ಬೀದಿ ಬದಿ ವ್ಯಾಪಾರಿಗಳಿಗಾಗಿ ಬಡವರ ಬಂಧು ಯೋಜನೆ ಜಾರಿ


Team Udayavani, Feb 3, 2019, 9:06 AM IST

bid-2.jpg

ಎನ್‌.ಆರ್‌.ಪುರ: ಸರ್ಕಾರವು ಬೀದಿ ಬದಿಯ ಸಣ್ಣ ವ್ಯಾಪಾರಿಗಳ ಅನುಕೂಲಕ್ಕಾಗಿ ತಂದಿರುವ ಬಡವರ ಬಂಧು ಯೋಜನೆಯಡಿ ಡಿ.ಸಿ.ಸಿ.ಬ್ಯಾಂಕಿನಿಂದ ಈಗಾಗಲೇ ಕಳೆದ 3 ದಿನದಿಂದ 25 ಕ್ಕೂ ಹೆಚ್ಚು ವ್ಯಾಪಾರಿಗಳಿಗೆ ತಲಾ 10 ಸಾವಿರ ರೂ. ಸಾಲ ನೀಡಲಾಗಿದೆ ಎಂದು ಡಿ.ಸಿ.ಸಿ.ಬ್ಯಾಂಕಿನ ವ್ಯವಸ್ಥಾಪಕ ಪುಟ್ಟಸ್ವಾಮಿ ತಿಳಿಸಿದರು.

ಅವರು ಪಟ್ಟಣ ಪಂಚಾಯತ್‌ ಸಭಾಂಗಣದಲ್ಲಿ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ (ಡೇ ನಲ್ಮಾ) ಶಹರಿ ಸಮೃದ್ಧಿ ಉತ್ಸವ ಕಾರ್ಯಕ್ರಮದಲ್ಲಿ ಸ್ವಸಹಾಯ ಸಂಘಗಳ ಹಾಗೂ ಸ್ತ್ರೀ ಶಕ್ತಿ ಸಂಘಗಳ ಸದಸ್ಯರಿಗೆ ಮಾಹಿತಿ ನೀಡಿದರು.

ಬಡವರ ಬಂಧು ಯೋಜನೆಯಡಿ ಬೀದಿ ಬದಿಯಲ್ಲಿ ಎಳ ನೀರು, ಹೂ, ತರಕಾರಿ, ಹಣ್ಣುಗಳನ್ನು ಮಾರುವ ವ್ಯಾಪಾರಿಗಳಿಗೆ ಬಡ್ಡಿ ಇಲ್ಲದೆ 10 ಸಾವಿರ ರೂ.ವರೆಗೆ ಸಾಲ ನೀಡುತ್ತೇವೆ. ಸಾಲ ಪಡೆದ ವ್ಯಾಪಾರಿಗಳು ಪ್ರತಿ ದಿನ ಪಿಗ್ನಿಯ ರೂಪದಲ್ಲಿ 120 ರೂ. ಸಾಲ ವಾಪಾಸು ಮಾಡಬೇಕಾಗಿದೆ. ಈ ಸಾಲದ ಬಡ್ಡಿಯನ್ನು ಸರ್ಕಾರವೇ ಕಟ್ಟಲಿದೆ. ಹಣವನ್ನು ಪ್ರತಿ ದಿನ ಸರಿಯಾಗಿ ಕಟ್ಟದಿದ್ದರೆ ಬಡ್ಡಿಯನ್ನು ಸೇರಿಸಿ ಕಟ್ಟಬೇಕಾಗುತ್ತದೆ.

ಬಿ.ಪಿ.ಎಲ್‌.ಹೊಂದಿದ ಸ್ವಸಹಾಯ ಗುಂಪುಗಳಿಗೆ ಬಡ್ಡಿ ಇಲ್ಲದೆ 3 ಲಕ್ಷ ರೂ.ವರೆಗೆ ಸಾಲ ನೀಡುತ್ತೇವೆ. ಸಾಲ ಪಡೆದು 1 ವರ್ಷದ ಒಳಗೆ ಸಾಲ ಮರುಪಾವತಿ ಮಾಡಬೇಕು. ಸಾಲದ 12 ತಿಂಗಳ ಬಡ್ಡಿಯನ್ನು ಗುಂಪಿನವರು ಮೊದಲು ಬ್ಯಾಂಕಿಗೆ ಕಟ್ಟಬೇಕು. ಸಾಲ ತೀರಿದ ಮೇಲೆ ಬಡ್ಡಿಯನ್ನು ವಾಪಾಸು ಮಾಡಲಾಗುವುದು. ಎ.ಪಿ.ಎಲ್‌ ಕಾರ್ಡುದಾರರು ಹಾಗೂ ಇತರ ಸ್ವಸಹಾಯ ಗುಂಪುಗಳಿಗೆ ಶೇ.4 ರ ಬಡ್ಡಿಯಲ್ಲಿ ಸಾಲ ನೀಡುತ್ತೇವೆ. ಪ್ರತಿ ತಿಂಗಳು ಸರಿಯಾಗಿ ಸಾಲದ ಕಂತು ಕಟ್ಟಬೇಕು. ಇಲ್ಲದಿದ್ದರೆ ಸುಸ್ತಿ ಬಡ್ಡಿ ಬೀಳಲಿದೆ. ಬಡವರಿಗಾಗಿ ಸರ್ಕಾರವು ಈ ಯೋಜನೆಗಳನ್ನು ತಂದಿದ್ದು, ಬ್ಯಾಂಕಿನ ಮಿತಿಯೊಳಗೆ ಸಾಲ ನೀಡುತ್ತೇವೆ ಎಂದರು.

ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಕುರಿಯಾಕೋಸ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಡೇ ನಲ್ಮಾ ಯೋಜನೆಯಡಿ ಶಹರಿ ಸಮೃದ್ದಿ ಉತ್ಸವ ಕಾರ್ಯಕ್ರಮವನ್ನು ಫೆ.1 ರಿಂದ 19 ರ ವರೆಗೆ ರಾಜ್ಯಾದ್ಯಂತ ಹಮ್ಮಿಕೊಳ್ಳಬೇಕಾಗಿದೆ. ಈ ಯೋಜನೆಯಡಿ ಪಟ್ಟಣದಲ್ಲಿರುವ ಮಹಿಳೆಯರು, ಸ್ತ್ರೀ ಶಕ್ತಿ ಗುಂಪುಗಳು,ಸ್ವಸಹಾಯ ಗುಂಪುಗಳ ಸದಸ್ಯರ ಆರ್ಥಿಕ ಅಭಿವೃದ್ಧಿಗೆ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಅನುಕೂಲವಾಗುವಂತೆ ಮಾಹಿತಿ ನೀಡುತ್ತಿದ್ದೇವೆ ಎಂದರು.

ಭಾರತೀಯ ಮಾನವ ಹಕ್ಕುಗಳ ಸಂರಕ್ಷಣಾ ವೇದಿಕೆಯ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಜಬೇದಾ ಮಾತನಾಡಿದರು. ಪಪಂ ಅಧ್ಯಕ್ಷ ಆರ್‌.ರಾಜಶೇಖರ್‌ ಸಮಾರಂಭ ಉದ್ಘಾಟಿಸಿದರು. ಪಪಂ ಉಪಾಧ್ಯಕ್ಷೆ ಸಾವಿತ್ರಿ ಮಂಜುನಾಥ್‌, ಹಿರಿಯ ಸದಸ್ಯ ಲಕ್ಷ್ಮಣ ಶೆಟ್ಟಿ, ನಾಮಿನಿ ಸದಸ್ಯ ನಾಗಭೂಷಣ, ಸ್ವಸಹಾಯ ಸಂಘಗಳು ಒಕ್ಕೂಟದ ಅಧ್ಯಕ್ಷೆ ಜಯಲಕ್ಷ್ಮೀ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

1-wwqewqe

Congress; ಜಯಪ್ರಕಾಶ್ ಹೆಗ್ಡೆಯವರನ್ನು ಗೆಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿ: ಮೋಟಮ್ಮ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.