ಆಪರೇಷನ್ ಕಮಲದಿಂದ ರಾಜಕೀಯ ವ್ಯವಸ್ಥೆ ಹಾಳು
Team Udayavani, Feb 17, 2019, 10:59 AM IST
ಶೃಂಗೇರಿ: ಸಮ್ಮಿಶ್ರ ಸರಕಾರ ನೀಡಿರುವ ಬಜೆಟ್ನಲ್ಲಿ ಎಲ್ಲಾ ವರ್ಗದವರಿಗೂ ಆದ್ಯತೆ ನೀಡಲಾಗಿದೆ. ಜಿಲ್ಲೆಗು ಪ್ರಾಶಸ್ತಯ ನೀಡಲಾಗಿದೆ ಎಂದು ಎಂಎಡಿಬಿ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಅವರು ಪಟ್ಟಣದ ಶಾರದಾ ನಗರದಲ್ಲಿರುವ ಕಾಂಗ್ರೆಸ್ ಭವನದಲ್ಲಿ ಲೋಕಸಭಾ ಚುನಾವಣೆ ಪೂರ್ವಭಾವಿಯಾಗಿ ಶನಿವಾರ ಏರ್ಪಡಿಸಿದ್ದ ಪಕ್ಷದ ಮುಖಂಡರ ಸಭೆಯಲ್ಲಿ ಮಾತನಾಡಿದರು. ಆಪರೇಷನ್ ಕಮಲವು ರಾಜಕೀಯ ವ್ಯವಸ್ಥೆಯನ್ನೇ ಹಾಳು ಮಾಡಿದೆ. ಬಿಜೆಪಿಯ ಬಗ್ಗೆ ಜನರ ಅಸಹನೆ ಇದೆ. ನಮ್ಮ ಕ್ಷೇತ್ರದ ಲೋಕಸಭಾ ಸದಸ್ಯರು ಕ್ಷೇತ್ರ ಮರೆತಿದ್ದಾರೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ| ಡಿ.ಎಲ್. ವಿಜಯಕುಮಾರ್ ಮಾತನಾಡಿ, ಚುನಾವಣಾ ಪೂರ್ವದಲ್ಲಿ ನೀಡಿದ್ದ ಬಹುತೇಕ ಭರವಸೆ ಈಡೇರಿಸಿಲ್ಲ. ಇದರಿಂದ ಜನರ ವಿಶ್ವಾಸ ಕಳೆದುಕೊಂಡಿದೆ. ರೈತರ, ಕಾರ್ಮಿಕರ, ಜನ ಸಾಮಾನ್ಯರ ಕಷ್ಟ ಕೇಂದ್ರ ಸರ್ಕಾರ ಅರಿತಿಲ್ಲ ರೈತರಿಗೆ ದಿನಕ್ಕೆ 17 ರೂ. ಘೋಷಣೆ ಮಾಡಿ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.
ಮತದಾರರು ಈ ಬಾರಿ ಬದಲಾವಣೆ ಬಯಸಿದ್ದು, ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿಯಾದರೂ ಕಾರ್ಯಕರ್ತರು ಅವರ ಗೆಲುವಿಗಾಗಿ ಪ್ರಾಮಾಣಿಕವಾಗಿ ದುಡಿಯಲಿದ್ದಾರೆ. ಉಡುಪಿ- ಚಿಕ್ಕಮಗಳೂರು ಕ್ಷೇತ್ರವಾಗಿರುವ ಲೋಕಸಭಾ ಸ್ಥಾನಕ್ಕೆ ಈ ಬಾರಿ ಚಿಕ್ಕಮಗಳೂರು ಜಿಲ್ಲೆಯಿಂದಲೇ ಅಭ್ಯರ್ಥಿಯ ಘೋಷಣೆ ಮಾಡಬೇಕು ಎಂಬುದು ಇಲ್ಲಿನ ಕಾರ್ಯಕರ್ತರ ಬೇಡಿಕೆಯಾಗಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಟರಾಜ್ ಅಧ್ಯಕ್ಷತೆ ವಹಿಸಿದ್ದರು. ಎಂಎಡಿಬಿ ಮಾಜಿ ಅಧ್ಯಕ್ಷೆ ಬಿ.ಸಿ.ಗೀತಾ, ಕಾಂಗ್ರೆಸ್ ಮುಖಂಡರಾದ ಶಿವಾನಂದ, ಎಚ್.ಎಂ.ಸತೀಶ್, ಡಾ|ಅಂಶುಮಂತ್, ಸೀತಾಲಕ್ಷ್ಮೀ, ಶಕೀಲಾ, ಕೆ.ಆರ್.ವೆಂಕಟೇಶ್, ಕಾನುವಳ್ಳಿ ಕೃಷ್ಣಪ್ಪ ಗೌಡ, ಅಗಸವಳ್ಳಿ ನಾರಾಯಣ, ಶಿವಮೂರ್ತಿ ಮುಂತಾದವರು ಇದ್ದರು. ಸಭೆಗೂ ಮುನ್ನ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕಾಫಿ ಬೆಳೆಗಾರರ ಸಮಸ್ಯೆ, ಅಡಕೆ ಸಮಸ್ಯೆ, ಕಸ್ತೂರಿ ರಂಗನ್ ವರದಿ, ಹುಲಿ ಯೋಜನೆ ಸಹಿತ ಅನೇಕ ಜ್ವಲಂತ ಸಮಸ್ಯೆ ಇದ್ದರೂ,ನಮ್ಮ ಸಂಸದರು ಒಂದು ಬಾರಿಯೂ ಲೋಕಸಭೆಯಲ್ಲಿ ಜಿಲ್ಲೆ ಪರ ಧ್ವನಿ ಎತ್ತಲಿಲ್ಲ. ಜಿಲ್ಲೆಯ ಜನರೊಂದಿಗೆ ಇರುವ ಸದಸ್ಯರು ನಮಗೆ ಬೇಕಿದೆ. ಕಾಂಗ್ರೆಸ್ ಅಂತಹ ಅಭ್ಯರ್ಥಿಯನ್ನೇ ಸ್ಪರ್ಧೆಗೆ ಇಳಿಸಲಿದ್ದು, ಕಾರ್ಯಕರ್ತರು ಪಕ್ಷದ ಅಭ್ಯರ್ಥಿ ಪರವಾಗಿ ಶ್ರಮಿಸಬೇಕು
ಟಿ.ಡಿ. ರಾಜೇಗೌಡ, ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ