ವಿಐಎಸ್ಎಲ್ ಉತ್ಸವದಲ್ಲಿ ಮನ ಸೆಳೆದ ಹಾಸ್ಯ ನಾಟಕ
Team Udayavani, Feb 11, 2019, 9:16 AM IST
ಭದ್ರಾವತಿ: ವಿಐಎಸ್ಎಲ್ ಉತ್ಸವದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಕಿರುತೆರೆ ನಟ, ರಂಗ ಕಲಾವಿದ ಅಪರಂಜಿ ಶಿವರಾಜ್ ನೇತೃತ್ವದ ತಂಡ ವಿಭಿನ್ನ ಬಗೆಯ ಕಾರ್ಯಕ್ರಮಗಳೊಂದಿಗೆ ಪ್ರೇಕ್ಷಕರ ಗಮನ ಸೆಳೆಯಿತು.
ಮಿಲನ ಸಾಂಸ್ಕೃತಿಕ ವೇದಿಕೆ ಸಹಕಾರದೊಂದಿಗೆ ಅಪರಂಜಿ ಅಭಿನಯ ಶಾಲೆಯ ಕಲಾವಿದರು ಹಾಡು, ನೃತ್ಯ, ಏಕಪಾತ್ರಾಭಿನಯ ಹಾಗೂ ನಾಟಕ ಪ್ರದರ್ಶನಗಳನ್ನು ನಡೆಸಿಕೊಟ್ಟರು.
ಅಪರಂಜಿ ಶಿವರಾಜ್ ನಿರ್ದೇಶನದ ಕುರಿಗಳು ಸಾರ್ ಕುರಿಗಳು ಗ್ರಾಮೀಣ ಸೊಗಡಿನ ಹಾಸ್ಯ ನಾಟಕ ಪ್ರೇಕ್ಷಕರ ಮನಸೂರೆಗೊಂಡಿತು. ಚುನಾವಣೆ ಸಂದರ್ಭದಲ್ಲಿ ರಾಜಕೀಯ ನಾಯಕರ ಮಾತುಗಳು, ನಡವಳಿಕೆಗಳು ಹಾಗೂ ಕಾರ್ಯ ಚಟುವಟಿಕೆಗಳು ಮತ್ತು ಮತದಾರರಿಗೆ ನೀಡುವ ಅಮಿಷಗಳ ಕುರಿತು ಕಲಾವಿದರು ತಮ್ಮ ಅಭಿನಯಗಳ ಮೂಲಕ ಜಾಗೃತಿ ಮೂಡಿಸಿದರು.
ಇಂದು ಎರಡು ನಾಟಕ ಪ್ರದರ್ಶನ : ನಗರದ ಶಾಂತಲಾ ಕಲಾ ವೇದಿಕೆ ವತಿಯಿಂದ ಎಂಪಿಎಂ ಲಲಿತ ಕಲಾ ಸಂಘದ ಸಹಕಾರದೊಂದಿಗೆ ಫೆ.11ರಂದು ಸಂಜೆ 6.30ರಿಂದ ವಿಐಎಸ್ಎಲ್ ಉತ್ಸವದಲ್ಲಿ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ಶ್ರೀ ಮುರುಘಾ ಶರಣರು ರಚಿಸಿರುವ ಮೂಢನಂಬಿಕೆಯ ವಿರುದ್ಧ ತಿಳುವಳಿಕೆ ನೀಡುವ ‘ಹೊಯ್ದಾಟ’ ಮತ್ತು ಹಿರಿಯ ನಾಗರಿಕರ ಸಮಸ್ಯ ಮತ್ತು ಅವರು ಅನುಭವಿಸುವ ಯಾತನೆ, ನೋವು-ನಲಿವುಗಳನ್ನು ಬಿಂಬಿಸುವ ‘ಸಂಧ್ಯಾ ಪ್ರವರ್ತತೆ’ ಎರಡು ನಾಟಕಗಳು ಪ್ರದರ್ಶನಗೊಳ್ಳಲಿವೆ. ರಂಗದಾಸೋಹಿ ಎಸ್.ಜಿ. ಶಂಕರಮೂರ್ತಿಯವರು ರಚನೆ, ವಿನ್ಯಾಸ, ಸಂಗೀತ, ನಿರ್ದೇಶನ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ