ಕಸ ಸಂಗ್ರಹಣೆ: ಆಗಿಲ್ಲ ಅವ್ಯವಹಾರ


Team Udayavani, Feb 7, 2019, 11:00 AM IST

chikk-m.jpg

ಚಿಕ್ಕಮಗಳೂರು: ನಗರದ ಕಸ ಸಂಗ್ರಹಣೆಗೆ ಗುತ್ತಿಗೆ ನೀಡಲು ಕಾನೂನಿನಲ್ಲಿ ಅವಕಾಶವಿದೆ ಎಂದು ನಗರಸಭೆ ಅಧ್ಯಕ್ಷೆ ಶಿಲ್ಪಾ ರಾಜಶೇಖರ್‌ ಸ್ಪಷ್ಟಪಡಿಸಿದರು.

ಬುಧವಾರ ನಗರದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಚ್.ಎಚ್.ದೇವರಾಜ್‌ ಅವರು ನಗರಸಭೆ ಕಸ ಸಂಗ್ರಣೆಗೆ ಟೆಂಡರ್‌ ಕರೆಯದೆ ಗುತ್ತಿಗೆ ನೀಡಿ ಅವ್ಯವಹಾರ ನಡೆಸಲಾಗಿದೆ ಎಂದು ದೂರಿದ್ದು, ಕಸ ಸಂಗ್ರಹಣೆಗೆ ಸಂಘ ಸಂಸ್ಥೆ, ಖಾಸಗಿ ಅವರು ಮುಂದೆ ಬಂದರೆ ಗುತ್ತಿಗೆ ನೀಡಲು ಕಾನೂನಿನಲ್ಲೇ ಅವಕಾಶವಿದೆ ಎಂದರು.

ಈ ಹಿಂದೆ ಸ್ವಚ್ಛ ಟ್ರಸ್ಟ್‌, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ, ರೇಣುಕಾಂಬಾ ಸ್ವ-ಸಹಾಯ ಸಂಘಕ್ಕೆ ವಹಿಸಲಾಗಿತ್ತು. ಅವರು ಮನೆ ಮನೆ ಕಸ ಸಂಗ್ರಹಿಸಿ ಮಾಸಿಕ 30 ರೂ. ಪಡೆಯುತ್ತಿದ್ದರು. ಆದರೆ ಖರ್ಚು ಹೆಚ್ಚಾದ ಕಾರಣದಿಂದ ಕಸ ಸಂಗ್ರಹಣೆಗೆ ಸಂಸ್ಥೆಗಳು ಹಿಂದೆ ಸರಿದವು ಎಂದು ತಿಳಿಸಿದರು.

ಸ್ವಯಂ ಪ್ರೇರಿತವಾಗಿ ಮುಂದೆ ಬಂದ ತುಮಕೂರು ಮೂಲದ ಎಸ್‌ಎಂಪಿ ಎಂಟರ್‌ಫ್ತೈಸಸ್‌ ಅವರಿಗೆ ವಹಿಸಿಕೊಡಲಾಯಿತು. ನಗರ ಸಭೆಯಿಂದ ಎಂಟರ್‌ಫ್ತೈಸಸ್‌ಗೆ ನಯಾಪೈಸೆ ನೀಡುತ್ತಿಲ್ಲ, 30 ಆಟೋ ಟಿಪ್ಪರ್‌, 80 ಜನ ಕೆಲಸ ನಿರ್ವಹಿಸುತ್ತಿದ್ದಾರೆ. ಎಸ್‌ಎಂಪಿ ಎಂಟರ್‌ಫ್ತೈಸಸ್‌ ಕಸ ಸಂಗ್ರಹಣೆ ಜವಾಬ್ದಾರಿ ವಹಿಸಿಕೊಂಡ ನಂತರ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರಿಂದಲೂ ಪ್ರಶಂಸೆಗೆ ಒಳಗಾಗಿದೆ ಎಂದರು.

ಎಸ್‌ಎಂಪಿ ಎಂಟರ್‌ಫ್ತೈಸಸ್‌ ಅವರೆ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡಿದ್ದು, ಹಿಂದಿನ ಶುಲ್ಕವನ್ನೇ ಪಡೆಯುತ್ತಿದ್ದಾರೆ. ಮಾಸಿಕ 10ಲಕ್ಷದ 64 ಸಾವಿರ ರೂ. ಸಂಗ್ರಹಣೆ ಮಾಡಲಾಗುತ್ತಿದೆ. ಮಾಸಿಕ 13ಲಕ್ಷದ 45 ಸಾವಿರ ರೂ. ಖರ್ಚಾಗುತ್ತಿದೆ. ಆದರೂ ಉತ್ತಮವಾಗಿ ನಿರ್ವಹಣೆ ಮಾಡುತ್ತಿದೆ. ನಗರದಲ್ಲಿ 30,370 ಮನೆಗಳಿದ್ದು, 19,880 ಮನೆಗಳಿಂದ ಮಾತ್ರ ಶುಲ್ಕ ಸಂಗ್ರಹಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಉಳಿದ ಮನೆಗಳ ಶುಲ್ಕವನ್ನು ಸಂಗ್ರಹಿಸುವ ಜವಾಬ್ದಾರಿ ಅವರಿಗೆ ನೀಡಲಾಗಿದೆ. ಶುಲ್ಕ ಸಂಗ್ರಹಣೆ ಮನೆಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಎಸ್‌ಎಂಪಿ ಎಂಟರ್‌ಫ್ತೈಸಸ್‌ ಆಗುತ್ತಿರುವ ನಷ್ಟವೂ ಸರಿದೂಗಲಿದೆ. ಕಸ ಸಂಗ್ರಹಣೆಗೆ ನಗರಸಭೆಯಿಂದ ಸಂಪೂರ್ಣ ಜವಾಬ್ದಾರಿ ಎಸ್‌ಎಂಪಿ ಎಂಟರ್‌ಫ್ತೈಸಸ್‌ ಅವರದ್ದು ಆಗಿದೆ. ಎಚ್.ಎಚ್.ದೇವರಾಜ್‌ ಆರೋಪ ಮಾಡಿದ್ದಂತೆ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ನಗರಸಭೆ ಸದಸ್ಯ ರಾಜಶೇಖರ್‌ ಮಾತನಾಡಿ, ಎಸ್‌ಎಂಪಿ ಎಂಟರ್‌ಫ್ತೈಸಸ್‌ ಅವರು ಈಗಾಗಲೇ ತುಮಕೂರು, ವಿಜಯಪುರ ಜಿಲ್ಲೆಗಳಲ್ಲೂ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ ಉತ್ತಮವಾಗಿ ಕಸ ಸಂಗ್ರಹಣೆ ಮಾಡುತ್ತಿರುವುದನ್ನು ಗಮನಿಸಿ ಹಾಸನ ಜಿಲ್ಲೆಯಲ್ಲಿಯೂ ಎಸ್‌ಎಂಪಿ ಎಂಟರ್‌ಫ್ತೈಸಸ್‌ಗೆ ನೀಡಲು ಮುಂದಾಗಿದೆ. ಕಸದ ನಿರ್ವಹಣೆ ಜವಾಬ್ದಾರಿಯನ್ನು ಎಚ್.ಎಚ್. ದೇವರಾಜ್‌ ವಹಿಸಿಕೊಳ್ಳುವುದಾದರೇ ಕೌನ್ಸಿಲ್‌ನಲ್ಲಿ ತೀರ್ಮಾನಿಸಿ ಅವರು ಸೂಚಿಸಿದವರಿಗೆ ನೀಡಲಾಗುವುದು ಎಂದು ತಿರುಗೇಟು ನೀಡಿದರು. ನಗರಸಭೆ ಉಪಾಧ್ಯಕ್ಷ ಸುಧೀರ್‌, ಸದಸ್ಯರಾದ ಎಚ್.ಡಿ.ತಮಯ್ಯ, ಮುತ್ತಯ್ಯ, ದೇವರಾಜ್‌ ಶೆಟ್ಟಿ ಇದ್ದರು.

ಸುಮಾರು 3ಕೋಟಿ ರೂ. ತೆರಿಗೆಯನ್ನು ಅನೇಕ ಸರ್ಕಾರಿ ಇಲಾಖೆಗಳು ಬಾಕಿ ಇರಿಸಿಕೊಂಡಿವೆ. ಬಾಕಿ ಇರುವ ತೆರಿಗೆಯನ್ನು ಮುಂದಿನ ದಿನಗಳಲ್ಲಿ ವಸೂಲಿ ಮಾಡಲಾಗುವುದು.
•ಶಿಲ್ಪಾ ರಾಜಶೇಖರ್‌, ನಗರಸಭೆ ಅಧ್ಯಕ್ಷೆ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.