ಕನ್ನಡ ಬಳಸದ ಅಧಿಕಾರಿಗಳಿಗೆ ಚಾಟಿ ಬೀಸಿ


Team Udayavani, Jan 19, 2019, 9:07 AM IST

bid-6.jpg

ಮೂಡಿಗೆರೆ: ಕನ್ನಡದಲ್ಲಿ ವ್ಯವಹರಿಸಲು ಸೋಮಾರಿತನ ತೋರುವ ಕೆಲವು ಕನ್ನಡ ಬಲ್ಲ ಅಧಿಕಾರಿಗಳು ಹಾಗೂ ಕನ್ನಡ ಕಲಿಯಲು ಆಲಕ್ಷಿಸುವ ಕೆಲವು ಕನ್ನಡೇತರ ಅಧಿಕಾರಿಗಳನ್ನು ದಾರಿಗೆ ತರಲು ಸರ್ಕಾರ ನಿಗಾವಹಿಸಬೇಕೆಂದು 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ| ಡಿ.ಎಸ್‌.ಜಯಪ್ಪಗೌಡ ಆಗ್ರಹಿಸಿದರು.

ಮೂಡಿಗೆರೆಯಲ್ಲಿ ಶುಕ್ರವಾರ ಆರಂಭವಾದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೀಯ ಭಾಷಣ ಮಾಡಿದ ಅವರು, ಕನ್ನಡ ಜನಸಾಮಾನ್ಯರ ಸಂಪರ್ಕ ಭಾಷೆಯಾಗಿ ಯಶಸ್ವಿಯಾಗಿದೆ. ಆಡಳಿತ ಭಾಷೆಯಾಗಿ ಅದು ಯಶಸ್ಸುಗೊಳಿಸಲು ಸರ್ಕಾರ ತರಬೇತಿ ಕಾರ್ಯಕ್ರಮ ಸೇರಿದಂತೆ ಪೂರಕವಾದ ಅನೇಕ ಪದಕೋಶ ಹಾಗೂ ಪಾರಿಭಾಷಿಕ ಕೃತಿಗಳನ್ನು ಹೊರ ತಂದಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಕಣ್ಗಾವಲನ್ನು ಇಟ್ಟಿದೆ. ಆಡಳಿತ ಭಾಷೆಯಾಗಿ ಕನ್ನಡವನ್ನು ಜಾರಿಗೊಳಿಸಿ ವರ್ಷಗಳೇ ಕಳೆದಿವೆ. ಈಗ ಸರ್ಕಾರ ಕೈಗೊಳ್ಳಬೇಕಾದುದು ಕೆಲವು ಬಿಗಿ ಕ್ರಮಗಳನ್ನು; ಆಗ ಮಾತ್ರ ಕನ್ನಡ ಆಡಳಿತದಲ್ಲಿ ಊರ್ಜಿತವಾಗಲು ಅಡ್ಡಿಯಾಗುವುದಿಲ್ಲ. ಕನ್ನಡದಲ್ಲಿ ವ್ಯವಹರಿಸಲು ಹಿಂಜರಿಯುವ ಕೆಲವು ಕನ್ನಡ ಬಲ್ಲ ಅಧಿಕಾರಿಗಳು ಹಾಗೂ ಕನ್ನಡ ಕಲಿಯಲು ಅಲಕ್ಷಿಸುವ ಕೆಲವು ಕನ್ನಡೇತರ ಭಾಷಾ ಅಧಿಕಾರಿಗಳು ದಾರಿಗೆ ಬರುವಂತೆ ಸರ್ಕಾರ ನಿಗಾ ವಹಿಸಬೇಕೆಂದು ಸಲಹೆ ಮಾಡಿದರು.

ಕನ್ನಡ ಭಾಷೆ ಮತ್ತು ಸಾಹಿತ್ಯದ ಹಿರಿಮೆ ಹಾಗೂ ಗರಿಮೆ ಅತ್ಯಂತ ಪ್ರಸ್ತುತ. ಆದರೆ ಕನ್ನಡದ ಆತಂಕಗಳು ಮರೆಯಾಗಿಲ್ಲ. ಕನ್ನಡ ಈ ನಾಡಿನಲ್ಲಿ ತನ್ನ ಹಿಡಿತವನ್ನು ಉಳಿಸಿಕೊಳ್ಳಬೇಕಾದರೆ ಅದು ಸಾಫ್ಟ್‌ವೇರ್‌ ಭಾಷೆಯಾಗುವುದು ಅನಿವಾರ್ಯ ಎಂದು ಅಭಿಪ್ರಾಯಪಟ್ಟರು.

ಕನ್ನಡ ಭಾಷೆ ಸಾಫ್ಟ್‌ ವೇರ್‌ ಭಾಷೆಯಾಗದಿದ್ದರೆ ಅದು ಹಿಂದೆ ಬೀಳುತ್ತದೆ. ಈ ಮಾತನ್ನು ಬಹಳ ಹಿಂದೆಯೇ ಖ್ಯಾತ ಸಾಹಿತಿ ಹಾಗೂ ಪರಿಸರವಾದಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಸೂಚಿಸಿ ಎಚ್ಚರಿಸಿದ್ದರು ಎಂಬುದನ್ನು ನೆನಪಿಸಿಕೊಂಡ ಸರ್ವಾಧ್ಯಕ್ಷರು, ಕನ್ನಡವನ್ನು ತಂತ್ರಾಂಶ ಭಾಷೆಯಾಗಿಸಲು ಏನು ಕೆಲಸವಾಗಿದೆ ಎಂಬುದನ್ನು ತಜ್ಞರೇ ಸ್ಪಷ್ಟಪಡಿಸಬೇಕು ಎಂದರು.

ಒಂದು ಭಾಷೆಗೆ ಆತಂಕ ಎದುರಾಗುವುದು ಅದು ಶಿಕ್ಷಣ ಮಾಧ್ಯಮವಾಗಲು ಸಾಧ್ಯವಾಗದಿದ್ದಾಗ. ಇದಕ್ಕೆ ಐತಿಹಾಸಿಕ ಕಾರಣಗಳೂ ಇವೆ. ಸಂಸ್ಕೃತದ ಪ್ರಭಾವಳಿ ಅಡಿ ಬೆಳೆದ ಕನ್ನಡ ಸಾಹಿತ್ಯ ಅಲ್ಲಿಂದ ಪದ ಸಂಪತ್ತನ್ನು ಧಾರಾಳವಾಗಿ ಪಡೆದು ಬಳಸಿಕೊಂಡ ಪರಿಣಾಮ ದ್ರಾವಿಡ ಭಾಷೆಯ ಪಾರಿಭಾಷಿಕ ಪದಗಳ ಸ್ಥಾನದಲ್ಲಿ ಸಂಸ್ಕೃತ ಪದಗಳು ಬಂದು ಕುಳಿತವು ಎಂದು ವಿವರಿಸಿದರು.

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣಕ್ಕೆ ಬಂದು ಇಂಗ್ಲಿಷ್‌ ಮಾಧ್ಯಮಕ್ಕೆ ಸೇರಿದರೆ ಪಠ್ಯ ವಿಷಯಗಳನ್ನು ಅರ್ಥ ಮಾಡಿಕೊಳ್ಳಲು ಕಷ್ಟವಾಗುತ್ತದೆ. ವಿಜ್ಞಾನ ವಿಷಯಗಳನ್ನು ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳುವುದು ಕಷ್ಟ. ಸಮಾನ ಪದಕೋಶಗಳು ದೊರಕುವುದಿಲ್ಲ. ಹಿಂದೆಯೇ ವಿದ್ವಾಂಸ ಡಾ| ಎಂ.ಚಿದಾನಂದಮೂರ್ತಿ ಸಾಮಾಜಿಕ ವಿಜ್ಞಾನಗಳ ಅಕಾಡೆಮಿಯೊಂದನ್ನು ಸ್ಥಾಪಿಸಬೇಕೆಂಬ ಸಲಹೆಯನ್ನು ಸರ್ಕಾರದ ಮುಂದಿಟ್ಟಿದ್ದರು. ಆದರೆ ಸರ್ಕಾರದಿಂದ ಅದಕ್ಕೆ ಒಪ್ಪಿಗೆಯೇ ಸಿಗಲಿಲ್ಲ ಎಂದು ಹೇಳಿದರು.

ಕರ್ನಾಟಕವು ಧಾರ್ಮಿಕವಾಗಿಯೂ ಪ್ರೌಢಿಮೆ ತೋರಿದೆ. 12ನೇ ಶತಮಾನದಷ್ಟು ಹಿಂದೆಯೇ ಬಸವಣ್ಣನವರು ದಯೆಯೇ ಧರ್ಮದ ಮೂಲವೆಂದು ಸಾರಿದರು. ಈ ಮಾತು ಸರ್ವಕಾಲಿಕ ಸತ್ಯ. ಕನಕದಾಸರು ಕುಲಕೇಳಿ ಮಣೆ ಹಾಕಬಾರದು ಎಂದು ಹೇಳಿದರು ಎಂದರು. ಈ ಜಿಲ್ಲೆ ಪ್ರವಾಸಿಗಳನ್ನು ಹಾಗೂ ಯಾತ್ರಾರ್ಥಿಗಳನ್ನು ಸೆಳೆಯುವ ಜಿಲ್ಲೆಯಾಗಿದೆ. ಇದಕ್ಕೆ ಪೂರಕವಾದ ಸೂಕ್ತ ಮೂಲ ಸೌಕರ್ಯಗಳ ಅಗತ್ಯವಿದೆ. ತೋಟಗಾರಿಕಾ ವಿಶ್ವವಿದ್ಯಾಲಯದ ನಿರೀಕ್ಷೆಯಲ್ಲಿ ಜನರಿದ್ದಾರೆ. ಚಿತ್ರದುರ್ಗ-ಮಂಗಳೂರು ಹೆದ್ದಾರಿಯ ಬಗ್ಗೆ ಜನ ಕುತೂಹಲಿಗಳಾಗಿದ್ದಾರೆ. ಇದರಿಂದ ಈಗಿನ ಕಡೂರು-ಮಂಗಳೂರು ಮಾರ್ಗದ ಸಂಚಾರದ ಒತ್ತಡ ಕಡಿಮೆ ಮಾಡಲು ಸಾಧ್ಯ ಎಂದು ವಿವರಿಸಿದರು.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.