ಹುತ್ತಕ್ಕೆ ಹಾಲೆರೆಯದೆ ಮಕ್ಕಳಿಗೆ ನೀಡಿ: ಶಿಮುಶ


Team Udayavani, Jul 29, 2017, 2:41 PM IST

29-CIT-3.jpg

ಚಿತ್ರದುರ್ಗ: ನಿರ್ಜಿವ ವಸ್ತುಗಳಾದ ನಾಗರಕಲ್ಲು, ಹುತ್ತಕ್ಕೆ ಹಾಲೆರೆಯದೆ ರೋಗಿಗಳಿಗೆ, ಬಡವರಿಗೆ, ಶಾಲಾ ಮಕ್ಕಳಿಗೆ ವಿತರಿಸುವ ಮೂಲಕ ನಾಗರಪಂಚಮಿಯನ್ನು ಬಸವ ಪಂಚಮಿಯಾಗಿ ಹಾಗೂ ಹಾಲುಣಿಸುವ ಹಬ್ಬವನ್ನಾಗಿ ಆಚರಿಸಬೇಕು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು
ಹೇಳಿದರು.

ಇಲ್ಲಿನ ಬಸವಕೇಂದ್ರ ಶ್ರೀ ಮುರುಘಾಮಠ ಹಾಗೂ ರೋಟರಿ ಕ್ಲಬ್‌ ಚಿತ್ರದುರ್ಗ ಸಹಯೋಗದಲ್ಲಿ ಪಿ ಆ್ಯಂಡ್‌ ಟಿ ಕ್ವಾಟ್ರರ್ಸ್‌ ಹಿಂಭಾಗದ ಮೈಲಾರಲಿಂಗೇಶ್ವರ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶುಕ್ರವಾರ ನಡೆದ ನಾಗರಪಂಚಮಿ ನಿಮಿತ್ತ ಶಾಲಾ ಮಕ್ಕಳಿಗೆ ಹಾಲು ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಾಡಿನ ಹಲವು ಸಂಘಟನೆಗಳು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಆರೋಗ್ಯಕರ ಬೆಳವಣಿಗೆ. ಬಹಳಷ್ಟು ಜನರು ಹಾಲನ್ನು ಮಣ್ಣು ಪಾಲು ಮಾಡುತ್ತಾರೆ. ಪೌಷ್ಟಿಕವಾದ ಈ ಹಾಲನ್ನು ಮಕ್ಕಳಿಗೆ ನೀಡಬೇಕು. ಸರ್ಕಾರ ಅನ್ನಭಾಗ್ಯದ
ಜೊತೆಗೆ ಕ್ಷೀರಭಾಗ್ಯ ಕೊಟ್ಟಿರುವುದು ಒಳ್ಳೆಯ ಕಾರ್ಯವಾಗಿದೆ. ಇದರಿಂದ ಮಕ್ಕಳಿಗೆ ಪೌಷ್ಟಿಕಾಂಶ ದೊರೆಯುತ್ತದೆ ಎಂದರು.

ಶಿವಮೊಗ್ಗ ಬಸವಕೇಂದ್ರದ ಬಸವಮರುಳಸಿದ್ಧ ಸ್ವಾಮೀಜಿ ಮಾತನಾಡಿ, ಭಕ್ತಿಯಿಂದ ಸ್ವೀಕರಿಸುವ ಪ್ರಸಾದ ಹಾಳಾಗಬಾರದು. 25-30ವರ್ಷಗಳಿಂದ ಶ್ರೀಗಳು ಈ ವಿಚಾರವಾಗಿ ಜಾಗೃತಿ ಮೂಡಿಸುತ್ತಿದ್ದಾರೆ ಎಂದರು. ನಿವೃತ್ತ ಐಎಎಸ್‌ ಅಧಿಕಾರಿ ಕೆ. ಅಮರನಾರಾಯಣ ಮಾತನಾಡಿ, ಯಾವುದು ಹಾಲನ್ನು ಕುಡಿಯುವುದಿಲ್ಲವೋ ಅದಕ್ಕೆ ಹಾಲನ್ನು ನೀಡುತ್ತಿದ್ದೇವೆ. ಕ್ರಾಂತಿಕಾರಿ ಬದಲಾವಣೆ ಮಾಡುತ್ತಿರುವ ಶ್ರೀಗಳು ಅನುಪಯುಕ್ತ ಪದ್ಧತಿಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ ಎಂದರು. 

ಮುಸ್ಲಿಂ ಧರ್ಮಗುರು ಸರ್‌ಖಾಜಿ ಶಂಷುದ್ದೀನ್‌ ಮಾತನಾಡಿ, ಕಂದಾಚಾರಗಳನ್ನು ಆಚರಿಸದೆ ಹಾಲು ಕುಡಿಯದಿರುವ ಹಾವಿಗೆ ಬದಲಾಗಿ ಮಕ್ಕಳಿಗೆ, ರೋಗಿಗಳಿಗೆ, ಬಡವರಿಗೆ ಹಾಲನ್ನು ಕೊಡಿ. ಪಟಾಕಿ ಹಚ್ಚುವ ಬದಲು ಮನೆಯಲ್ಲಿ ದೀಪ ಹಚ್ಚಬೇಕು ಎಂದರು. ಫಾದರ್‌ ಎಂ.ಎಸ್‌. ರಾಜು ಮಾತನಾಡಿದರು. ಪ್ರೌಢಶಾಲಾ ವಿಭಾಗದ ಸಂಯೋಜನಾಧಿಕಾರಿ ಶಶಿಕಲಾ, ರೋಟರಿ ಕ್ಲಬ್‌ ಅಧ್ಯಕ್ಷ ವಿಶ್ವನಾಥ್‌ ಮಾತನಾಡಿದರು. ಬಸವ ಮಾಚಿದೇವ ಸ್ವಾಮೀಜಿ, ಜಿಲ್ಲಾ ಶರಣಸಾಹಿತ್ಯ ಪರಿಷತ್‌ ಅಧ್ಯಕ್ಷ ಕೆ.ಎಂ. ವೀರೇಶ್‌, ವೀರಶೈವ ಸಮಾಜದ ಕಾರ್ಯದರ್ಶಿ ಜಿ.ಸಿ. ಮಲ್ಲಿಕಾರ್ಜುನ್‌, ರೋಟರಿ ವೀರೇಶ್‌, ಗಾಯತ್ರಿ ಶಿವರಾಮ್‌, ಕೆಇಬಿ ಷಣ್ಮುಖಪ್ಪ, ಷರೀಫಾಬಿ, ಕೇತೇಶ್ವರ ಟ್ರಸ್ಟ್‌ ಪ್ರಹ್ಲಾದಪ್ಪ ಮತ್ತು ಸಹನಾ ಮಾತೃಶ್ರೀ ಸಂಸ್ಥೆಯವರು ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.