ ಚಂದ್ರಶೇಖರ ನಾರಣಾಪುರ, ನಗರಸಭೆ ಸದಸ್ಯ ಬಿ.ಆರ್‌.ದಿನೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.