ಹುತ್ತಕ್ಕೆ ಹಾಲೆರೆಯದೆ ಮಕ್ಕಳಿಗೆ ನೀಡಿ: ಶಿಮುಶ


Team Udayavani, Jul 29, 2017, 2:41 PM IST

29-CIT-3.jpg

ಚಿತ್ರದುರ್ಗ: ನಿರ್ಜಿವ ವಸ್ತುಗಳಾದ ನಾಗರಕಲ್ಲು, ಹುತ್ತಕ್ಕೆ ಹಾಲೆರೆಯದೆ ರೋಗಿಗಳಿಗೆ, ಬಡವರಿಗೆ, ಶಾಲಾ ಮಕ್ಕಳಿಗೆ ವಿತರಿಸುವ ಮೂಲಕ ನಾಗರಪಂಚಮಿಯನ್ನು ಬಸವ ಪಂಚಮಿಯಾಗಿ ಹಾಗೂ ಹಾಲುಣಿಸುವ ಹಬ್ಬವನ್ನಾಗಿ ಆಚರಿಸಬೇಕು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು
ಹೇಳಿದರು.

ಇಲ್ಲಿನ ಬಸವಕೇಂದ್ರ ಶ್ರೀ ಮುರುಘಾಮಠ ಹಾಗೂ ರೋಟರಿ ಕ್ಲಬ್‌ ಚಿತ್ರದುರ್ಗ ಸಹಯೋಗದಲ್ಲಿ ಪಿ ಆ್ಯಂಡ್‌ ಟಿ ಕ್ವಾಟ್ರರ್ಸ್‌ ಹಿಂಭಾಗದ ಮೈಲಾರಲಿಂಗೇಶ್ವರ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶುಕ್ರವಾರ ನಡೆದ ನಾಗರಪಂಚಮಿ ನಿಮಿತ್ತ ಶಾಲಾ ಮಕ್ಕಳಿಗೆ ಹಾಲು ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾಡಿನ ಹಲವು ಸಂಘಟನೆಗಳು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಆರೋಗ್ಯಕರ ಬೆಳವಣಿಗೆ. ಬಹಳಷ್ಟು ಜನರು ಹಾಲನ್ನು ಮಣ್ಣು ಪಾಲು ಮಾಡುತ್ತಾರೆ. ಪೌಷ್ಟಿಕವಾದ ಈ ಹಾಲನ್ನು ಮಕ್ಕಳಿಗೆ ನೀಡಬೇಕು. ಸರ್ಕಾರ ಅನ್ನಭಾಗ್ಯದ
ಜೊತೆಗೆ ಕ್ಷೀರಭಾಗ್ಯ ಕೊಟ್ಟಿರುವುದು ಒಳ್ಳೆಯ ಕಾರ್ಯವಾಗಿದೆ. ಇದರಿಂದ ಮಕ್ಕಳಿಗೆ ಪೌಷ್ಟಿಕಾಂಶ ದೊರೆಯುತ್ತದೆ ಎಂದರು.

ಶಿವಮೊಗ್ಗ ಬಸವಕೇಂದ್ರದ ಬಸವಮರುಳಸಿದ್ಧ ಸ್ವಾಮೀಜಿ ಮಾತನಾಡಿ, ಭಕ್ತಿಯಿಂದ ಸ್ವೀಕರಿಸುವ ಪ್ರಸಾದ ಹಾಳಾಗಬಾರದು. 25-30ವರ್ಷಗಳಿಂದ ಶ್ರೀಗಳು ಈ ವಿಚಾರವಾಗಿ ಜಾಗೃತಿ ಮೂಡಿಸುತ್ತಿದ್ದಾರೆ ಎಂದರು. ನಿವೃತ್ತ ಐಎಎಸ್‌ ಅಧಿಕಾರಿ ಕೆ. ಅಮರನಾರಾಯಣ ಮಾತನಾಡಿ, ಯಾವುದು ಹಾಲನ್ನು ಕುಡಿಯುವುದಿಲ್ಲವೋ ಅದಕ್ಕೆ ಹಾಲನ್ನು ನೀಡುತ್ತಿದ್ದೇವೆ. ಕ್ರಾಂತಿಕಾರಿ ಬದಲಾವಣೆ ಮಾಡುತ್ತಿರುವ ಶ್ರೀಗಳು ಅನುಪಯುಕ್ತ ಪದ್ಧತಿಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ ಎಂದರು. 

ಮುಸ್ಲಿಂ ಧರ್ಮಗುರು ಸರ್‌ಖಾಜಿ ಶಂಷುದ್ದೀನ್‌ ಮಾತನಾಡಿ, ಕಂದಾಚಾರಗಳನ್ನು ಆಚರಿಸದೆ ಹಾಲು ಕುಡಿಯದಿರುವ ಹಾವಿಗೆ ಬದಲಾಗಿ ಮಕ್ಕಳಿಗೆ, ರೋಗಿಗಳಿಗೆ, ಬಡವರಿಗೆ ಹಾಲನ್ನು ಕೊಡಿ. ಪಟಾಕಿ ಹಚ್ಚುವ ಬದಲು ಮನೆಯಲ್ಲಿ ದೀಪ ಹಚ್ಚಬೇಕು ಎಂದರು. ಫಾದರ್‌ ಎಂ.ಎಸ್‌. ರಾಜು ಮಾತನಾಡಿದರು. ಪ್ರೌಢಶಾಲಾ ವಿಭಾಗದ ಸಂಯೋಜನಾಧಿಕಾರಿ ಶಶಿಕಲಾ, ರೋಟರಿ ಕ್ಲಬ್‌ ಅಧ್ಯಕ್ಷ ವಿಶ್ವನಾಥ್‌ ಮಾತನಾಡಿದರು. ಬಸವ ಮಾಚಿದೇವ ಸ್ವಾಮೀಜಿ, ಜಿಲ್ಲಾ ಶರಣಸಾಹಿತ್ಯ ಪರಿಷತ್‌ ಅಧ್ಯಕ್ಷ ಕೆ.ಎಂ. ವೀರೇಶ್‌, ವೀರಶೈವ ಸಮಾಜದ ಕಾರ್ಯದರ್ಶಿ ಜಿ.ಸಿ. ಮಲ್ಲಿಕಾರ್ಜುನ್‌, ರೋಟರಿ ವೀರೇಶ್‌, ಗಾಯತ್ರಿ ಶಿವರಾಮ್‌, ಕೆಇಬಿ ಷಣ್ಮುಖಪ್ಪ, ಷರೀಫಾಬಿ, ಕೇತೇಶ್ವರ ಟ್ರಸ್ಟ್‌ ಪ್ರಹ್ಲಾದಪ್ಪ ಮತ್ತು ಸಹನಾ ಮಾತೃಶ್ರೀ ಸಂಸ್ಥೆಯವರು ಇದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.