ಗುರುಕುಲಗಳಿಂದ ಉತ್ತಮ ಸಮಾಜ ನಿರ್ಮಾಣ


Team Udayavani, Jan 29, 2019, 9:33 AM IST

bid-4.jpg

ಕೊಪ್ಪ: ಆಧುನಿಕ ಶಿಕ್ಷಣದಿಂದ ಆತ್ಮಶಾಂತಿ ಸಿಗುತ್ತಿಲ್ಲ. ಹಣ ಗಳಿಕೆಯೇ ಮನುಷ್ಯನ ಧ್ಯೇಯವಲ್ಲ. ಜೀವನದ ವಿಕಾಸಕ್ಕೆ ಬೇಕಾಗುವಂತಹ ಪೂರಕ ಶಿಕ್ಷಣದ ಅಗತ್ಯತೆ ಇದ್ದು, ಅಂತಹ ಶಿಕ್ಷಣವನ್ನು ಗುರುಕುಲದಲ್ಲಿ ಪಡೆಯಬಹುದು ಎಂದು ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ| ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು.

ತಾಲೂಕಿನ ಹರಿಹರಪುರ ಸಮೀಪದ ಚಿತ್ರಕೂಟದ ಪ್ರಭೋದಿನಿ ಗುರುಕುಲದಲ್ಲಿ ಹಮ್ಮಿಕೊಂಡಿದ್ದ ಅರ್ಧಮಂಡಲೋತ್ಸವ ಉದ್ಘಾಟನಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಉತ್ತಮ ಸಮಾಜ ನಿರ್ಮಾಣಕ್ಕಾಗಿ ಗುರುಕುಲಗಳು ಹೆಚ್ಚಾಗಬೇಕು. ಪಂಚಮುಖೀ ಶಿಕ್ಷಣಗಳಾದ ವೇದ ,ಕೃಷಿ ಯೋಗ, ವಿಜ್ಞಾನ ,ಕಲೆ ಇವುಗಳ ಶಿಕ್ಷಣ ಪಡೆದರೆ ವಿದ್ಯಾರ್ಥಿಗಳು ತಮ್ಮ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳುತ್ತಾರೆ ಎಂದರು.

ಭಾರತ ಧರ್ಮ ಮತ್ತು ಸಂಸ್ಕೃತಿ ಪ್ರಧಾನವಾದ ದೇಶವಾಗಿದ್ದು, ಹಗಲು ಸೂರ್ಯ ಬೆಳಕು ನೀಡಿದರೆ ರಾತ್ರಿ ಚಂದ್ರ ಬೇಳಕು ನೀಡುತ್ತಾನೆ. ಹಾಗೆ ಧರ್ಮ ಸದಾಕಾಲ ಬೆಳಕು ನೀಡುತ್ತದೆ. ಯಾವಗಲೂ ಸತ್ಯ ಮಾತನಾಡತ್ತಾ ಧರ್ಮದ ಜೀವನ ನಡೆಸುವುದು ನಮ್ಮ ಸಂಸ್ಕೃತಿಯಾಗಿದೆ ಎಂದು ನುಡಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖೀಲ ಭಾರತ ವ್ಯವಸ್ಥಾ ಪ್ರಮುಖ್‌ ಮಂಗೇಶ್‌ ಭೇಂಡೆ ಮಾತನಾಡಿ, ಒಂದು ದೇಶದ ವಿಕಾಸವನ್ನು ಲೆಕ್ಕ ಹಾಕುವುದು ಆ ದೇಶದ ಶೈಕ್ಷಣಿಕ ವಿಸ್ತಾರದ ಮೇಲೆ. ಸ್ವಾತಂತ್ರ್ಯ ಬಂದಾಗ ಇದ್ದಂತಹ ಶಾಲಾಕಾಲೇಜುಗಳ ಸಂಖ್ಯೆಗೂ ಈಗಿನ ಸಂಖ್ಯೆಗೂ ಅಜಗಜಾಂತರ ವ್ಯತ್ಯಾಸವಿದೆ. ಇಷ್ಟೆಲ್ಲಾ ಶಾಲಾ ಕಾಲೇಜು ಮತ್ತು ವಿಶ್ವವಿದ್ಯಾಲಯಗಳು ಬೆಳೆದಿದ್ದರೂ ದೇಶದ ಸ್ಥಿತಿ ಭಿನ್ನವಾಗಿಲ್ಲ ಎಂದರು.

ಗುರುಕುಲದ ವ್ಯವಸ್ಥಾಪಕ ಉಮೇಶ್‌ರಾವ್‌ ಮಾತನಾಡಿ, ಕಳೆದ 24 ವರ್ಷಗಳಿಂದ ವೇದ, ವಿಜ್ಞಾನ, ಯೋಗ, ಕೃಷಿ ಮತ್ತು ಕಲೆಗಳೆಂಬ ವಿಶಿಷ್ಟ ಪಂಚಮುಖೀ ಶಿಕ್ಷಣವನ್ನು ಆಹಾರ ಹಾಗೂ ವಸತಿ ಸೌಲಭ್ಯಗಳೊಂದಿಗೆ ಗುರುಕುಲ ಪದ್ದತಿಯಲ್ಲಿ ಶಿಕ್ಷಣ ನೀಡುತ್ತಾ ಬರಲಾಗಿದೆ. 2019-20ನೇ ವರ್ಷವನ್ನು ಅರ್ಧಮಂಡಲೋತ್ಸವ ಎಂಬುದಾಗಿ ಆಚರಿಸಲು ತೀರ್ಮಾನಿಸಿದ್ದು, ಇದೇ ಅರ್ಧಮಂಡಲೋತ್ಸವ ಆಚರಣೆ ಹಿನ್ನೆಲೆಯಲ್ಲಿ ವರ್ಷಪೂರ್ತಿ ಕರ್ನಾಟಕದ ಪ್ರಮುಖ ಸ್ಥಾನಗಳಲ್ಲಿ ‘ಗುರುಕುಲ ದರ್ಶನಂ’ ಎಂಬ ವಿನೂತನ ಕಾರ್ಯಕ್ರಮದ ಮೂಲಕ ಗುರುಕುಲ ಶಿಕ್ಷಣದ ಪ್ರಸ್ತುತತೆಯನ್ನು ಪ್ರಚುರಪಡಿಸಲಾಗುತ್ತದೆ ಎಂದರು.

ಸ್ವಾಗತ ಸಮಿತಿ ಗೌರವಾಧ್ಯಕ್ಷ ಶೃಂಗೇರಿ ಶ್ರೀ ಮಠದ ಆಡಳಿತಾಧಿಕಾರಿ ಡಾ| ವಿ.ಆರ್‌. ಗೌರಿಶಂಕರ್‌ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮವನ್ನು ಹಿಂದೂಸ್ಥಾನಿ ಗಾಯಕ ಪಂಡಿತ್‌ ವಿನಾಯಕ ತೊರವಿ ಉದ್ಘಾಟಿಸಿದರು. ಸ್ವಾಗತ ಸಮಿತಿ ಅಧ್ಯಕ್ಷ, ವಿಆರ್‌ಎಲ್‌ ಸಮೂಹ ಸಂಸ್ಥೆಯ ಸಂಸ್ಥಾಪಕ ಡಾ| ವಿಜಯ ಸಂಕೇಶ್ವರ, ಕಾರ್ಯಾಧ್ಯಕ್ಷ ಬಾಳೆಹೊನ್ನೂರಿನ ಎಚ್.ಬಿ. ರಾಜಗೋಪಾಲ್‌, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಪಟ್ಟಾಭಿರಾಮನ್‌, ಕಜಂಪಾಡಿ ಸುಬ್ರಹ್ಮಣ್ಯ ಭಟ್, ಸೀತಾರಮ ಕೆದಿಲಾರು, ನಾರಾಯಣ ಶೇವ್ರೆ ಮುಂತಾದವರು ಉಪಸ್ಥಿತರಿದ್ದರು.

ಈಗಿನ ಶಿಕ್ಷಣ ವಿದ್ಯಾರ್ಥಿಗಳನ್ನು ಸಾಕ್ಷರರನ್ನಾಗಿ ಮಾಡುತ್ತಿವಿಯೇ ಹೊರತು ಸುಶಿಕ್ಷಿತರನ್ನಾಗಿ ಮಾಡುತ್ತಿಲ್ಲ. ಮನೆಗಳಲ್ಲಿ ಉತ್ತಮ ಶಿಕ್ಷಣ ಸಿಗಬೇಕು. ದುದೆ„ರ್ವೆಂದರೆ ಮನೆಗಳಲ್ಲಿ ಸಂಸ್ಕಾರ ಸಿಗುತ್ತಿಲ್ಲ. ಮುಂದಿನ ಪೀಳಿಗೆಗೆ ದೇಶಭಕ್ತ ನಾಗರಿಕ ನಿರ್ಮಾಣಕ್ಕೆ ಶಿಕ್ಷಣ ಕ್ಷೇತ್ರದಲ್ಲಿ ಪರಿವರ್ತನೆಯಾಗಬೇಕು ಎಂಬ ಕಾರಣಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಗುರುಕುಲ ಪದ್ದತಿ ಶಿಕ್ಷಣ ವ್ಯವಸ್ಥೆ ಪ್ರಾರಂಭಿಸಿದೆ. ಆ ಮೂಲಕ ಹಿಂದೂ ಸಂಸ್ಕೃತಿಯ ಪುನರುಜ್ಜೀವನ ಕಾರ್ಯಕ್ಕೆ ಮುಂದಾಗಿದೆ
• ಮಂಗೇಶ್‌ ಭೇಂಡೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖೀಲ ಭಾರತ ವ್ಯವಸ್ಥಾ ಪ್ರಮುಖ್‌

ಟಾಪ್ ನ್ಯೂಸ್

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.