ಕೆಎಸ್ಸಾರ್ಟಿಸಿ ಸಿಬ್ಬಂದಿ ಶಿಸ್ತು ಮೈಗೂಡಿಸಿಕೊಳ್ಳಲಿ


Team Udayavani, Feb 8, 2019, 11:19 AM IST

chikk-2.jpg

ಚಿಕ್ಕಮಗಳೂರು: ಕೆಎಸ್ಸಾರ್ಟಿಸಿ ನಿಗಮದ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವಾಗ ಶಿಸ್ತು ಮೈಗೊಡಿಸಿಕೊಳ್ಳಬೇಕು ಎಂದು ಹಿರಿಯ ನ್ಯಾಯಾಧೀಶರಾದ ಬಸವರಾಜ್‌ ಚೆಂಗಟ್ಟಿ ಹೇಳಿದರು.

ನಗರದ ಹೊರವಲಯದಲ್ಲಿರುವ ಕೆಎಸ್ಸಾರ್ಟಿಸಿ ತಾಲೂಕು ಘಟಕದ ಡಿಪೋದಲ್ಲಿ ಆಯೋಜಿಸಿದ್ದ ಅಪಘಾತ ರಹಿತ ಚಾಲಕರಿಗೆ ಪುರಸ್ಕಾರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಂತಹ ಸನ್ಮಾನ ಸಮಾರಂಭ ಸನ್ಮಾನಿತರ ಕುಟುಂಬಕ್ಕೆ ಸಂತೋಷ ನೀಡುವುದಲ್ಲದೇ ಇಡೀ ಘಟಕಕ್ಕೆ ಸ್ಫೂರ್ತಿದಾಯಕ ಎಂದರು.

ಚಾಲಕರಿಗೆ ಕಾನೂನಿನ ಅರಿವುವಿರಬೇಕು. ವಾಹನ ಚಾಲನೆ ಮಾಡುವಾಗ ಸಹನೆ, ಶಿಸ್ತು ಅಳವಡಿಸಿಕೊಳ್ಳಬೇಕು. ಇದರಿಂದ ಸುರಕ್ಷತಾ ಚಾಲನೆ ಸಾಧ್ಯವಾಗುತ್ತದೆ. ಕಾನೂನಿನ ಅರಿವಿಲ್ಲದಿರುವುದು ಅಕ್ಷಮ್ಯ ಅಪರಾಧ. ಜನಸಾಮಾನ್ಯರು ಎಲ್ಲ ಕಾನೂನುಗಳನ್ನು ತಿಳಿದುಕೊಳ್ಳುವ ಅವಶ್ಯವಿಲ್ಲ. ಜೀವನಕ್ಕೆ ಅವಶ್ಯವಿರುವ ಪ್ರಾಥಮಿಕ ಕಾನೂನುಗಳ ಅರಿವಿರಬೇಕು ಎಂದು ಹೇಳಿದರು.

ಹಿಂದಿನ ಕಾಲದಲ್ಲಿ ಧರ್ಮ ಎಂಬುದನ್ನೇ ಆಧುನಿಕ ದಿನಮಾನಗಳಲ್ಲಿ ಕಾನೂನಾಗಿ ಮಾರ್ಪಾಡಿಸಲಾಗಿದೆ. ಬಸವಣ್ಣನವರ ಕಳಬೇಡ, ಕೊಲ್ಲಬೇಡ ವಚನ ಭಾರತ ದಂಡಸಂಹಿತೆಯ ಹಲವು ಕಲಂಗಳನ್ನು ಸೂಚಿಸುತ್ತದೆ ಎಂದರು.

ಸಹಾಯಕ ಅಭಿಯೋಜಕ ರಾಘವೇಂದ್ರರಾಯಕರ್‌ ಮಾತನಾಡಿ, ಸಾರಿಗೆ ಸಿಬ್ಬಂದಿ ಬಹು ಒತ್ತಡದ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಾರೆ. ಅಪಘಾತಗಳನ್ನು ಯಾರೆ ಚಾಲಕರಾದರೂ ಬೇಕೆಂದು ಮಾಡುವುದಿಲ್ಲ. ಆದರೆ, ಕೆಲವು ಪ್ರಕರಣಗಳಲ್ಲಿ ತಮ್ಮದಲ್ಲ ತಪ್ಪಿಗೆ ಕೆಎಸ್‌ಆರ್‌ಟಿಸಿಯ ಚಾಲಕ ಸಿಬ್ಬಂದಿ ಶಿಕ್ಷೆ ಅನುಭವಿಸಬೇಕಾದುದು ವಿಷಾದನೀಯ ಎಂದು ವಿಷಾದ ವ್ಯಕ್ತಪಡಿಸಿದರು.

ವಕೀಲರ ಸಂಘದ ಜಿಲ್ಲಾಧ್ಯಕ್ಷ ಎಸ್‌.ಎಸ್‌. ವೆಂಕಟೇಶ್‌ ಮಾತನಾಡಿ, ಚಾಲಕ ಎಂಬುದು ಕೇವಲ ಹುದ್ದೆಯಲ್ಲ. ಅದು ಹಲವು ಜನರ ಕನಸು, ಭವಿಷ್ಯ, ಬದುಕುಗಳನ್ನು ಸುರಕ್ಷತೆಯಿಂದ ಸಾಗಿಸುವ ಮಹೋನ್ನತ ಜವಾಬ್ದಾರಿ. ಅದನ್ನು ನಿರ್ಲಕ್ಷ ್ಯತೆಯಿಂದ ಕಾರ್ಯನಿರ್ವಹಿಸಿದ್ದಲ್ಲಿ ಹಲವು ಮಂದಿಯ ಭವಿಷ್ಯ, ಕನಸು ಆಶೋತ್ತರಗಳು ಮಣ್ಣುಪಾಲಾಗುವ ಸಂಭವವಿದ್ದು, ಚಾಲಕರು ಕರ್ತವ್ಯ ನಿರ್ವಹಿಸಿದ ಸಂದರ್ಭದಲ್ಲಿ ಜಾಗೃತಿ ವಹಿಸಬೇಕು ಎಂದರು.

ಕೆಎಸ್ಸಾರ್ಟಿಸಿ ಅಧಿಕಾರಿ ನಾಗರಾಜು ಮೂರ್ತಿ ಮಾತನಾಡಿ, ಚಿಕ್ಕಮಗಳೂರು ಘಟಕ ಆರಂಭವಾಗಿಂದಲೂ ಅಪಘಾತ ರಹಿತ ಚಾಲನೆ, ತಾಂತ್ರಿಕ ಪರಿಣಿತಿ, ವೈಜ್ಞಾನಿಕ ಯೋಜನೆಗಳ ಅನುಷ್ಠಾನ ಸೇರಿದಂತೆ ಹಲವು ವಿಭಾಗಗಳಲ್ಲಿ ಅತ್ಯುತ್ನತ ಸೇವೆ ಸಲ್ಲಿಸಿದ್ದಕ್ಕಾಗಿ ರಾಜ್ಯ ಮಟ್ಟದ 8 ಚಿನ್ನದ ಪದಕ ಮತ್ತು 131 ಬೆಳ್ಳಿ ಪದಕಗಳನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಜಿಲ್ಲಾ ಘಟಕ ಪ್ರತಿಷ್ಠಿತ ರಾಷ್ಟ್ರಪತಿ ಪದಕಗಳನ್ನು ಸತತವಾಗಿ ತನ್ನ ಮಡಿಲಿಗೆ ಹಾಕಿಕೊಂಡಿದೆ ಎಂದರು.

ಇಲಾಖೆಯ ವಾಹನಗಳ ಅಪಘಾತಗಳ ಸಂಖ್ಯೆ ಇಳಿಮುಖಗೊಳಿಸಲು ಪ್ರತಿವರ್ಷ ರಸ್ತೆ ಸುರಕ್ಷತಾ ದಿನ ಆಚರಿಸಿ ಅಪಘಾತ ತಡೆಗಟ್ಟಲು ಜಾಗೃತಿ ಮೂಡಿಸುವುದು ಮತ್ತು ವೈಜ್ಞಾನಿಕ ಯೋಜನೆಗಳನ್ನು ಜಾರಿಗೊಳಿಸುವುದು, ಚಾಲಕರಿಗೆ ವೈದ್ಯಕೀಯ ತಪಾಸಣೆ, ವಾಹನಗಳ ತಾಂತ್ರಿಕ ದೋಷ ನಿವಾರಣೆ ಸೇರಿದಂತೆ ಹಲವು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತದೆ ಎಂದರು.

ವಿಭಾಗೀಯ ನಿಯಂತ್ರಣಾಧಿಕಾರಿ ಅನಿಲ್‌ಕುಮಾರ್‌, ಅಧಿಕಾರಿಗಳಾದ ಅರುಣ್‌, ಸುಮಾ ಇತರರಿದ್ದರು.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.