ಶಕುನ ರಂಗನಾಥಸ್ವಾಮಿ ರಥೋತ್ಸವ
Team Udayavani, Jan 19, 2019, 9:28 AM IST
ಕಡೂರು: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಶಕುನ ರಂಗನಾಥಸ್ವಾಮಿ ರಥೋತ್ಸವ ಅದ್ದೂರಿಯಾಗಿ ಗುರುವಾರ ರಾತ್ರಿ ನಡೆಯಿತು. ಕಳೆದ ಮೂರು ದಿನಗಳಿಂದ ವಿವಿಧ ಧಾರ್ಮಿಕ ಆಚರಣೆಗಳನ್ನು ನಡೆಸಿಕೊಂಡು ಪ್ರತಿದಿನ ಪಂಚಾಮೃತ ಅಭಿಷೇಕ, ಮೊಲಬಿಡುವ ಸೇವೆ ಮತ್ತು ಉತ್ಸವಾದಿಗಳೊಂದಿಗೆ ಜನಮನ ಸೂರೆಗೊಂಡಿತು. ಗುರುವಾರ ಮಧ್ಯಾಹ್ನ ಶ್ರೀ ರಂಗನಾಥಸ್ವಾಮಿ ಉತ್ಸವವನ್ನು ಮೆರವಣಿಗೆಯಲ್ಲಿ ಗ್ರಾಮದ ಬಿಡದಿ ಮನೆಗೆ ಕರೆತಂದು ಪ್ರತಿಷ್ಠಾಪಿಸಲಾಯಿತು.
ಗುರುವಾರ ರಾತ್ರಿ 9.30 ಕ್ಕೆ ರಂಗನಾಥಸ್ವಾಮಿ ದೇವಾಲಯದಿಂದ ಶ್ರೀದೇವಿ ಮತ್ತು ಭೂದೇವಿ ಉತ್ಸವ ಮೂರ್ತಿಗಳನ್ನು ಬಿಡದಿ ಮನೆ ಸಮೀಪಕ್ಕೆ ಮೆರವಣಿಗೆಯಲ್ಲಿ ಕರೆತರಲಾಯಿತು. ನಂತರ ಶ್ರೀದೇವಿ ಭೂದೇವಿಯವರಗಳನ್ನು ಎದುರುಗೊಂಡ ಅರ್ಚಕರು ಶ್ರೀದೇವಿ ಮತ್ತು ರಂಗನಾಥಸ್ವಾಮಿಗೆ ಭಕ್ತರ ನಡುವೆ ಕಲ್ಯಾಣೋತ್ಸವ ನೆರವೇರಿಸಿದರು.
ಉತ್ಸವದಲ್ಲಿ ಬಿಡದಿ ಮನೆಗೆ ತೆರಳಿದ ನಂತರ ವಿಗ್ರಹಗಳಿಗೆ ಪೂಜೆ ಸಲ್ಲಿಸಲಾಯಿತು. ಅಲಂಕಾರ ಮಾಡಿದ ರಥದಲ್ಲಿ ಶ್ರೀ ರಂಗನಾಥಸ್ವಾಮಿ ಮತ್ತು ಶ್ರೀದೇವಿ ಹಾಗೂ ಭೂದೇವಿಯವರ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇದೇ ವೇಳೆ ಬಲಿಪೂಜೆ ನೆರವೇರಿತು. ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ ದಾಸಯ್ಯಗಳು ಶಂಕು, ಜಾಗಟೆಗಳ ಸದ್ದು ಎಲ್ಲೆಲ್ಲೂ ಕೇಳಿಸುತ್ತಿತ್ತು. ನಾದಸ್ವರ ಮತ್ತು ಹಳ್ಳಿವಾದ್ಯಗಳ ಅಬ್ಬರ ಮುಗಿಲು ಮುಟ್ಟಿತ್ತು. ವಿವಿಧ ಬಣ್ಣದ ಸಿಡಿ ಮದ್ದುಗಳು ಬೆಳಕಿನ ಹಬ್ಬವನ್ನೇ ಸೃಷ್ಟಿಸಿದ್ದವು. ಭಕ್ತರ ಗೋವಿಂದ ಗೋವಿಂದ ನಡುವೆ ರಾತ್ರಿ 11.30 ಕ್ಕೆ ಮಹಾರಥವನ್ನು ಎಳೆಯಲಾಯಿತು. ಭಕ್ತರು ಬಾಳೆಹಣ್ಣುಗಳನ್ನು ರಥದ ಮೇಲೆ ಎಸೆದು ಸಂಭ್ರಮಿಸಿದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಜಿ.ಪಂ. ಸದಸ್ಯೆ ಶಕುಂತಲಾ ಮಲ್ಲಪ್ಪ, ತಾ.ಪಂ. ಸದಸ್ಯ ಆನಂದ ನಾಯ್ಕ, ಗ್ರಾ.ಪಂ. ವತಿಯಿಂದ ಅಧ್ಯಕ್ಷ ಎಸ್.ಆರ್.ಯೋಗೀಂದ್ರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ